ವಾಜಪೇಯಿ ತತ್ವನಿಷ್ಠ ನಾಯಕ: ಕೇಂದ್ರ ಸಚಿವ ಸೋಮಣ್ಣ ಗುಣಗಾನ
ತುಮಕೂರು, ಡಿಸೆಂಬರ್ 25: ತತ್ವನಿಷ್ಠ ರಾಜಕಾರಣಿಯಾಗಿ ಹೆಸರಾದ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ಸಂಪತ್ಭರಿತ ರಾಷ್ಟ್ರವನ್ನಾಗಿ ಮಾಡಲು ತಮ್ಮದೇ ಆದ ಕನಸು ಹೊಂದಿದ್ದರು. ಅವರು ಪ್ರಧಾನಿಯಾಗಿ ತಮ್ಮ ಕನಸಿನ ಭಾರತದ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶಕ್ಕೆ ದೊಡ್ಡ ಕೊಡುಗೆ ನೀಡಿದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ಎ.ಬಿ.ವಾಜಪೇಯಿ ಅವರ 100ನೇ ಜನ್ಮದಿನದ ಅಂಗವಾಗಿ ಸುಶಾಸನ ದಿನ ಆಚರಣೆ ಸಮಾರಂಭದಲ್ಲಿ ಸಚಿವ ಸೋಮಣ್ಣ, ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ವೇಳೆ ಮಾತನಾಡಿದ ಅವರು, ಈ ಮಹಾನ್ ನಾಯಕನ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನಾವು ನಮ್ಮ ಕಾರ್ಯವೈಖರಿ ಹೇಗಿದೆ, ಅವರ ತತ್ವ ಆದರ್ಶಗಳನ್ನು ಪಾಲನೆ ಮಾಡುತ್ತಿದ್ದೇವೆಯೆ ಎಂದು ಚಿಂತನೆ ಮಾಡಬೇಕಾಗಿದೆ ಎಂದರು.

ದೇಶದ ಅಭಿವೃದ್ಧಿಗೆ ವಾಜಪೇಯಿ ಅವರು ಜಾರಿಗೆ ತಂದ ಗ್ರಾಮ ಸಡಕ್, ನದಿಗಳ ಜೋಡಣೆ, ದೇಶದ ರೈತರ ಕಲ್ಯಾಣ, ಕೃಷಿ ಕ್ಷೇತ್ರದ ಕಾರ್ಯಕ್ರಮಗಳು ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಯೋಜನೆಗೆ ಭದ್ರ ಅಡಿಪಾಯವಾಗಿವೆ. ವಿದೇಶಗಳೊಂದಿಗೆ ಹೇಗೆ ಬಾಂಧವ್ಯ ಬೆಳೆಸಬೇಕು, ಸಂಬಂಧ ಹೇಗೆ ಮಾಡಬೇಕು ಎಂಬ ಬಗ್ಗೆ ವಾಜಪೇಯಿ ಅವರು ವಿಶ್ವಕ್ಕೆ ಸಂದೇಶ ನೀಡಿದರು. ಸರಳ, ಸಜ್ಜನಿಕೆಗೆ ಹೆರಾದ ಇವರು ವಿಶ್ವ ಕಂಡ ಶ್ರೇಷ್ಠ ಜನನಾಯಕರಾಗಿ ಹೆಸರಾಗಿದ್ದಾರೆ. ಸೂರ್ಯ, ಚಂದ್ರ ಇರುವವರೆಗೂ ವಾಜಪೇಯಿ ಅವರು ಭಾರತದಲ್ಲಿ ಇರುತ್ತಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಗ್ವಾಲಿಯರ್ನಲ್ಲಿ ೧೯೨೪ರಲ್ಲಿ ಜನಿಸಿದ ವಾಜಪೇಯಿ ಅವರು ವಿದ್ಯಾರ್ಥಿ ದಿಸೆಯಲ್ಲೇ ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಬೆಳೆದವರು. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದ ಇವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿದ್ದರು. ಅಟಲ್ ಎಂದರೆ ಗುರಿ ಸಾಧಿಸುವವ, ಬಿಹಾರಿ ಎಂದರೆ ವಿವೇಚನಾಯುಕ್ತ, ಬಿಹಾರಿ ಎಂಬುದು ಅವರ ಕುಟುಂಬದ ಹೆಸರು. ವಾಜಪೇಯಿ ಅವರು ತಮ್ಮ ಹೆಸರಿಗೆ ತಕ್ಕಂತೆ ನಡೆದುಕೊಂಡರು. ತಮ್ಮ ಬುದ್ಧಿ ಸಾಮರ್ಥ್ಯದಿಂದ ಜಗತ್ತನ್ನೇ ಗೆದ್ದ ವ್ಯಕ್ತಿತ್ವ ಅವರದ್ದು ಎಂದು ಹೇಳಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಸುಭದ್ರ ಭಾರತಕ್ಕೆ ವಾಜಪೇಯಿ ಅವರು ನೀಡಿದ ಯೋಜನೆಗಳು, ಅವರ ದೂರದೃಷ್ಟಿ ಆಡಳಿತ ದೇಶದ ಮುನ್ನಡೆಗೆ ತಳಹದಿಯಾಗಿದೆ. ಅವರ ಸಂಕಲ್ಪವನ್ನು ಸಾಕಾರಗೊಳಿಸುವತ್ತಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಬಲಿಷ್ಠ ಭಾರತ ನಿರ್ಮಾಣಕ್ಕೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.
ಶಾಸಕ ಬಿ.ಸುರೇಶ್ ಗೌಡರು, ಅಪ್ಪಟ ದೇಶಪ್ರೇಮಿ, ಸಮರ್ಥ ಆಡಳಿತಗಾರರಾದ ವಾಜಪೇಯಿ ಅವರ ಕಾರ್ಯವೈಖರಿ ಯುವಜನರಿಗೆ ಮಾದರಿಯಾಗಿದೆ. ತಾವು ರಾಜಕಾರಣಕ್ಕೆ ಬರಲು ವಾಜಪೇಯಿ ಅವರೇ ಪ್ರೇರಣೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ನಾಗರತ್ನಮ್ಮ, ನಗರ ಬಿಜೆಪಿ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ರೈತಮೋರ್ಚಾ ನಗರ ಅಧ್ಯಕ್ಷ ಸತ್ಯಮಂಗಲ ಜಗದೀಶ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications