ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.ಕೆ.ಸುರೇಶ್ ವಿರುದ್ಧ ಕುಣಿಗಲ್ ಜೆಡಿಎಸ್ ಕಾರ್ಯಕರ್ತರ ಅಸಮಾಧಾನ

|
Google Oneindia Kannada News

ತುಮಕೂರು, ಏಪ್ರಿಲ್ 04: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರುವ ತುಮಕೂರಿನ ಕುಣಿಗಲ್‌ನಲ್ಲಿ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಡಿ.ಕೆ.ಸುರೇಶ್ ಹಾಜರಿದ್ದ, ಮಾಜಿ ಶಾಸಕ ಡಿ.ನಾಗರಾಜಯ್ಯ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಜೆಡಿಎಸ್ ಸಭೆಯಲ್ಲಿ, ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಕೆಎಸ್ ಸಹೋದರರಿಗೆ ಸೋಲುಣಿಸಲು ಬಿಜೆಪಿ ತಂತ್ರ: ಯಶಸ್ವಿಯಾಗುವುದೇ?ಡಿಕೆಎಸ್ ಸಹೋದರರಿಗೆ ಸೋಲುಣಿಸಲು ಬಿಜೆಪಿ ತಂತ್ರ: ಯಶಸ್ವಿಯಾಗುವುದೇ?

ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ತಾವು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸಭೆಯಲ್ಲಿಯೇ ಮುಖಂಡರಿಗೆ ಹೇಳಿದ್ದಾರೆ. ಈ ಸಮಯ ಕಾಂಗ್ರೆಸ್ ಮುಖಂಡರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

JDS party workers of Kunigal oppose to vote for congress candidate

ಜೆಡಿಎಸ್ ಮುಖಂಡರು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರೂ ಸಹ, ಜೆಡಿಎಸ್ ಕಾರ್ಯಕರ್ತರು ಮುಖಂಡರೊಂದಿಗೆ ವಾಗ್ವಾದ ನಡೆಸಿದ್ದಾರೆ. ಡಿ.ಕೆ.ಸುರೇಶ್ ವಿರುದ್ಧವೂ ಹರಿಹಾಯ್ದಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಇದರಿಂದ ಉಂಟಾಗಿದೆ.

ಕುಣಿಗಲ್‌ನಲ್ಲಿ ಶಾಸಕ ರಂಗನಾಥ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿಕೊಂಡು ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ, ಪ್ರಭಾವ ಬಳಸಿ ಠಾಣೆಗಳನ್ನು ದೂರುಗಳನ್ನು ದಾಖಲಿಸಿದ್ದಾರೆ. ಹಿಂದಿನ ಶಾಸಕರ ಕೆಲವು ಯೋಜನೆಗಳನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು.

ಲಕ್ಷ್ಮೀ ಪುತ್ರ ಡಿ.ಕೆ.ಸುರೇಶ್ ಅವರ ಒಟ್ಟು ಆಸ್ತಿ ಎಷ್ಟು? ಲಕ್ಷ್ಮೀ ಪುತ್ರ ಡಿ.ಕೆ.ಸುರೇಶ್ ಅವರ ಒಟ್ಟು ಆಸ್ತಿ ಎಷ್ಟು?

ಕುಮಾರಸ್ವಾಮಿ ಅವರು ಐದು ವರ್ಷ ಸಿಎಂ ಆಗಿರಬೇಕೆಂದರೆ ಕಾಂಗ್ರೆಸ್‌-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಒಬ್ಬರಿಗೊಬ್ಬರು ಬೆಂಬಲ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಕಾಂತರಾಜು ಅವರು ಹೇಳಿದರು. ಇದು ಕಾರ್ಯಕರ್ತರನ್ನು ಇನ್ನಷ್ಟು ಕೆರಳಿಸಿತು.

ಡಿಕೆಶಿ, ಡಿಕೆ ಸುರೇಶ್ ದರ್ಪದ ವಿರುದ್ಧ ತೊಡೆತಟ್ಟಿದ 'ರೆಬೆಲ್ ಸ್ಟಾರ್'!ಡಿಕೆಶಿ, ಡಿಕೆ ಸುರೇಶ್ ದರ್ಪದ ವಿರುದ್ಧ ತೊಡೆತಟ್ಟಿದ 'ರೆಬೆಲ್ ಸ್ಟಾರ್'!

ಕೊನೆಗೆ ಮಾತನಾಡಿದ ನಾಗರಾಜಯ್ಯ ಅವರು, ನಾವು ಹಲವು ದಶಕಗಳಿಂದ ಕಾಂಗ್ರೆಸ್ ವಿರುದ್ಧವೇ ಹೋರಾಡಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ, ಆದರೆ ದೇವೇಗೌಡ ಅವರು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕಾರಣದಿಂದ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ, ಅವರಿಗೆ ಗೌರವ ಕೊಟ್ಟು ನಾವು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಬೇಕು ಎಂದರು. ಆ ನಂತರ ಜೆಡಿಎಸ್ ಕಾರ್ಯಕರ್ತರು ಶಾಂತರಾದರು.

English summary
Kunigal JDS party workers oppose congress candidate DK Suresh. They quarrel with JDS leaders and congress leaders in a meeting arranged today in Kunigal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X