ನಾವು ಸಿಎಂ ಯಡಿಯೂರಪ್ಪ ಅವರನ್ನು ಮುದಿ ಎತ್ತು ಎಂದು ಕರೆಯೊಲ್ಲ!
ಬೆಂಗಳೂರು, ಅ. 28: ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಜಯಚಂದ್ರ ಅವರನ್ನು ಬಿಜೆಪಿಯವರು ಮುದಿ ಎತ್ತು ಎಂದು ಕರೆದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳನ್ನು ನಾವು ಏನಂತಾ ಕರೆಯಬೇಕು? ಯಡಿಯೂರಪ್ಪ ಅವರ ವಯಸ್ಸಿನ ಬಗ್ಗೆ ನಾವು ಮಾತನಾಡುವುದಿಲ್ಲ. ನಮ್ಮ ತಂದೆಗೆ ವಯಸ್ಸಾದಂತೆ ಅವರಿಗೂ ವಯಸ್ಸಾಗಿದೆ. ಜಯಚಂದ್ರ ಅವರಿಗೆ 71 ವರ್ಷ, ಮೊನ್ನೆ ಬಿಜೆಪಿ ಮಂತ್ರಿಗಳನ್ನು ಇದೇ ಜಯಚಂದ್ರ ಅವರ ಬಳಿ ತರಬೇತಿ ತೆಗೆದುಕೊಂಡು ಬನ್ನಿ ಅಂತಾ ಹೇಳಿ ಕಳುಹಿಸಿದ್ದರು.

ಅಶೋಕ್ ಅವರಿಗೆ ಜಯಚಂದ್ರ ಪಾಠ
ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಂದಾಯ ಸಚಿವ ಅಶೋಕ್ ಅವರಿಗೆ 2 ಗಂಟೆ ಪಾಠ ಮಾಡಿ ಕಳುಹಿಸಿದ್ದಾರೆ. ಜಯಚಂದ್ರ ಅವರಿಗೆ ಅಷ್ಟು ಅನುಭವವಿದೆ. ಜಯಚಂದ್ರ ಅವರನ್ನು ಮುದಿ ಎತ್ತು, ತಮ್ಮ ಅಭ್ಯರ್ಥಿ ದುಡಿಯುವ ಎತ್ತು ಎಂದು ಹೇಳುತ್ತಾರೆ. ಅವರ ಅಭ್ಯರ್ಥಿ ಏನು ದುಡಿಮೆ ಮಾಡಿದ್ದಾರೆ. ಬಿಜೆಪಿಯವರು ಬೇಕಾದರೆ ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆದುಕೊಳ್ಳಲಿ ಆದರೆ ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ ಎಂದರು.

ಕಾನೂನು ಕ್ರಮ ಕೈಗೊಳ್ಳಲಿ
ನಾವು ಇರೋ ವಿಚಾರ ಹೇಳಿದರೆ ಬಿಜೆಪಿ ಕಾರ್ಯಕರ್ತರು ಅಡ್ಡ ಹಾಕಿ, ಹೋಗಬೇಡ ಅಂತಿದ್ದಾರೆ. ಇದು ಯಾವ ದೇಶ? ಇದಕ್ಕೆಲ್ಲ ನಾವು ಬಗ್ಗುವುದಿಲ್ಲ. ನಿನ್ನೆ ಪ್ರಚಾರಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಯಾವುದೇ ಬಿಜೆಪಿ ನಾಯಕರ ಭಾಷಣಗಳನ್ನು ಮಾಡಲು ನಮ್ಮ ಕಾರ್ಯಕರ್ತರು ಬಿಡುವುದಿಲ್ಲ ಎಂದು ನಮ್ಮ ನಾಯಕರು ತೀರ್ಮಾನಿಸಿದ್ದಾರೆ ಎಂದು ಡಿಕೆಶಿ ತಿಳಿಸಿದರು.

ಇದೆಂತಹ ರಾಜಕೀಯ?
ಇದನ್ನು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರು ಗಮನದಲ್ಲಿಟ್ಟುಕೊಳ್ಳಬೇಕು. ಎಸಿಪಿಯೊಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹಿಂದಿನ ಗೇಟ್ ನಿಂದ ಹೋಗಲು ಹೇಳುತ್ತಾನೆ ಎಂದರೆ ಎಂತಹ ರಾಜಕಾರಣ ನಡೆಯುತ್ತಿದೆ. ಅವರಿಗೆ ರಕ್ಷಣೆ ಕೊಡದ ಆ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು.

ಬಿಜೆಪಿ ನಾಯಕರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ
ಬಿಜೆಪಿ ನಾಯಕರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆಯೂ ಮಾತನಾಡಲು ಆಗುತ್ತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬಗ್ಗೆಯೂ ಮಾತನಾಡಲಾಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಒಕ್ಕಲಿಗ ಸಚಿವರುಗಳಿಗೆ ಟಾಸ್ಕ್ ಕೊಟ್ಟು ಡಿ.ಕೆ ಶಿವಕುಮಾರ್ ವಿರುದ್ಧ ಮಾತನಾಡಲು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications