ಡಿಕೆಶಿಗೆ ಜೈಲು ನಿಶ್ಚಿತ; ಗೌಡ್ರ ಕುಟುಂಬದಿಂದ್ಲೂ ಗಣಿ ಅಕ್ರಮ
ತುಮಕೂರು, ಮೇ 6: ರಾಜ್ಯದಲ್ಲಿ ವ್ಯಾಪಕವಾಗಿ ನಡೆದಿರುವ ಗಣಿ ಅಕ್ರಮಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಎಸ್ ಆರ್ ಹಿರೇಮಠ್ ಅವರು ಇದೀಗ ತಮ್ಮ ಅಸ್ತ್ರವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬದತ್ತ ತಿರುಗಿಸಿದ್ದಾರೆ.
ತನ್ಮೂಲಕ ಎಸ್ಆರ್ ಹಿರೇಮಠ್ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಚಿತಾವಣೆ ಮೇರೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರವೇ ಹೋರಾಡುತ್ತಿದ್ದಾರೆ ಎಂಬ ವಾದಕ್ಕೆ ಪೆಟ್ಟುಬಿದ್ದಿದೆ.

ಹಿರೇಮಠ್ ಅವರು ತುಮಕೂರಿನಲ್ಲಿ ಮಾತನಾಡುತ್ತಾ ತಾಜಾ ಆಗಿ ದೇವೇಗೌಡ ಅವರ ಪುತ್ರ ಡಾ. ಎಚ್ ಡಿ ರಮೇಶ್ ಅವರ ಒಡೆತನದ ಲತಾ ಮೈನ್ಸ್ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಅವರ ಮಾತಾ ಮಿನರಲ್ಸ್ ಕಂಪನಿಗಳು ಅಕ್ರಮವೆಸಗಿವೆ. ತುಮಕೂರು ಜಿಲ್ಲೆಯಲ್ಲಿ ಈ ಎರಡು ಕಂಪನಿಗಳೂ 200 ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಮಾಡಿ 10 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿವೆ ಎಂದು ಆರೋಪಿಸಿದ್ದಾರೆ. ಗಮನಾರ್ಹವೆಂದರೆ ಹಿಂದಿನಿಂದಲೂ ಈ ಇಬ್ಬರ ವಿರುದ್ಧ ಇದೇ ಅಕ್ರಮ ಗಣಿ ಆರೋಪ ಕೇಳಿಬರುತ್ತಿದೆ.
ಡಿಕೆಶಿಗೆ ಜೈಲು ನಿಶ್ಚಿತ:
ರಾಜ್ಯ ಸರಕಾರದ ಪ್ರಭಾವಿ ಸಚಿವ ಡಿಕೆ ಶಿವಕುಮಾರ್ ದೊಡ್ಡ ಕ್ರಿಮಿನಲ್ ಎಂದು ಹಿರೇಮಠ್ ಮತ್ತೆ ಝಾಡಿಸಿದ್ದಾರೆ. ರಾಜ್ಯದ ಮತ್ತೊಬ್ಬ ಗಣಿ ಅಕ್ರಮ ಕ್ರಿಮಿನಲ್ ಜನಾರ್ದನ ರೆಡ್ಡಿ ಈಗಾಗಲೇ ಜೈಲುಕಂಬಿ ಎಣಿಸುತ್ತಿದ್ದಾರೆ. ಅದೇ ರೀತಿ ಡಿಕೆಶಿ ಸಹ ಜೈಲು ಸೇರುವುದು ನಿಶ್ಚಿತ. ಮುಖ್ಯಮಂತ್ರಿ ಪಟ್ಟ ಕಾಣುತ್ತಿರುವ ಡಿಕೆಶಿ ಅವರು ನಡೆಸಿರುವ ಅಕ್ರಮಗಳ ಬಗ್ಗೆ ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಲಾಗಿದೆ. ಇದರಲ್ಲಿ ನನ್ನ ಹೋರಾಟವನ್ನು ನಿಲ್ಲಿಸುವ ಮಾತೇ ಇಲ್ಲ' ಎಂದು ಹಿರೇಮಠ್ ಹೇಳಿದ್ದಾರೆ.
ನಗರದ ಜಿಲ್ಲಾ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಜನ ಸಂಗ್ರಾಮ್ ಪರಿಷತ್ ಹಾಗೂ ನೈಸರ್ಗಿಕ ಸಂಪನ್ಮೂಲ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ 'ಗಣಿ ಪ್ರದೇಶದ ಪುನಶ್ಚೇತನ ಮತ್ತು ಪುರ್ವಸತಿ ಸವಾಲುಗಳು' ವಿಷಯದ ಕುರಿತು ಮಾತನಾಡುತ್ತಾ ಹಿರೇಮಠ್ ಮೇಲಿನ ವಿಷಯಗಳ ಮೇಲೆ ಬೆಳಕು ಚೆಲ್ಲಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications