ಇಲ್ಲಿ ಡಿಸಿಎಂ: ಅತ್ತ ಕೊರಟಗೆರೆಯಲ್ಲಿ ಪರಮೇಶ್ವರ್ ರಾಜಕೀಯ ಆಟವೇ ಬೇರೆ
ಸಮ್ಮಿಶ್ರ ಸರಕಾರದಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಮೃದು ಸ್ವಭಾವದಿಂದಾಗಿ ಕಾಂಗ್ರೆಸ್ ಶಾಸಕರಿಗೆ ಸರಕಾರದಲ್ಲಿ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎನ್ನುವ ಕೂಗು ಮೈತ್ರಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಇದೆ. ಖುದ್ದು ಸಿಎಂ ಕುಮಾರಸ್ವಾಮಿಯವರೇ, ಪರಮೇಶ್ವರ್ ಸ್ವಲ್ಪ ಟಫ್ ಆಗಬೇಕು ಎನ್ನುವ ಮಾತನ್ನೂ ಹೇಳಿದ್ದರು.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಕೊರಟಗೆರೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಸಿಎಂ ಅಭ್ಯರ್ಥಿಯಾಗಿದ್ದ ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ, ಜೆಡಿಸ್ ಜೊತೆ ಕೈಜೋಡಿಸಿ ಸೋಲಿಸಿದ್ದು ಎಂದೆಲ್ಲಾ ಸುದ್ದಿಯಾಗಿತ್ತು, ಇದೆಲ್ಲಾ ಸುಳ್ಳು ಎಂದು ಪರಮೇಶ್ವರ್ ಸ್ಪಷ್ಟನೆ ನೀಡಲೂ ಹೋಗಿರಲಿಲ್ಲ.
ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಕಳೆದ ಚುನಾವಣೆಯಲ್ಲಿ ತಮ್ಮನ್ನು ಯಾರು ಸೋಲಿಸಿದ್ದರೋ (ಸುಧಾಕರ್ ಲಾಲ್, ಜೆಡಿಎಸ್) ಅವರನ್ನು 7,619 ಮತಗಳ ಅಂತರದಿಂದ ಸೋಲಿಸಿ, ವಿಧಾನಸಭೆಗೆ ಆಯ್ಕೆಯಾಗಿ, ಸಮ್ಮಿಶ್ರ ಸರಕಾರದಲ್ಲಿ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿದ್ದು ಗೊತ್ತೇ ಇದೆ.
ಎರಡು ದಿನದ ಹಿಂದೆ ಹೊರಬಿದ್ದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶದ ನಂತರ ಮತ್ತೆ ಕೊರಟಗೆರೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದೆ. ಹದಿನೈದು ಸದಸ್ಯರ ಕೊರಟಗೆರೆ ಪಟ್ಟಣ ಪಂಚಾಯತ್ ನಲ್ಲಿ ಜೆಡಿಎಸ್ ಎಂಟು ಸ್ಥಾನವನ್ನು ಗೆದ್ದಿದೆ. ತುಮಕೂರು ಮಹಾನಗರಪಾಲಿಕೆಯಲ್ಲೂ ಅತಂತ್ರ ಪರಿಸ್ಥಿತಿ.
ಉಪಮುಖ್ಯಮಂತ್ರಿಯಾಗಿದ್ದರೂ, ತಮ್ಮ ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಪರಮೇಶ್ವರ್ ವಿಫಲರಾಗಿದ್ದಾರೆ ಎನ್ನುವ ಮಾತಿನ ನಡುವೆ, ತನ್ನ ಕ್ಷೇತ್ರದಲ್ಲಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಪರಮೇಶ್ವರ್ ಮಾಸ್ಟರ್ ಪ್ಲ್ಯಾನ್ ಹಣೆಯುತ್ತಿದ್ದಾರೆಂದು ವರದಿಯಾಗಿದೆ. ಇಲ್ಲಿ, ಇವರು ಸಡ್ಡು ಹೊಡೆಯಬೇಕಾಗಿರುವುದು ಜೆಡಿಎಸ್ ಪಕ್ಶಕ್ಕೆ.

ಅತಂತ್ರ ಫಲಿತಾಂಶ ಬಂದಿರುವುದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ
ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ, ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಈಗ ತುಮಕೂರು ಮಹಾನಗರಪಾಲಿಕೆಯಲ್ಲಿ ಗದ್ದುಗೇರಬೇಕಿದ್ದರೆ, ಮೈತ್ರಿ ಮಾಡಿಕೊಳ್ಳದೇ ಬೇರೆ ದಾರಿಯಿಲ್ಲ. 35 ಸದಸ್ಯರನ್ನು ಹೊಂದಿರುವ ಪಾಲಿಕೆಯಲ್ಲಿ, ಬಿಜೆಪಿ 12, ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ 10 ಮತ್ತು ಪಕ್ಷೇತರರು ಮೂರು ಸ್ಥಾನದಲ್ಲಿ ಗೆದ್ದಿದ್ದಾರೆ. ಅತಂತ್ರ ಫಲಿತಾಂಶ ಬಂದಿರುವುದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ.

ಪರಮೇಶ್ವರ್ ಹೊಸ ತಂತ್ರಗಾರಿಕೆ
ಆದರೆ, ಪಕ್ಕದ ಕೊರಟಗೆರೆಯಲ್ಲಿ, ಇದೇ ಜೆಡಿಎಸ್ ಅನ್ನು ಗದ್ದುಗೆಯಿಂದ ದೂರವಿಡಲು ಪರಮೇಶ್ವರ್ ಹೊಸ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಒಂದು ಮಹಾನಗರಪಾಲಿಕೆ, ಎರಡು ಪುರಸಭೆ ( ಮಧುಗಿರಿ, ಚಿಕ್ಕನಾಯಕನಹಳ್ಳಿ) ಮತ್ತು ಎರಡು ಪಟ್ಟಣ ಪಂಚಾಯತ್ ಗಳಲ್ಲಿ (ಗುಬ್ಬಿ, ಕೊರಟಗೆರೆ), ಮಧುಗಿರಿ ಒಂದನ್ನು ಬಿಟ್ಟು ಮಿಕ್ಕಾ ಎಲ್ಲಾ ಕಡೆ ಕಾಂಗ್ರೆಸ್ಸಿಗೆ ತೀವ್ರ ಹಿನ್ನಡೆಯಾಗಿದೆ.

ಜೆಡಿಎಸ್ ಎಂಟು, ಕಾಂಗ್ರೆಸ್ ಐದು, ಬಿಜೆಪಿ ಒಂದು ಮತ್ತು ಒಬ್ಬರು ಪಕ್ಷೇತರರು
ಕೊರಟಗೆರೆ ಪಟ್ಟಣ ಪಂಚಾಯತ್ ನಲ್ಲಿ ಜೆಡಿಎಸ್ ಎಂಟು, ಕಾಂಗ್ರೆಸ್ ಐದು, ಬಿಜೆಪಿ ಒಂದು ಮತ್ತು ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಇಲ್ಲಿ ಜೆಡಿಎಸ್ ನಿರಾಯಾಸವಾಗಿ ಅಧಿಕಾರಕ್ಕೆ ಏರಬಹುದಾಗಿದ್ದರೂ, ಕ್ಷೇತ್ರದ ಶಾಸಕರು ಮತ್ತು ತುಮಕೂರು ಸಂಸದರು ಮತ ಚಲಾಯಿಸಬಹುದಾಗಿರುವುದರಿಂದ, ಅದರ ಲಾಭವನ್ನು ಪಡೆಯಲು ಪರಮೇಶ್ವರ್ ಮುಂದಾಗಿದ್ದಾರೆ.

ಬಿಜೆಪಿ ಮತ್ತು ಪಕ್ಷೇತರ ವಿಜೇತ ಅಭ್ಯರ್ಥಿ
ಕೊರಟಗೆರೆ ಶಾಸಕರೂ ಆಗಿರುವ ಪರಮೇಶ್ವರ್ ಮತ್ತು ತುಮಕೂರು ಸಂಸದ ಕಾಂಗ್ರೆಸ್ಸಿನ ಮುದ್ದಹನುಮೇಗೌಡ ಅವರ ಜೊತೆ ಬಿಜೆಪಿ ಮತ್ತು ಪಕ್ಷೇತರ ವಿಜೇತ ಅಭ್ಯರ್ಥಿಯನ್ನು ಕಾಂಗ್ರೆಸ್ಸಿಗೆ ಸೆಳೆದು, ಅಧಿಕಾರಕ್ಕೇರುವ ರಾಜಕೀಯ ಲೆಕ್ಕಾಚಾರ ಪರಮೇಶ್ವರ್ ಹಾಕಿಕೊಂಡಿದ್ದಾರೆ ಎನ್ನುವ ಮಾಹಿತಿಯಿದೆ. ಒಂದು ವೇಳೆ, ಬಿಜೆಪಿ ಮತ್ತು ಪಕ್ಷೇತರರನ್ನು ಸೆಳೆಯಲು ಪರಮೇಶ್ವರ್ ಸಫಲರಾದರೆ, ಶಾಸಕ ಮತ್ತು ಸಂಸದರ ಬೆಂಬಲದೊಂದಿಗೆ, ಜೆಡಿಎಸ್ಸಿಗಿಂತ ಒಂದು ವೋಟು ಹೆಚ್ಚು ಕಾಂಗ್ರೆಸ್ಸಿಗೆ ಬರಲಿದೆ.

ಮೈತ್ರಿ ಎನ್ನುವುದಕ್ಕಿಂತ ಅನುಕೂಲ ರಾಜಕಾರಣ ಎನ್ನಬಹುದು
ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಹೊಂದಾಣಿಕೆ ನೋಡಿದರೆ, ಮೈತ್ರಿ ಎನ್ನುವುದಕ್ಕಿಂತ ಅನುಕೂಲ ರಾಜಕಾರಣ ಎನ್ನಬಹುದು, ಇದಕ್ಕೆ ತುಮಕೂರಿನ ರಾಜಕೀಯವೇ ಉದಾಹರಣೆ. ಆದರೆ, ಕೊರಟಗೆರೆಯಲ್ಲಿ ಪರಮೇಶ್ವರ್ ಅವರು ಉರುಳಿಸಲು ಮುಂದಾಗಿರುವ ರಾಜಕೀಯ ದಾಳ, ಸಮ್ಮಿಶ್ರ ಸರಕಾರದ ಭವಿಷ್ಯಕ್ಕೆ ಎಷ್ಟರ ಮಟ್ಟಿಗೆ ಪ್ರಭಾವ ಬೀಳಲಿದೆ ಎಂದು ಕಾದುನೋಡಬೇಕಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications