ಹೊಗಳುವ ಭರದಲ್ಲಿ ದೇವೇಗೌಡರನ್ನು ಹುಚ್ಚುನಾಯಿಗೆ ಹೋಲಿಸಿದ ಗುಬ್ಬಿ ಶಾಸಕ
Recommended Video

ಕೊರಟಗೆರೆ, ಡಿಸೆಂಬರ್ 5: ನಮ್ಮ ಹಿಂದಿನ ಪ್ರಧಾನ ಮಂತ್ರಿಗಳನ್ನು ನೋಡಿ, ಆರಾಮವಾಗಿ ಮನೆಯಲ್ಲಿದ್ದು ಎಲ್ಲ ಸೌಕರ್ಯಗಳನ್ನು ಅನುಭವಿಸುತ್ತಿದ್ದಾರೆ. ಸರಕಾರವೇ ಅವರಿಗೆ ಎಲ್ಲ ಸವಲತ್ತು ಕೊಟ್ಟು ಬಿಳಿಯಾನೆಯ ಹಾಗೆ ಸಾಕುತ್ತಿದೆ. ಆದರೆ ಈ ಮನುಷ್ಯ ಹುಚ್ಚು ನಾಯಿ ಸುತ್ತಿದ ಹಾಗೆ ಇಡೀ ರಾಜ್ಯದಲ್ಲಿ ಸುತ್ತಾಡುತ್ತಿದ್ದಾರಲ್ರೀ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೊಗಳಿದರು.
ಹ್ಞಾಂ, ಇದು ಖಂಡಿತಾ ಹೊಗಳಿಕೆ. ಮಾಜಿ ಪ್ರಧಾನಿ- ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಬಗ್ಗೆ ಶ್ರೀನಿವಾಸ್ ಹೊಗಳಲು ಬಳಸಿದ ಮಾತಿದು. ಜೆಡಿಎಸ್ ಸಂಘಟನೆಗಾಗಿ ದೇವೇಗೌಡರು ರಾಜ್ಯದಾದ್ಯಂತ ಸುತ್ತಾಡುತ್ತಿದ್ದಾರೆ ಎಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಸಭೆಯೊಂದರಲ್ಲಿ ಜನರ ಮುಂದೆ ಹೇಳಿದ ಮಾತಿದು.

ಅಷ್ಟೇ ಅಲ್ಲ, ನಾನು (ಎಸ್.ಆರ್.ಶ್ರೀನಿವಾಸ್) ಹಾಗೂ ಪಿ.ಆರ್.ಸುಧಾಕರ್ ಲಾಲ್ (ಕೊರಟಗೆರೆ ಶಾಸಕ) ಜನರ ಕೆಲಸಗಳನ್ನು ಮಾಡಿಕೊಡುವ ಸಲುವಾಗಿ ಹುಚ್ಚುನಾಯಿಯ ಥರ ಸುತ್ತಾಡುತ್ತಿದ್ದೀವಿ ಎಂದು ಕೂಡ ಹೇಳಿದರು. ಅವರ ಭಾವನೆಯೇನೋ ಜನರಿಗೆ ಅರ್ಥವಾಯಿತು. ಆದರೆ ಬಳಸಿದ ಭಾಷೆ ಚರ್ಚೆಗೆ ಕಾರಣವಾಗಿದೆ.
ಅಂದಹಾಗೆ ಇಂಥ ಭೀಕರವಾದ ಭಾಷಣವನ್ನು ಸ್ವತಃ ದೇವೇಗೌಡರ ಎದುರಿಗೇ ಮಾಡಿದ್ದಾರೆ ಶ್ರೀನಿವಾಸ್. ಅದರ ಜತೆಗೆ, ದೇವೇಗೌಡರು ನಮಗೆ "ಜನಸೇವೆ ಮಾಡ್ರೋ ಬಡ್ಡಿ ಮಕ್ಕಳಾ" ಎಂದು ಬುದ್ಧಿ ಹೇಳುತ್ತಾರೆ ಅಂತ ಕೂಡ ಮಾತನಾಡಿದ್ದಾರೆ. ಒಟ್ಟಾರೆ ಗುಬ್ಬಿ ಶಾಸಕರ ಭಾಷಣವೇ ಈಗ ಎಲ್ಲ ಕಡೆ ಸುದ್ದಿ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications