ಶಿರಾ ಉಪಚುನಾವಣೆ: ಕಾಂಗ್ರೆಸ್ ನೆಮ್ಮದಿಗೆ ಭಂಗ ತಂದ 'ಪವಿತ್ರ ಸ್ನೇಹ'
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಶಿರಾ ಅಸೆಂಬ್ಲಿಯ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರವನ್ನು ಸಲ್ಲಿಸಿದ್ದಾಗಿದೆ. ಆದರೆ..
ಸ್ಥಳೀಯ ಮುಖಂಡರೋರ್ವರು ಬಿಜೆಪಿಗೆ ಸೇರ್ಪಡೆಗೊಂಡ ನಂತರ, ಅವರೇ ಸಂಭಾವ್ಯ ಅಭ್ಯರ್ಥಿಯಾಗುವ ಸಾಧ್ಯತೆ ಇರುವುದರಿಂದ, ಗೆದ್ದೇ ಗೆಲ್ಲುತ್ತೇವೆ ಎನ್ನುವ ಕಾಂಗ್ರೆಸ್ಸಿನ ಆತ್ಮವಿಶ್ವಾಸಕ್ಕೆ ಒಂದು ಮಟ್ಟಿಗೆ ಪೆಟ್ಟುಬಿದ್ದಿದೆ. ಯಾಕೆಂದರೆ, ಇದರ ಹಿಂದಿನ ಮರ್ಮವನ್ನು ಕಾಂಗ್ರೆಸ್ಸಿಗರು ಅರಿಯದೇ ಇರುವುದು.
ಟಿಕೆಟ್ ನೀಡುವಲ್ಲಿ ಗೊಂದಲವಿಲ್ಲದೇ ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ ಎನ್ನುವಷ್ಟರಲ್ಲಿ ರಾಜೇಶ್ ಗೌಡ, ಬಿಜೆಪಿಗೆ ಸೇರ್ಪಡೆಗೊಂಡಿರುವುದು. ಈ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಟ್ವೀಟ್, ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಕ್ಷದ ಮುಖಂಡರನ್ನು ಗೊಂದಲಕ್ಕೀಡು ಮಾಡಿದೆ.
ಇದಾದ ನಂತರ, ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಟಿಕೆಟ್ ನೀಡುವ ವಿಚಾರದಲ್ಲಿ ಡಿಕೆಶಿ ಜೊತೆಗೆ ಅಪಸ್ವರ ಎತ್ತಿದ್ದು, ಕಾಂಗ್ರೆಸ್ ಮುಖಂಡರನ್ನು ಇನ್ನಷ್ಟು ತಲೆಕೆಡೆಸಿಕೊಳ್ಳುವಂತೆ ಮಾಡಿದೆ. ಕಾಂಗ್ರೆಸ್ ನೆಮ್ಮದಿಗೆ ಭಂಗ ತಂದ 'ಪವಿತ್ರ ಸ್ನೇಹ'? ಮುಂದೆ ಓದಿ..

ಸ್ಥಳೀಯ ಮುಖಂಡ ರಾಜೇಶ್ ಗೌಡ
ಶಿರಾ ಸ್ಥಳೀಯ ಮುಖಂಡ ರಾಜೇಶ್ ಗೌಡ, ಬಿಜೆಪಿಗೆ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ನಲ್ಲಿ ಒಬ್ಬರು ಇನ್ನೊಬ್ಬರನ್ನು ಸಂಶಯದಿಂದ ನೋಡುವಂತಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣವಾಗಿರುವುದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ ಒಂದು ಟ್ವೀಟ್ ಮತ್ತು ಅದರ ಹಿಂದೆ ಮುಂದೆ ನಡೆಯುತ್ತಿರುವ ಚರ್ಚೆ.
|
ಎಚ್ಡಿಕೆ ಮಾಡಿದ ಟ್ವೀಟ್ ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿದೆ
ರಾಜೇಶ್ ಗೌಡ ಮತ್ತು ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಬ್ಯೂಸಿನೆಸ್ ಪಾಟ್ನರ್ಸ್. ಈ ವಿಚಾರವನ್ನು ಇಟ್ಟುಕೊಂಡು ಎಚ್ಡಿಕೆ ಮಾಡಿದ ಟ್ವೀಟ್ ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿದೆ. "ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ,ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ. ಉಪಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು" - ಇದು ಕುಮಾರಸ್ವಾಮಿ ಮಾಡಿದ ಟ್ವೀಟ್.

ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಕೆಶಿಗೆ ಮಾಡಿದ ಫೋನ್
ಇದಾದ ನಂತರ, ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಕೆಶಿಗೆ ಮಾಡಿದ ಫೋನ್ ಕಾಲ್. ಒಂಬತ್ತು ಬಾರಿ ಚುನಾವಣೆಗೆ ನಿಂತವರಿಗೆ ಮತ್ತೆ ಯಾಕೆ ಟಿಕೆಟ್ ನೀಡಿದ್ದೀರಿ. ರಾಜೇಶ್ ಗೌಡಗೆ ಯಾಕೆ ಟಿಕೆಟ್ ನೀಡಲಿಲ್ಲ. ಕಾಮನ್ ಸೆನ್ಸ್ ಬೇಡವೇ ಎನ್ನುವ ಸುರ್ಜೇವಾಲ ಅವರ ಮಾತು ಕಾಂಗ್ರೆಸ್ಸಿನಲ್ಲಿ ಅಶಾಂತಿ ಮೂಡಿಸಿದೆ. ಈ ವಿಚಾರವನ್ನು ಡಿಕೆಶಿ, ಸಿದ್ದರಾಮಯ್ಯಗೆ ಹೇಳಿದ್ದು ಬಹಿರಂಗವಾದ ನಂತರ, ಸಿದ್ದರಾಮಯ್ಯ ಅಷ್ಟೇ ವೇಗದಲ್ಲಿ ಅದನ್ನು ತಣ್ಣಗಾಗಿಸುವ ಪ್ರಯತ್ನವನ್ನು ಮಾಡಿದ್ದರು.

ಸಿದ್ದರಾಮಯ್ಯ ಏನಾದರೂ ಗೇಂ ಆಡುತ್ತಿದ್ದಾರಾ
ಇಲ್ಲಿ ಸಿದ್ದರಾಮಯ್ಯ ಏನಾದರೂ ಗೇಂ ಆಡುತ್ತಿದ್ದಾರಾ ಎನ್ನುವ ಸಂಶಯ ಕಾಂಗ್ರೆಸ್ಸಿಗರಿಗೆ ಮೂಡಲು ಆರಂಭವಾದದ್ದು ಎಚ್ಡಿಕೆಯ 'ಪವಿತ್ರ ಸ್ನೇಹ' ಟ್ವೀಟ್ ನಂತರ. ಇನ್ನೊಂದು, ರಣದೀಪ್ ಸುರ್ಜೇವಾಲಾಗೆ ರಾಜೇಶ್ ಗೌಡ ಬಗ್ಗೆ ಮಾಹಿತಿ ನೀಡಿದವರಾರು? ಮಾಹಿತಿ ನೀಡಿದವರು ರಾಜ್ಯ ಕಾಂಗ್ರೆಸ್ ನವರೇ ಇರಬೇಕಲ್ಲವೇ ಎನ್ನುವುದು ಇನ್ನೊಂದು ಗೊಂದಲ. ಈ ಎಲ್ಲಾ ವಿಚಾರಗಳು, ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆಯಾಗಲಿದೆಯಾ? ಕಾದು ನೋಡಬೇಕಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications