ಪಾವಗಡ; ಏಷ್ಯಾದ ಅತೀ ದೊಡ್ಡ ಸೋಲಾರ್ ಪಾರ್ಕ್ ಜಲಾವೃತ
ಪಾವಗಡ: ತಾಲೂಕಿನಲ್ಲಿ ನಾಲ್ಕು ದಿನಗಳಿಂದ ಸತತವಾಗಿ ಮಳೆ ಸುರಿದ ಕಾರಣ ಕ್ಯಾತಗಾನ ಚೆರ್ಲು ಬಳಿಯ ಸೋಲಾರ್ ಪಾರ್ಕ್ ಮುಳುಗಡೆ ಆಗಿದೆ. ಕ್ಯಾತಗಾನ ಚೆರ್ಲು ಬಳಿ ಕೆರೆ ತುಂಬಿದ ಹಿನ್ನೆಲೆಯಲ್ಲಿ ಪಾರ್ಕ್ನ 30 ಹೆಕ್ಟೇರ್ನಷ್ಟು ಪ್ರದೇಶ ಜಲಾವೃತಗೊಂಡಿದೆ. ಹಾಗೂ ಸೋಲಾರ್ ಪ್ಯಾನಲ್ಗಳು, ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣಾವಾಗಿ ಜಲಾವೃತವಾಗಿವೆ.
ಸೋಲಾರ್ ಪಾರ್ಕ್ ಜಲಾವೃತ
ತುಮಕೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಇದರಿಂದ ಪಾವಗಡದ ಸೋಲಾರ್ ಪಾರ್ಕ್ ಮುಳುಗಡೆಯಾಗಿದೆ. ಇದು ಏಷ್ಯಾದ ಅತೀ ದೊಡ್ಡ ಸೌರ ಘಟಕ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಲಾವೃತವಾಗಿರುವ ಸೋಲಾರ್ ಪಾರ್ಕ್ನಲ್ಲಿ ಯುವಕನೋರ್ವ ಈಜು ಹೊಡೆದಿದ್ದಾನೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿ ಗ್ರಾಮದಲ್ಲಿ ಈ ಸೋಲಾರ್ ಪಾರ್ಕ್ ಇದ್ದು, ಸುಮಾರು 12,500 ಎಕರೆ ವಿಸ್ತೀರ್ಣದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.
ವಳ್ಳೂರು ಮತ್ತು ಕ್ಯಾತಗಾನ ಕೆರೆ ಗ್ರಾಮಗಳ ಮದ್ಯೆ ಸೋಲಾರ್ ಘಟಕ ಮುಳುಗಡೆ ಆಗಿದೆ. ಮುಳುಗಡೆ ಆಗಿರುವ ಸೋಲಾರ್ ಪ್ಯಾನೆಲ್ಗಳ ಸುತ್ತಲೂ ವಿದ್ಯುತ್ ಪ್ರವಹಿಸುತ್ತಿದೆ. ಆದರೆ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟಕದಲ್ಲಿ ಯುವಕ ಈಜಾಡಿದ್ದಾನೆ. ಈ ವೇಳೆ ಅವಘಡ ಸಂಭಸಿದ್ದರೆ ಯಾರು ಹೊಣೆ? ಅನ್ನುವುದು ಸಾರ್ವಜನಿಕರ ಪ್ರಶ್ನೆ ಆಗಿದೆ. ಸಾರ್ವಜನಿಕ ವಲಯದಲ್ಲಿ ಸೌರ ಪಾರ್ಕ್ ಅಧಿಕಾರಿಗಳ ವೈಫಲ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಇದು ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂದು ಪ್ರಖ್ಯಾತಿ ಪಡೆದಿದ್ದು, ಈ ಪಾರ್ಕ್ 2050 ಮೆಗಾವಾಟ್ ಸೌರ ವಿದ್ಯುತ್ ಅನ್ನು ಉತ್ಪಾದನೆ ಮಾಡುತ್ತದೆ. ತುಮಕೂರು ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಲೇ ಇದ್ದು, ಇಲ್ಲಿನ ರೈತರು ಕಂಗಾಲಾಗಿದ್ದಾರೆ. ಇದರ ನಡುವೆಯೇ ಪಾವಗಡದ ಬಳಿ ಇರುವ ಸೋಲಾರ್ ಪಾರ್ಕ್ ಮುಳುಗಡೆ ಆಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಯುವಕನೋರ್ವ ಸೋಲಾರ್ ಪಾರ್ಕ್ ಬಳಿ ಸಂಗ್ರಹವಾಗಿದ್ದ ನೀರಿನಲ್ಲಿ ಈಜಾಡಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ಸೋಲಾರ್ ಪಾರ್ಕ್ ಬಳಿ ವಿದ್ಯುತ್ ಹರಿಯುತ್ತಲೇ ಇದೆ. ಇದರಿಂದ ಅನಾಹುತಗಳು ಸಂಭವಸಿದರೆ ಯಾರು ಹೊಣೆ? ಎಂದು ಪ್ರಶ್ನಿಸುವ ಮೂಲಕ ಸೋಲಾರ್ ಪಾರ್ಕ್ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡಿ ಯಾರು ಒಳಗೆ ಬರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications