ಮರ್ಯಾದೆ ಇದ್ದರೆ ಜನತೆ ಕ್ಷಮೆ ಕೇಳಿ: ಸಿದ್ದು ವಿರುದ್ದ ಸೊಗಡು ಶಿವಣ್ಣ ವಾಗ್ದಾಳಿ
ತುಮಕೂರು, ಡಿಸೆಂಬರ್ 10: ಕರ್ನಾಟಕ ಮತದಾರರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ತೀರ್ಪು ಕೊಟ್ಟಿದ್ದಾರೆ, ದುರಹಂಕಾರಿ ಸಿದ್ದರಾಮಯ್ಯನನ್ನು ತಿರಸ್ಕರಿಸಿದ್ದಾರೆ. ಅವರಿಗೆ ಮರ್ಯಾದೆ ಇದ್ದರೆ ರಾಜ್ಯದ ಜನರ ಕ್ಷಮೆ ಕೇಳಬೇಕೆಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ರಾಜ್ಯದ ಜನ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ, ಆದ್ದರಿಂದ ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜ್ಯದ ಜನರ ಕ್ಷಮೆ ಕೇಳಿ ಮನೆಯಲ್ಲಿರಬೇಕು ಎಂದು ಗುಡುಗಿದರು.
ಉಪ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯನವರು ಮಾತೆತ್ತಿದರೆ ಯಡಿಯೂರಪ್ಪ ಅವರನ್ನು ಟೀಕೆ ಮಾಡುತ್ತಿದ್ದರು, ಇವರೇ ಎನೂ ತಪ್ಪು ಮಾಡದ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಿ ಜೈಲಿಗೆ ಹೋಗಿ ಬಂದವರು ಎಂದು ಪದೇ ಪದೇ ಹೋದಲೆಲ್ಲಾ ಹೇಳುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು.

ಅವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಗೆ ಕ್ಷಮೆ ಕೇಳಿರುತ್ತಿದ್ದರು. ಈಗಲಾದರೂ ಯಡಿಯೂರಪ್ಪ ಹಾಗೂ ಜನತೆಯ ಕ್ಷಮೆ ಕೇಳಿ ತಮ್ಮ ಗೌರವ ಹೆಚ್ಚಿಸಿಕೊಳ್ಳಲಿ, ಇನ್ನಾದರೂ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವುದನ್ನು ಕೈಬಿಡಲಿ ಎಂದು ಸಲಹೆ ಕೊಟ್ಟರು.
ಈ ಉಪ ಚುನಾವಣೆಯ ಫಲಿತಾಂಶದಲ್ಲಿ ಜನ ಸರಿಯಾದ ಶಿಕ್ಷೆ ಕೊಟ್ಟಿದ್ದಾರೆ, ಇನ್ನು ಮೂರುವರೆ ವರ್ಷ ಗೃಹ ಬಂಧನದಲ್ಲಿ ಇರಿ ಎಂದು ತೀರ್ಪು ಕೊಟ್ಟಿದ್ದಾರೆ. ನಾನೇ ಧೀರ, ಶೂರ, ಕರ್ಣ ಎಂದು ದುರಹಂಕಾರಿಯಾಗಿದ್ದರು. ಜನ ತಕ್ಕ ಪಾಠವನ್ನು ಕಲಿಸಿದ್ದಾರೆ. ಉಪ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಜಯ ಗಳಿಸಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications