ಪರಮೇಶ್ವರ್ ಮೇಲೆ ಐಟಿ ದಾಳಿ ಅಂತ್ಯ: ಭಾರಿ ಅಕ್ರಮ ಆಸ್ತಿ ಪತ್ತೆ?
ತುಮಕೂರು, ಅಕ್ಟೋಬರ್ 11: ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಪರಮೇಶ್ವರ್ ಅವರ ನಿವಾಸ ಹಾಗೂ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಮಾಡಿದ್ದ ಐಟಿ ದಾಳಿ ಇಂದು ಅಂತ್ಯವಾಗಿದೆ.
ನಿನ್ನೆ ಬೆಳಿಗ್ಗೆ ಐಟಿ ಅಧಿಕಾರಿಗಳು ತುಮಕೂರಿನಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಮೂಹಕ್ಕೆ ಸೇರಿದ ಕಾಲೇಜುಗಳು, ಪರಮೇಶ್ವರ್ ಅವರ ನಿವಾಸ, ಪರಮೇಶ್ವರ್ ಅವರ ಅಣ್ಣನ ಮಗನ ಕಚೇರಿ, ನಿವಾಸದ ಮೇಲೆ ದಾಳಿ ನಡೆಸಿ ತನಿಖೆ ನಡೆಸಿದ್ದರು.
ಐಟಿ ದಾಳಿಯು ಇಂದು ರಾತ್ರಿ ವೇಳೆಗೆ ಅಂತ್ಯವಾಗಿದ್ದು, ಹಲವು ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದಾಳಿಯ ವೇಳೆ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಬೆಳಕಿಗೆ ಬಂದಿವೆ ಎನ್ನಲಾಗುತ್ತಿದೆ. ಸೀಟ್ ಡಬಲ್ ಮಾಡಿ ಕೋಟ್ಯಂತರ ಹಣ ಲಾಭ ಮಾಡಿಕೊಳ್ಳಲಾಗಿದೆ. ನಿಯಮ ಬಾಹಿರವಾಗಿ ಶುಲ್ಕ ಪಡೆದಿರುವುದು ಗೊತ್ತಾಗಿದೆ ಎಂಬ ಮಾಹಿತಿ ಇದೆ.
ಶಿಕ್ಷಣದಿಂದ ಸಂಪಾದಿಸಿದ ಹಣವನ್ನು ಹೊಟೆಲ್ ಉದ್ದಿಮೆಯಲ್ಲಿ ತೊಡಗಿಸಿದ್ದಾರೆ ಎಂಬ ಆರೋಪವೂ ಪರಮೇಶ್ವರ್ ಮೇಲೆ ಇದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ.
ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ನಡೆದ ದಾಳಿಯಲ್ಲಿ ಒಟ್ಟು 4.22 ಕೋಟಿ ನಗದು ಹಣ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಪರಮೇಶ್ವರ್ ಅವರ ನಿವಾಸದಲ್ಲಿಯೇ 70 ಲಕ್ಷ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅವರ ಆಪ್ತರ ಖಾತೆಗೂ ಹಣ ವರ್ಗಾವಣೆ ಆಗಿರುವ ಬಗ್ಗೆ ದಾಖಲೆ ಸಂಗ್ರಹಿಸಲಾಗಿದೆ.
ಅಘೋಷಿತ ಆಸ್ತಿ, ಕೆಲಸಗಾರರ, ಶಿಕ್ಷಣ ಸಂಸ್ಥೆ ಸಿಬ್ಬಂದಿ ಹೆಸರಲ್ಲಿ ಕೋಟ್ಯಂತರ ಹಣ ವರ್ಗಾವಣೆ, ಹೂಡಿಕೆ ಮಾಡಿರುವ ದಾಖಲೆಗಳು, ವೈದ್ಯಕೀಯ ಸೀಟು ಬದಲಿ ಮಾಡಿರುವುದು, ನಗದು ಶುಲ್ಕ ವಸೂಲಿ ಇನ್ನೂ ಹಲವು ನಿಯಮ ಬಾಹಿರ ಚಟುವಟಿಕೆಗಳು ನಡೆದಿರುವುದು ಐಟಿ ಗಮನಕ್ಕೆ ಬಂದಿದೆ. ಈ ಬಗ್ಗೆ ದಾಖಲೆಗಳನ್ನು ಕಲೆ ಹಾಕಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications