ಸೊಗಡು ಶಿವಣ್ಣರ ಮಾರ್ಗದರ್ಶನದಲ್ಲಿ ಚುನಾವಣೆ ಮಾಡ್ತಾರಂತೆ ಜ್ಯೋತಿಗಣೇಶ್
ತುಮಕೂರು, ಏಪ್ರಿಲ್ 18 : ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸುವುದಾಗಿ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿ ಗಣೇಶ್ ತಿಳಿಸಿದರು.
ತುಮಕೂರಿನ ಗಾಂಧಿನಗರದಲ್ಲಿರುವ ನಗರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏಪ್ರಿಲ್ 20ರಂದು ಬೆಳಗ್ಗೆ 9.30ಕ್ಕೆ ಕಾಲ್ಟೆಕ್ಸ್ ಬಳಿ ಇರುವ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಆ ಬಳಿಕ ಬಿಜಿಎಸ್ ಸರ್ಕಲ್, ಎಂ.ಜಿ. ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ತೆರಳಿ, ಮಧ್ಯಾಹ್ನ 12ರಿಂದ 12.30ರ ಮಧ್ಯೆ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು
ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಪಕ್ಷದ ಹಿರಿಯ ಮುಖಂಡ ಸಿ.ವಿ.ಮಹದೇವಯ್ಯ ಅವರ ಮಾರ್ಗದರ್ಶನದಂತೆ ಚುನಾವಣೆ ನಡೆಯಲಿದೆ. ಪಕ್ಷದಲ್ಲಿರುವ ಸಣ್ಣ- ಪುಟ್ಟ ಗೊಂದಲವನ್ನು ವರಿಷ್ಠರು ಬಗೆಹರಿಸುತ್ತಾರೆ. ಮಾಜಿ ಸಚಿವ ಸೊಗಡು ಶಿವಣ್ಣ ಅವರ ಜೊತೆ ಪಕ್ಷದ ಹಿರಿಯ ಮುಖಂಡರು ನಿರಂತರ ಸಂಪರ್ಕದಲ್ಲಿದ್ದಾರೆ. ಗೊಂದಲ ಬಗೆಹರಿಯಲಿದೆ. ನಾನು ಸಹ ಅವರನ್ನು ಭೇಟಿ ಮಾಡಿ, ಬೆಂಬಲ ಯಾಚಿಸುತ್ತೇನೆ ಎಂದು ತಿಳಿಸಿದರು.

ಕಳೆದ ಐದು ವರ್ಷಗಳ ಅವಧಿಯಲ್ಲಿ ತುಮಕೂರು ನಗರಕ್ಕೆ ಕೋಟಿಗಟ್ಟಲೆ ಅನುದಾನ ಹರಿದು ಬಂದಿದೆ. ಆದರೆ ನಗರದ ಯಾವ ಭಾಗಕ್ಕೆ ತೆರಳಿದರೂ ಸಾಲು ಸಾಲು ಸಮಸ್ಯೆ ಕಾಣುತ್ತಿವೆ. ಮೂಲಸೌಲಭ್ಯಗಳ ಕೊರತೆಯಿಂದ ಜನ ಕಂಗೆಟ್ಟಿದ್ದಾರೆ. ತುಮಕೂರು ನಗರ ಶಾಸಕರು ಅಭಿವೃದ್ಧಿ ವಿರೋಧಿ ನೀತಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಬಿಜೆಪಿ ನಗರಾಧ್ಯಕ್ಷ ಸಿ.ಎನ್.ರಮೇಶ್, ಬಿಜೆಪಿ ಮುಖಂಡರಾದ ಸಕ್ಕರೆ ಕುಮಾರಸ್ವಾಮಿ, ಎಚ್.ಎಂ. ರವೀಶ್, ವಿನಯ್ ಜೈನ್, ಆರ್.ಜೆ.ಸುರೇಶ್, ಗಿರಿಯಪ್ಪ, ಧನಿಯಾ ಕುಮಾರ್, ಬಿ.ಡಿ.ಗೋಪಾಲಗೌಡ, ಬಿ.ಸಿ. ನಾಗೇಶ್, ವೆಂಕಟಪ್ಪ, ವೆಂಕಟೇಶ್, ಹನುಮಂತರಾಯಪ್ಪ, ಶಂಭುಲಿಂಗಸ್ವಾಮಿ ಇತರರಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications