ಸೋಮಣ್ಣ ಬಾಯಿಗೆ ಹೆದರಿ ನಮ್ಮನ್ನು ಬಲಿಕೊಟ್ರು: ಬಿಎಸ್ವೈ ವಿರುದ್ಧ ಮಾಧುಸ್ವಾಮಿ ಕೆಂಡಾಮಂಡಲ
ತುಮಕೂರು, ಮಾರ್ಚ್ 16:ಈ ಬಾರಿ ಲೋಕಸಭಾ ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ನಮ್ಮನ್ನೆಲ್ಲಾ ತೆಗೆದುಕೊಂಡು ಹೋಗಿ ಬಲಿ ಕೊಟ್ಟರು. ಸೋಮಣ್ಣನ ನಾಲಿಗೆಗೆ, ಸೋಮಣ್ಣನ ಬೈಗುಳಕ್ಕೆ ಹೆದರಿಕೊಂಡು ಯಡಿಯೂರಪ್ಪ ನನ್ನನ್ನು ಬಲಿ ಹಾಕಿದರು ಎಂದು ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನೋವಾಗಿದೆ. ಯಡಿಯೂರಪ್ಪ ಅವರಿಗೆ ಮಾಧುಸ್ವಾಮಿ, ಈಶ್ವರಪ್ಪನನ್ನು ಕಟ್ಟಿಕೊಂಡು ಏನಾಗಬೇಕು ಅಂತ ಅನ್ನಿಸಿರಬಹುದು. ಅಪ್ಪ ಮಕ್ಕಳಿಗೆ ಸ್ವ ಹಿತಸಕ್ತಿಯೇ ಹೆಚ್ಚಾಗಿರಬಹುದು. ನಾವು ನೆಮ್ಮದಿಯಾಗಿರಬಹುದು ಅಂತಾ ಎಂದುಕೊಂಡಿರಬಹುದು ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಯಡಿಯೂರಪ್ಪ ನನಗೆ ಹೇಳಿದ ಮೇಲೆ ನಾನು ಟಿಕೆಟ್ ಅಕಾಂಕ್ಷಿ ಅಂತ ಹೇಳಿದ್ದು. ನಿನಗೆ ಬಿ ಫಾರ್ಮ್ ತಂದು ಕೊಡುವ ಜವಾಬ್ದಾರಿ ನಂದೇ ಅಂತ ಯಡಿಯೂರಪ್ಪ ಹೇಳಿದ್ದರು. ನಾನು ದೆಹಲಿಗೆ ಹೋಗುತ್ತೇನೆ ಅಂತ ಹೇಳಿದ್ದೆ. ನೀನು ಯಾಕಪ್ಪ ಹೋಗ್ತಿಯಾ, ಹೋಗ್ಬೇಡಾ ಎಂದಿದ್ದರು. ಹಾಗಾಗಿಯೇ ನಾನು ಎಲ್ಲರ ಮುಂದೆ ನಾನೇ ತುಮಕೂರು ಬಿಜೆಪಿ ಅಭ್ಯರ್ಥಿ ಎಂದು ಧೃಡವಾಗಿ ಹೇಳುತ್ತಿದ್ದೆ. ನನಗೆ ಭರವಸೆ ಕೊಟ್ಟಿದ್ದಕ್ಕಾಗಿಯಾದರೂ ಯಡಿಯೂರಪ್ಪನವರು ಹೈಕಮಾಂಡ್ ಬಳಿ ಟಿಕೆಟ್ಗಾಗಿ ಹೋರಾಡಬಹುದಿತ್ತು. ಆದರೆ, ಅವರು ಹಾಗೆ ಮಾಡಿಲ್ಲ ಎಂದರು.
ಪಕ್ಷಕ್ಕೆ ಯಾರ್ಯಾರು ಅನ್ಯಾಯ ಮಾಡಿದರು, ಇವತ್ತು ಅವರೇ ದೊಡ್ಡವರಾಗಿದ್ದಾರೆ. ಇವತ್ತು ನಿಷ್ಠಾವಂತನಾಗಿ ದುಡಿದವರೇ ಲೆಕ್ಕಕ್ಕಿಲ್ಲ ಅಂದರೆ ನೋವು ಆಗಲ್ವಾ. ಪಕ್ಷದವರು ಗೌರವಯುತವಾಗಿ ವರ್ತಿಸದೇ ಇದ್ದರೆ ಹೇಗೆ. ನೋವು ಬಾದಿಸುತ್ತೆ ಅಲ್ವಾ..? ನಂಬಿದವರೇ ನಮಗೆ ಕೈ ಕೊಡ್ತಾರೆ ಅನ್ನೋ ನೋವು ಎಂದು ಹೇಳಿದರು.
ನಾನು ಬಿಜೆಪಿಗೆ ಹೋಗಬೇಕು ಅಂದ್ರೆ ಯಡಿಯೂರಪ್ಪ ಬಿಟ್ಟು ಬೇರೆ ಕಾರಣ ಇರಲಿಲ್ಲ. ಕೆಜಿಪಿ ಪಾರ್ಟಿ ಮಾಡಿದಾಗ ಯಡಿಯೂರಪ್ಪಗೆ ಶಕ್ತಿ ಕೊಡಬೇಕು ಅಂತ ಕೆಜೆಪಿಗೆ ಹೋದವರು ನಾವು. ಯಡಿಯೂರಪ್ಪ ಬದಲಾದಂಗೆ ಅವರ ಜೊತೆ ಹೋದ್ವಿ ಅದೇ ತಪ್ಪಾ..? ನಾವು ಎಂದೂ ಅವರನ್ನು ಪ್ರಶ್ನೆನೇ ಮಾಡಲಿಲ್ಲ. ಯಾಕೆ ಕೆಜಿಪಿ ಬಿಟ್ಟು ಬಿಜೆಪಿಗೆ ಹೋಗ್ತಿರಾ ಅಂತ ಕೇಳಲಿಲ್ಲ. ಲೀಡರ್ ಒಳ್ಳೆದೋ ಕೆಟ್ಟದೋ ಅವರನ್ನು ಫಾಲೋ ಮಾಡೋಣಾ ಅಂತ ಹೋದ್ವಿ. ಮನೆಲಿ ಕುಳಿತಿದ್ದವರನ್ನು ತಯಾರಾಗು ಅಂತ ಹೇಳಿ, ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ ಎಂದರು.
ಎರಡು ಮೂರು ಸಲ ಕರೆಸಿಕೊಂಡು ಚುನಾವಣೆಗೆ ಸ್ಪರ್ಧೆ ಮಾಡು ಅಂದ್ರು. ನೀವು ತಯಾರಾಗಿ ಅಂತ ಹೇಳಿದ್ರು. ಈಗ ನಮ್ಮ ಪರ ಟಿಕೆಟ್ ಕೊಡಿಸಲಿಕ್ಕೆ ಹೋರಾಟ ಮಾಡಿಲ್ಲ ಅನ್ನೋದು ಬಹಳ ಮನಸ್ಸಿಗೆ ನೋವಾಗಿದೆ. ಇಷ್ಟೆಲ್ಲಾ ಆದ ಮೇಲೂ ನಮಗೆ ರಕ್ಷಣೆ ಇಲ್ಲ. ಇಲ್ಲಿ ಇರಬೇಕಾ ಬೇಡ್ವಾ ಎನ್ನುವ ಚಿಂತನೆ ಆಗಿದೆ. ಕಾರ್ಯಕರ್ತರನ್ನ ಕರೆದು ಯಾವ ದಿಕ್ಕಿನಲ್ಲಿ ಹೋದರೆ ಅನುಕೂಲ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳುತ್ತೇವೆ ಎಂದರು.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications