Breaking: ಗುಜರಾತ್ ಗಲಭೆ ಕುರಿತು ಹೇಳಿಕೆ- ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ತುಮಕೂರು ಪೊಲೀಸರು
ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮುಖಂಡ ಶರಣ್ ಪಂಪ್ವೆಲ್ 2002 ರ ಗುಜರಾತ್ ಗಲಭೆಯನ್ನು ಸಮರ್ಥಿಸಿಕೊಂಡ ಕೆಲವು ದಿನಗಳ ನಂತರ, ತುಮಕೂರಿನ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ತುಮಕೂರು, ಫೆಬ್ರವರಿ 02: ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮುಖಂಡ ಶರಣ್ ಪಂಪ್ವೆಲ್ 2002 ರ ಗುಜರಾತ್ ಗಲಭೆಯನ್ನು ಸಮರ್ಥಿಸಿಕೊಂಡ ಕೆಲವು ದಿನಗಳ ನಂತರ, ತುಮಕೂರಿನ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ತುಮಕೂರು ಪಟ್ಟಣದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪಂಪ್ವೆಲ್ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಬೇರೊಬ್ಬರ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಚೋದನಕಾರಿ ಭಾಷಣಗಳ ಮೂಲಕ ವಿಎಚ್ಪಿ ಮುಖಂಡ ಶರಣ್ ಪಂಪ್ವೇಲ್ ವಿವಿಧ ಧರ್ಮಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸೈಯದ್ ಬುರ್ಹಾನ್ ಉದ್ದೀನ್ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. ತುಮಕೂರು ಶಾಂತಿಯುತ ಸ್ಥಳವಾಗಿದ್ದು, ಪಂಪ್ವೆಲ್ನಂತಹ ಜನರು ಧಾರ್ಮಿಕ ಆಧಾರದ ಮೇಲೆ ಸಾರ್ವಜನಿಕರ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸೈಯದ್ ಬುರ್ಹಾನ್ ಉದ್ದೀನ್ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಎಚ್ಪಿಯ ಪ್ರಾಂತೀಯ ಕಾರ್ಯದರ್ಶಿ ಪಂಪ್ವೆಲ್ ಗುಜರಾತ್ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡಿದ್ದರು.
ಕಳೆದ ತಿಂಗಳು ಮಂಗಳೂರಿನಲ್ಲಿ ಕೊಲೆಯಾದ ವ್ಯಕ್ತಿ ಮೊಹಮ್ಮದ್ ಫಾಝಿಲ್ ಅವರ ತಂದೆ ಪಂಪ್ವೆಲ್ ವಿರುದ್ಧ ದೂರು ದಾಖಲಿಸಿದ್ದು, ಅಪರಾಧದಲ್ಲಿ ಆತನ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಕೋರಿದ್ದರು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ಫಾಜಿಲ್ನನ್ನು ಹತ್ಯೆ ಮಾಡಲಾಗಿದೆ ಎಂದು ಪಂಪ್ವೆಲ್ ಹೇಳಿದ್ದರು.

ಹಿಂದೂಗಳು ಫಾಜಿಲ್ನನ್ನು ಕೊಂದಿದ್ದಾರೆ ಎಂದು ಶರಣ್ ಪಂಪ್ವೆಲ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಅದು ಹಿಂದೂಗಳಲ್ಲ, ಹಿಂದುತ್ವವಾದಿಗಳು ಎಂದು ಉಮರ್ ಮಾಧ್ಯಮಗಳಿಗೆ ತಿಳಿಸಿದ್ದರು. ಫಾಜಿಲ್ ಹತ್ಯೆಯ ಹಿಂದೆ ಯಾರ ಕೈವಾಡವಿದೆ ಎಂದು ಆರು ತಿಂಗಳಿನಿಂದ ಕೇಳುತ್ತಿದ್ದೇವೆ. ಈಗ ನಮಗೆ ತಿಳಿಯಿತು. ಅದು ಶರಣ್ ಪಂಪ್ವೇಲ್ ಎಂದು. ಧೈರ್ಯವಿದ್ದರೆ ನನ್ನ ಬಳಿ ಜಗಳಕ್ಕೆ ಬರಲಿ. ಕೋಮುವಾದದ ಮೂಲಕ ಪಂಪ್ವೇಲ್ ನಮ್ಮ ಜನರನ್ನು ಹಾಳು ಮಾಡುತ್ತಿದ್ದಾರೆ. ಅವನೊಬ್ಬ ರೌಡಿ. ಅವನು ನಾಯಕರನಲ್ಲ' ಎಂದು ಫಾಜಿಲ್ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ವರ್ಷ ಜುಲೈ 19 ರಂದು 19 ವರ್ಷದ ಮಸೂದ್ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬಿದ್ದಿತ್ತು. ಇದರ ನಂತರ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಇದಕ್ಕೆ ಪ್ರತಿಕಾರವಾಗಿ ಫಾಜಿಲ್ ಹತ್ಯೆ ನಡೆಯಿತು ಎಂಬ ಆರೋಪಗಳು ಕೇಳಿಬಂದಿವೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications