ಜೆಡಿಎಸ್ ಶಾಸಕ ಡಿ. ಸಿ. ಗೌರಿಶಂಕರ್ಗೆ ಕೋವಿಡ್ ಸೋಂಕು
ತುಮಕೂರು, ಸೆಪ್ಟೆಂಬರ್ 15: ಜೆಡಿಎಸ್ ನಾಯಕ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ. ಸಿ. ಗೌರಿ ಶಂಕರ್ಗೆ ಕೋವಿಡ್ ಸೋಂಕು ತಗುಲಿದೆ. "ಕಳೆದ 7 ದಿನದಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ಗೆ ಒಳಗಾಗಿ" ಎಂದು ಶಾಸಕರು ಮನವಿ ಮಾಡಿದ್ದಾರೆ.
ಶಾಸಕ ಡಿ. ಸಿ. ಗೌರಿಶಂಕರ್ ಮಂಗಳವಾರ ಫೇಸ್ ಬುಕ್ ಪೋಸ್ಟ್ ಮೂಲಕ ಕೋವಿಡ್ ಸೋಂಕು ತಗುಲಿದೆ ಎಂದು ಹೇಳಿದ್ದಾರೆ. "ನಿನ್ನ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೆ" ಎಂದು ಹೇಳಿದ್ದಾರೆ.
"ವರದಿ ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಶಾಸಕ ಗೌರಿ ಶಂಕರ್ ಫೇಸ್ ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
"ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ" ಎಂದು ಶಾಸಕರು ಮನವಿ ಮಾಡಿದ್ದಾರೆ.
|
ಡಿ. ಸಿ. ಗೌರಿಶಂಕರ್ ಟ್ವೀಟ್
ಕೋವಿಡ್ ಸೋಂಕು ತಗುಲಿರುವ ಕುರಿತು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ. ಸಿ. ಗೌರಿ ಶಂಕರ್ ಟ್ವೀಟ್ ಮಾಡಿದ್ದಾರೆ.
|
ದೇವೇಗೌಡರ ಟ್ವೀಟ್
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಗೌರಿ ಶಂಕರ್ ಬೇಗ ಗುಣಮುಖರಾಗಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ. "ಇಂದು ಗೌರಿಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ಮತ್ತೆ ತೊಡಗುವಂತಾಗಲಿ ಎಂದು ಆಶಿಸುತ್ತೇನೆ" ಎಂದು ಹೇಳಿದ್ದಾರೆ.
|
ಶೀಘ್ರವಾಗಿ ಗುಣಮುಖರಾಗಲಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಟ್ವೀಟ್ ಮಾಡಿದ್ದು, "ವೈದ್ಯರ ಸಲಹೆಯಂತೆ ಸೂಕ್ತ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆದು ಶೀಘ್ರ ಗುಣಮುಖರಾಗಿ ಎಂದಿನಂತೆ ಜನಸೇವೆಗೆ ಬನ್ನಿ ಎಂದು ಆಶಿಸುತ್ತೇನೆ" ಎಂದು ಹಾರೈಸಿದ್ದಾರೆ.
Recommended Video

9 ಸಾವಿರ ಪ್ರಕರಣಗಳು
ಸೋಮವಾರ ತುಮಕೂರಿನಲ್ಲಿ 192 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 9,378ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2466.
-
Buttermilk Summer Benefits: ಪ್ರತಿದಿನ ಮಜ್ಜಿಗೆ ಕುಡಿಯುವವರು ತಪ್ಪದೇ ತಿಳಿದುಕೊಳ್ಳಬೇಕಾದ ವಿಷಯಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications