ಫಿಲಿಪೈನ್ಸ್ : ಕೆಜೆಪಿ ಮುಖಂಡ ಸೇರಿ ಮೂವರ ಪರದಾಟ
ತುಮಕೂರು, ನ.11 : ಕರಾವಳಿ ದೇಶ ಫಿಲಿಪೈನ್ಸ್ ಮೇಲೆ ಅಪ್ಪಳಿಸಿರುವ ಹೈಯಾನ್ ಚಂಡಮಾರುತ ಭಾರೀ ಹಾನಿ ಉಂಟುಮಾಡಿದೆ. ಈ ಪ್ರಕೃತಿ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 10 ಸಾವಿರ ದಾಟಿದೆ ಎಂದು ಅಂದಾಜಿಸಲಾಗಿದ್ದು, ಕೆಜೆಪಿ ಮುಖಂಡ ಸೇರಿದಂತೆ ನಾಲ್ವರು ಕನ್ನಡಿಗರು ಹೋಟೆಲ್ ನಲ್ಲಿ ಸಿಕ್ಕಿಹಾಕಿಕೊಂಡು ಪರದಾಡುತ್ತಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆಜೆಪಿ ಮುಖಂಡ ಮಸಾಲ ಜಯರಾಂ ಅವರು ಮಸಾಲ ವ್ಯವಹಾರದ ನಿಮಿತ್ತ ತಮ್ಮ ಪಾಲುದಾರ ಮಣಿ, ಮತ್ತಿಬ್ಬರು ಸ್ನೇಹಿತರೊಂದಿಗೆ ಐದು ದಿನಗಳ ಹಿಂದೆ ಫಿಲಿಪೈನ್ಸ್ ಗೆ ತೆರಳಿದ್ದರು ಸದ್ಯ ಅವರು, ಹಯಾನ್ ಚಂಡಮಾರುತದ ಭೀಕರತೆಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಪ್ರಸ್ತುತ ಮನಿಲಾ ನಗರಕ್ಕೆ ಸಮೀಪವಿರುದ ಹೋಟೆಲ್ ನಲ್ಲಿ ಮಸಾಲೆ ಜಯರಾಂ ಸೇರಿದಂತೆ ನಾಲ್ವರು ಸಿಕ್ಕಿಹಾಕಿಕೊಂಡಿದ್ದಾರೆ. "30 ಅಂತಸ್ತಿನ ಹೊಟೇಲ್ ನಲ್ಲಿ ಇದ್ದೇವೆ" ಎಂದು ಮನೆಗೆ ದೂರವಾಣಿ ಮೂಲಕ ಮನೆಗೆ ಕರೆ ಮಾಡಿದ್ದ ಜಯರಾಂ, ಸುರಕ್ಷಿತವಾಗಿದ್ದೇವೆ. ಆದರೆ, ಊಟಕ್ಕಾಗಿ ಪರದಾಡಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗಾಬರಿಯಾಗಬೇಕಾದ ಅಗತ್ಯವಿಲ್ಲ, ಶೀಘ್ರವೇ ದೇಶಕ್ಕೆ ಮರಳುತ್ತೇವೆ ಎಂದು ಜಯರಾಂ ತಿಳಿಸಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ನ.6ರಂದು ಫಿಲಿಪೈನ್ಸ್ ಗೆ ತೆರಳಿದ್ದ ಜಯರಾಂ ಭಾನುವಾರ ಅಲ್ಲಿಂದ ಹೊರಟು, ಸೋಮವಾರ ಭಾರತಕ್ಕೆ ಮರಳಬೇಕಾಗಿತ್ತು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಯರಾಂ ತುರುವೆಕೆರೆ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು. ಮಸಾಲೆ ಕಾರ್ಖನೆ ನಡೆಸುವ ಇವರು ಮಸಾಲೆ ಜಯರಾಂ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಇವರ ಕಾರ್ಖನೆ ಇದ್ದು, ಸುಮಾರು 2000 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. (ಫಿಲಿಪೈನ್ಸ್ ಚಂಡಮಾರುತಕ್ಕೆ ಸಾವಿರಾರು ಮಂದಿ ಬಲಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications