ಇತಿಹಾಸ ಪ್ರಸಿದ್ದ ಗೂಳೂರು ಗಣೇಶನಿಗೆ ಪೂಜೆ ಆರಂಭ
ತುಮಕೂರು, ನವೆಂಬರ್ 02- ಇತಿಹಾಸ ಪ್ರಸಿದ್ದ ಗೂಳೂರು ಗಣಪತಿಗೆ ದೀಪಾವಳಿಯಿಂದ ಪೂಜೆ ಶುರುವಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ವಿಗ್ರಹವನ್ನು ಪ್ರತಿಷ್ಠಾಪಿಸಿದ್ದು, ಪ್ರತಿನಿತ್ಯ ಸ್ವಾಮಿಯ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.
ಪುರಾತನ ಇತಿಹಾಸವಿರುವ ಗೂಳೂರು ಗಣಪತಿ ಉತ್ಸವ ನಾಡಿನೆಲ್ಲೆಡೆ ಪ್ರಸಿದ್ದಿ ಹೊಂದಿದೆ. ಸಂಪ್ರದಾಯದಂತೆ ಆಗಸ್ಟ್ ತಿಂಗಳಲ್ಲಿ ಎಲ್ಲೆಡೆ ಗಣಪತಿ ಪ್ರತಿಷ್ಠಾಪನೆ ನಡೆದರೆ, ಅಲ್ಲಿ ಬಾದ್ರಪದ ಚೌತಿಯಿಂದ ಗಣೇಶನ ಪ್ರತಿಮೆ ಮಾಡಲು ಪ್ರಾರಂಭಿಸಲಾಗುತ್ತದೆ.

ಗೂಳೂರು ಕೆರೆಯಿಂದ ಮಣ್ಣು ತಂದು ಹದಗೊಳಿಸಿ ವಿಗ್ರಹ ತಯಾರಿಸಲು ಪ್ರಾರಂಭಿಸಲಾಗುತ್ತದೆ. ವಿಗ್ರಹವನ್ನು ಅನಾದಿಕಾಲದಿಂದಲೂ ಮಾಡಿಕೊಂಡು ಬಂದಿರುವ ವಂಶಸ್ಥ ಕಲಾವಿದರೇ ತಯಾರಿಸುತ್ತಾರೆ. ದೀಪಾವಳಿ ಹಬ್ಬ ಒಂದೆರಡು ದಿನ ಬಾಕಿ ಇರುವಂತೆ ಗಣೇಶ ವಿಗ್ರಹ ನಿರ್ಮಾಣ ಮುಗಿದು ಬಣ್ಣ ಹಚ್ಚುವ ಕಾರ್ಯ ಪ್ರಾರಂಭವಾಗುತ್ತದೆ. ದೀಪಾವಳಿ ಹಬ್ಬದ ದಿನ ಗಣೇಶಮೂರ್ತಿಗೆ ಕಣ್ಣು ಧರಿಸಿ ಪೂಜೆ ಆರಂಭಿಸಲಾಗುತ್ತದೆ. ಇದು ಪುರಾತನ ಕಾಲದಿಂದ ನಡೆದು ಬಂದಿರುವ ಸಂಪ್ರದಾಯ.
ಸಂಪ್ರದಾಯದಂತೆ ದೀಪಾವಳಿಯಿಂದ ಗೂಳೂರು ಗಣಪನ ಪೂಜೆ ಆರಂಭಗೊಂಡಿದ್ದು, ಡಿ. 2ರವರೆಗೆ ನಿತ್ಯ ಪೂಜೆ ನಡೆಯಲಿದೆ. ಪ್ರತಿವರ್ಷದಂತೆ ನಿತ್ಯ ಒಬ್ಬೊಬ್ಬ ಭಕ್ತರು ಪೂಜಾ ಕೈಂಕರ್ಯ ನಡೆಸಿಕೊಂಡು ಬಂದಿದ್ದು ಈ ವರ್ಷವೂ ಅದರಂತೆಯೇ ನಡೆಯಲಿದೆ. ಡಿ.3 ರಂದು ಗಣಪತಿಯವರ ವಿಸರ್ಜನೆ ಪ್ರಾರಂಭಿಸಿ ಡಿ.4 ರಂದು ವಿಸರ್ಜನಾ ಮಹೋತ್ಸವ ಪೂರ್ಣವಾಗುತ್ತದೆ..
ಸುಮಾರು ಒಂದು ತಿಂಗಳಿಗೂ ಅಧಿಕ ಕಾಲ ದರ್ಶನಕ್ಕೆ ಇರಲಿರುವ ಇತಿಹಾಸ ಪ್ರಸಿದ್ದ ಗೂಳೂರು ಗಣೇಶನನ್ನು ನೋಡಲು ರಾಜ್ಯದ ಎಲ್ಲೆಡೆಯಿಂದ ಆಗಮಿಸುತ್ತಾರೆ. ಜಾತ್ರೆಯಲ್ಲಿ ಅನೇಕ ಭಕ್ತರು ಪಾಲ್ಗೊಂಡು ಗಣೇಶನಲ್ಲಿ ತಮ್ಮ ಭಕ್ತಿ ಸಮರ್ಪಣೆ ಮಾಡುತ್ತಾರೆ. ಈ ವರ್ಷವೂ ವಿಜೃಂಭಣೆಯಿಂದ ಮಹೋತ್ಸವಗಳು ನೆರವೇರಲಿದ್ದು ಅನೇಕ ಗಣ್ಯರು, ನಾಗರೀಕರು ಭಾಗವಹಿಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications