ಅತ್ತೆ ಜೊತೆಗಿನ ಪತಿಯ ಅನೈತಿಕ ಸಂಬಂಧ: ಬಲಿಯಾದಳು ಪತ್ನಿ!
ತುಮಕೂರು, ಜೂ 11: ಗುಬ್ಬಿ ತಾಲೂಕನ್ನು ಬೆಚ್ಚಿಬೀಳಿಸಿದ್ದ ಪಿಎಸೈ ಪತ್ನಿಯ ಬರ್ಭರ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ ನಾಲ್ಕರಂದು ಹೊಸದುರ್ಗ ಠಾಣೆ ಪಿಎಸೈ ಗಿರೀಶ್ ಅವರ ಪತ್ನಿ ಪ್ರಫುಲ್ಲಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಪಿಎಸೈ ಗಿರೀಶ್ ಮತ್ತು ಕೊಲೆಯಾದ ಪ್ರಪುಲ್ಲಾ ತಾಯಿ ಮಹಾದೇವಮ್ಮ ನಡುವಿನ ಅನೈತಿಕ ಸಂಬಂಧ, ಪ್ರಪುಲ್ಲಾಳನ್ನು ಬಲಿ ತೆಗೆದುಕೊಂಡಿದೆ. ಈ ಸಂಬಂಧ ಇವರಿಬ್ಬರನ್ನು ಜೊತೆಗೆ ಪಿಎಸೈ ಗಿರೀಶನ ಆರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. (ಪರಪುರುಷನ ತೆಕ್ಕೆಗೆ ಬಿದ್ದ ಪತ್ನಿಯ ಕೊಂದ ಪತಿ)
ಗುಬ್ಬಿ ತಾಲೂಕು ಸಂಗನಹಳ್ಳಿಯ ತೋಪಿನಲ್ಲಿ ಪಿಎಸೈ ಪತ್ನಿ ಪ್ರಫುಲ್ಲಾ(26) ಅವರ ಕೊಲೆಯಾಗಿತ್ತು. ಕೊಲೆ ಮಾಡಿರುವುದನ್ನು ಗಿರೀಶ್ ಸ್ನೇಹಿತ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಕೊಲೆಗೆ ಸಂಚು ರೂಪಿಸಿದ್ದು ಪ್ರಫುಲ್ಲಾ ತಾಯಿ ಮಹದೇವಮ್ಮ ಮತ್ತು ಪತಿ ಗಿರೀಶ್ ಎಂದು ವಿಚಾರಣೆಯ ವೇಳೆ ಈತ ಹೇಳಿಕೆ ನೀಡಿದ್ದಾನೆ.

ತನ್ನ ತಾಯಿ ತನ್ನ ಗಂಡನ ಜೊತೆ ಏಕಾಂತದಲ್ಲಿ ಇದ್ದಿದ್ದನ್ನು ಹಲವಾರು ಬಾರಿ ಕಣ್ಣಾರೆ ಕಂಡಿದ್ದ ಪ್ರಪುಲ್ಲಾ, ಎರಡು ತಿಂಗಳ ಹಿಂದೆ ಗಂಡ ಪಿಎಸೈ ಗಿರೀಶ್ ಜೊತೆ ಠಾಣೆಯಲ್ಲಿಯೇ ಜಗಳವಾಡಿಕೊಂಡು ತವರು ಮನೆ ಸಂಗನಳ್ಳಿಗೆ ಬಂದಿದ್ದರು.
ತಮ್ಮ ಅಕ್ರಮ ಸಂಬಂಧ ಎಲ್ಲಿ ಬಯಲಾಗುತ್ತೋ ಅನ್ನೋ ಭಯದಿಂದ ಪ್ರಫುಲ್ಲಾ ತಾಯಿ ಮಹಾದೇವಮ್ಮ ಮತ್ತು ಪತಿ ಗಿರೀಶ್, ಪ್ರಫುಲ್ಲಾಳನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಇದಕ್ಕೆ ಗಿರೀಶ್ ಸ್ನೇಹಿತ, ಗ್ರಾಮ ಪಂಚಾಯತಿ ಸದಸ್ಯ ಚಿದಾನಂದ ಸಾಥ್ ನೀಡಿದ್ದಾನೆ.
ಅದರಂತೇ, ಜೂನ್ ನಾಲ್ಕರಂದು ರಾತ್ರಿ ಊಟ ಮಾಡಲು ಮನೆಗೆ ಬಂದಿದ್ದ ಚಿದಾನಂದ್, ಪ್ರಫುಲ್ಲಾರನ್ನು ಮನೆಗೆ ಬಿಡುವ ನೆಪದಲ್ಲಿ ಕರೆದೊಯ್ದು, ಸಂಗನಹಳ್ಳಿ ಮಾವಿನ ತೋಪಿನಲ್ಲಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. (ಅತ್ತಿಗೆಯನ್ನು ಕೊಂದ ಮೈದುನ)
ಇನ್ನೊಂದು ಮಾಹಿತಿಯ ಪ್ರಕಾರ, ದಂಪತಿಗಳ ನಡುವೆ ಸಂಬಂಧ ತೀರಾ ಹದೆಗೆಟ್ಟಿತ್ತು. ಅಳಿಯನೊಂದಿಗಿನ ದೈಹಿಕ ಸಂಬಂಧ ಉಳಿಸಿಕೊಳ್ಳಲು ನೆಲಮಂಗಲ ಮೂಲದ ಹುಡುಗಿಯ ಜತೆ ಮದುವೆ ಮಾಡಲು ಮಹದೇವಮ್ಮ ತಯಾರಿ ನಡೆಸಿದ್ದರು ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications