ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಡಿಕೆ ಮರ ಕಡಿದ ಅಧಿಕಾರಿಗಳನ್ನು ಅಮಾನತುಗೊಳಿಸಿ- H.D.ಕುಮಾರಸ್ವಾಮಿ

|
Google Oneindia Kannada News

ತುಮಕೂರು, ಮಾರ್ಚ್ 9: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಜಾಮೀನು ವಿವಾದ ಇದೆ ಎನ್ನುವ ಕಾರಣಕ್ಕೆ 170ಕ್ಕೂ ಹೆಚ್ಚು ಅಡಿಕೆ ಮರ ಹಾಗೂ 25 ತೆಂಗಿನ ಮರವನ್ನು ಅಧಿಕಾರಿಗಳು ಕಡಿದು ಹಾಕಿದ್ದರು. ಈ ಘಟನೆಗೆ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿತ್ತು.

ಇದೀಗ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಅಧಿಕಾರಿಗಳ ವರ್ತನೆಯನ್ನು ಖಂಡಿಸಿರುವ ಅವರು ಬೀದಿಗೆ ಬಿದ್ದ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಎಂದಿದ್ದಾರೆ.

170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ 170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ

HD Kumaraswamy Tweets About Areca Trees Chopped Incident

''ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತಿಪ್ಪೂರು ಗ್ರಾಮದ ರೈತರ ನೂರಾರು ಅಡಕೆ ಹಾಗೂ ತೆಂಗಿನ ಮರಗಳನ್ನು ಒತ್ತುವರಿ ತೆರವು ಮಾಡುವ ನೆಪದಲ್ಲಿ ಕತ್ತರಿಸಿ ಹಾಕಿರುವುದು ಖಂಡನೀಯ. ರೈತರ ಬದುಕಿಗೆ ಕೊಳ್ಳಿ ಇಟ್ಟ ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಬೇಕು. ಬೀದಿಗೆ ಬಿದ್ದ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು.'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

''ಬೆಂಗಳೂರಿನಲ್ಲಿ ಸಾವಿರಾರು ಮರಗಳನ್ನು ಕತ್ತರಿಸಿ, ಕೆರೆ ಕುಂಟೆಗಳನ್ನು ನುಂಗಿ ಬಡಾವಣೆಗಳನ್ನು ಮಾಡಿ ಕೋಟ್ಯಾಧೀಶರಾದವರ ತಂಟೆಗೆ ಹೋಗದ ಅಧಿಕಾರಿಗಳು ಬಡ ರೈತರ ಮೇಲೆ ಸವಾರಿ ಮಾಡುತ್ತಿರುವುದು ಸರಿಯೇ?'' ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಎರಡು ತಿಂಗಳ ಬಳಿಕ ನೋಯ್ಡಾ-ಫರಿದಾಬಾದ್ ರಸ್ತೆ ಸಂಚಾರಕ್ಕೆ ಮುಕ್ತಎರಡು ತಿಂಗಳ ಬಳಿಕ ನೋಯ್ಡಾ-ಫರಿದಾಬಾದ್ ರಸ್ತೆ ಸಂಚಾರಕ್ಕೆ ಮುಕ್ತ

ಗುಬ್ಬಿಯ ತಿಪ್ಪೂರು ಎಂಬ ಗ್ರಾಮದಲ್ಲಿ ಸಿದ್ದಮ್ಮ ಅಡಿಕೆ ಹಾಗೂ ತೆಂಗಿನ ಮರ ಬೆಳೆಸಿದ್ದರು. ಆದರೆ, ಇದು ದೇವಸ್ಥಾನಕ್ಕೆ ಸೇರಿದ್ದ ಜಾಗ ಎಂದು ಅಲ್ಲಿನ ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರು ಮರ ಕಡಿದು ಹಾಕಿದ್ದಾರೆ. ತಾನು ಸಾಕಿದ ಮರಗಳು ಕಣ್ಣು ಮುಂದೆಯೇ ನೆಲಕ್ಕೆ ಉರುಳಿದ್ದನ್ನು ನೋಡಿದ ಸಿದ್ದಮ್ಮ ಕಣ್ಣೀರು ಹಾಕಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

English summary
HD Kumaraswamy tweets about areca trees chopped incident. 170 Areca trees and 25 coconut trees chopped over land litigation in Gubbi, Tumkur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X