ಕರ್ನಾಟಕಕ್ಕೆ ಮಹಿಳೆಯೊಬ್ಬರು ಸಿಎಂ : ಮೋಟಮ್ಮ ಭವಿಷ್ಯ!
ತುಮಕೂರು, ಫೆ.16 : ಮಹಿಳೆಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ಕಾಂಗ್ರೆಸ್ ಹೈ ಕಮಾಂಡ್ ನಾಯಕರು ಸಹ ಇದಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಹೇಳುವ ಮೂಲಕ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಕುತೂಹಲ ಹುಟ್ಟು ಹಾಕಿದ್ದಾರೆ.
ಭಾನುವಾರ ತುಮಕೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಮೋಟಮ್ಮ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಹಿಳಾ ಸಮಾವೇಶದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರದಲ್ಲಿ ಇನ್ನು ಮುಂದೆಯಾದರೂ ಮಹಿಳೆಯರಿಗೆ ಆದ್ಯತೆ ಸಿಗಲಿ ಎಂದು ಹೇಳಿದ ಅವರು, ಮಹಿಳೆಯೊಬ್ಬರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಹಕಾರ ನೀಡುತ್ತದೆ ಎಂದು ತಿಳಿಸಿದರು.[ರಾಹುಲ್ ಗಾಂಧಿ ಭಾನುವಾರದ ಕಾರ್ಯಕ್ರಮಗಳು]
ಎರಡು ದಿನದ ರಾಜ್ಯ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಭಾನುವಾರ ತುಮಕೂರಿನಲ್ಲಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ. ಆದರೆ, ಸಮಾವೇಶದಲ್ಲೆ ಸ್ವಾಗತ ಕೋರುವ ಬ್ಯಾನರ್ ಹಾಗೂ ಬಂಟಿಂಗ್ ಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವುದನ್ನು ಬಿಟ್ಟು ಪುರುಷರಿಗೆ ಆದ್ಯತೆ ನೀಡಲಾಗಿದೆ ಎಂಬುದು ಮೋಟಮ್ಮ ಅವರ ಆರೋಪ.
ಆದ್ದರಿಂದ ಕರ್ನಾಟಕ ಸರ್ಕಾರದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿರುವ ಮೋಟಮ್ಮ ಅವರು, ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಸಚಿವ ಸ್ಥಾನದ ಪ್ರಮಬ ಆಕಾಂಕ್ಷಿಯಾಗಿರುವ ಮೋಟಮ್ಮ ಅವರು, ಸದ್ಯ ಮಹಿಳೆಯೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿಕೆ ನೀಡಿರುವುದು ತೀವ್ರ ಕುತೂಹಲ ಹುಟ್ಟಿಹಾಕಿದೆ. ಆದರೆ, ಆ ಮಹಿಳೆ ಯಾರು ಎಂಬ ಗುಟ್ಟನ್ನು ಮೋಟಮ್ಮ ಅವರು ಬಿಟ್ಟು ಕೊಟ್ಟಿಲ್ಲ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications