ಕುಮಾರಸ್ವಾಮಿ ವಿರುದ್ಧ ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ
ತುಮಕೂರು, ಸೆಪ್ಟೆಂಬರ್ 12: ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ತಮ್ಮದೇ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ.
ಕುಮಾರಸ್ವಾಮಿ ಅವರಿಗೆ ಇ.ಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಮೇಲೆ ಪ್ರೀತಿ ಇಲ್ಲ. ಪ್ರೀತಿ ಇದ್ದಿದ್ದರೆ ಅವರು ಒಕ್ಕಲಿಗ ಸಮುದಾಯ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದರು ಎಂದು ಎಸ್ ಆರ್ ಶ್ರೀನಿವಾಸ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಬೆಂಗಳೂರಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು, ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದರು. ಆದರೆ ಅದರಲ್ಲಿ ಕುಮಾರಸ್ವಾಮಿ ಅವರು ಪಾಲ್ಗೊಂಡಿರಲಿಲ್ಲ. ತಮಗೆ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು.

ಪ್ರೀತಿ ಇದ್ದಿದ್ದರೆ ಎಚ್ಡಿಕೆ ಬರುತ್ತಿದ್ದರು
'ಕುಮಾರಸ್ವಾಮಿ ಅವರು ಪ್ರತಿಭಟನೆಗೆ ಬರಬೇಕು ಎಂದೇನೂ ಇಲ್ಲ. ನಮ್ಮ ಸಮುದಾಯದ ಮುಖಂಡನಿಗೆ ಅನ್ಯಾಯವಾದಾಗ ಪ್ರತಿಭಟಿಸುವುದು ನಮ್ಮ ಕರ್ತವ್ಯ. ನಮಗೆಲ್ಲರಿಗೂ ಡಿಕೆ ಶಿವಕುಮಾರ್ ಅವರ ಮೇಲೆ ಪ್ರೀತಿ ಇತ್ತು. ಹಾಗಾಗಿ ಹೋಗಿದ್ದೆವು. ಕುಮಾರಸ್ವಾಮಿ ಅವರಿಗೆ ಆ ಭಾವನೆ ಇರಲಿಲ್ಲ. ಆ ಭಾವನೆ ಇದ್ದಿದ್ದರೆ ಖಂಡಿತವಾಗಿಯೂ ಹೋರಾಟಕ್ಕೆ ಬರುತ್ತಿದ್ದರು. ಆಮಂತ್ರಣ ಕೊಟ್ಟು ಕರೆಯುವ ಕಾರ್ಯಕ್ರಮ ಇದಲ್ಲ. ಆಮಂತ್ರಣ ಇಲ್ಲದೆಯೇ 25,000 ಮಂದಿ ಭಾಗವಹಿಸಿದ್ದರು' ಎಂದು ಎಸ್ ಆರ್ ಶ್ರೀನಿವಾಸ್ ಟೀಕಿಸಿದರು.

ಒಕ್ಕಲಿಗರಲ್ಲಿ ಸ್ವಪ್ರತಿಷ್ಠೆ ಹೆಚ್ಚಾಗಿದೆ
'ಒಕ್ಕಲಿಗರಲ್ಲಿ ಸ್ವಪ್ರತಿಷ್ಠೆ ಹೆಚ್ಚಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕೂಡ ಒಕ್ಕಲಿಗರಲ್ಲಿ ಸ್ವಪ್ರತಿಷ್ಠೆ ಹೆಚ್ಚಿದೆ. ಇದು ಕೇವಲ ಕುಮಾರಸ್ವಾಮಿ ಅವರ ವಿಚಾರವಷ್ಟೇ ಅಲ್ಲ. ವೈಯಕ್ತಿಕ ಪ್ರತಿಷ್ಠೆಗಳ ಕಾರಣ ಸಮಾಜ ಕೆಡುತ್ತಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ಸ್ವಪ್ರತಿಷ್ಠೆ ಬಿಟ್ಟು ಒಂದಾಗಬೇಕು' ಎಂದು ಹೇಳಿದರು.

ತಪ್ಪು ಮಾಡಿದ್ದರೆ ಹಿಡಿದುಕೊಂಡು ಹೋಗಲಿ
'ಎಚ್ ಡಿ ಕುಮಾರಸ್ವಾಮಿ ಅವರು ಫೋನ್ ಕದ್ದಾಲಿಕೆ ಮಾಡಿದ್ದರೆ ಅವರನ್ನು ಹಿಡಿದುಕೊಂಡು ಹೋಗಲಿ. ಅವರು ಮಾಡಬಾರದ್ದನ್ನು ಮಾಡಿ ದುಡ್ಡು ಹೊಡೆದಿದ್ದರೆ ಅವರನ್ನು ಹಿಡಿದುಕೊಂಡು ಹೋಗುತ್ತಾರೆ. ಅದರಲ್ಲಿ ತಪ್ಪಿಲ್ಲ' ಎನ್ನುವ ಮೂಲಕ ಕುಮಾರಸ್ವಾಮಿ ಮತ್ತು ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಿದ್ದಾರೆ.

ನನ್ನ ಫೋನ್ ಟ್ಯಾಪ್ ಆಗುತ್ತಿತ್ತು
'ಕುಮಾರಸ್ವಾಮಿ ಅವರನ್ನು ಹಿಡಿಯಬಾರದು ಎಂದು ಕಾನೂನು ಇದೆಯೇ? ನನ್ನ ಫೋನ್ ಕದ್ದಾಲಿಕೆ ಆಗುತ್ತಿದ್ದದ್ದು ನಿಜ. ಸಮ್ಮಿಶ್ರ ಸರ್ಕಾರದಲ್ಲಿ ಭಾಗವಾಗಿದ್ದಾಗಲೂ ನನ್ನ ಫೋನ್ ಟ್ಯಾಪ್ ಆಗುತ್ತಿತ್ತು. ಅದು ಕುಮಾರಸ್ವಾಮಿ ಮಾಡಿದ್ದಾರೋ, ಅಧಿಕಾರಿಗಳು ಮಾಡಿದ್ದಾರೋ ಗೊತ್ತಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ನನ್ನ ಫೋನ್ ನಂಬರ್ ಬದಲಾಯಿಸಿದೆ. ಕುಮಾರಸ್ವಾಮಿ ಅವರು ನನ್ನ ಮೇಲೆ ಕೂಡ ಅನುಮಾನಪಟ್ಟಿದ್ದರೋ ಏನೋ ಗೊತ್ತಿಲ್ಲ' ಎಂದು ಹೇಳಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications