ನಾವು ಸಿಎಂ ಯಡಿಯೂರಪ್ಪ ಅವರನ್ನು ಮುದಿ ಎತ್ತು ಎಂದು ಕರೆಯೊಲ್ಲ!
ಬೆಂಗಳೂರು, ಅ. 28: ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಜಯಚಂದ್ರ ಅವರನ್ನು ಬಿಜೆಪಿಯವರು ಮುದಿ ಎತ್ತು ಎಂದು ಕರೆದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳನ್ನು ನಾವು ಏನಂತಾ ಕರೆಯಬೇಕು? ಯಡಿಯೂರಪ್ಪ ಅವರ ವಯಸ್ಸಿನ ಬಗ್ಗೆ ನಾವು ಮಾತನಾಡುವುದಿಲ್ಲ. ನಮ್ಮ ತಂದೆಗೆ ವಯಸ್ಸಾದಂತೆ ಅವರಿಗೂ ವಯಸ್ಸಾಗಿದೆ. ಜಯಚಂದ್ರ ಅವರಿಗೆ 71 ವರ್ಷ, ಮೊನ್ನೆ ಬಿಜೆಪಿ ಮಂತ್ರಿಗಳನ್ನು ಇದೇ ಜಯಚಂದ್ರ ಅವರ ಬಳಿ ತರಬೇತಿ ತೆಗೆದುಕೊಂಡು ಬನ್ನಿ ಅಂತಾ ಹೇಳಿ ಕಳುಹಿಸಿದ್ದರು.

ಅಶೋಕ್ ಅವರಿಗೆ ಜಯಚಂದ್ರ ಪಾಠ
ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಂದಾಯ ಸಚಿವ ಅಶೋಕ್ ಅವರಿಗೆ 2 ಗಂಟೆ ಪಾಠ ಮಾಡಿ ಕಳುಹಿಸಿದ್ದಾರೆ. ಜಯಚಂದ್ರ ಅವರಿಗೆ ಅಷ್ಟು ಅನುಭವವಿದೆ. ಜಯಚಂದ್ರ ಅವರನ್ನು ಮುದಿ ಎತ್ತು, ತಮ್ಮ ಅಭ್ಯರ್ಥಿ ದುಡಿಯುವ ಎತ್ತು ಎಂದು ಹೇಳುತ್ತಾರೆ. ಅವರ ಅಭ್ಯರ್ಥಿ ಏನು ದುಡಿಮೆ ಮಾಡಿದ್ದಾರೆ. ಬಿಜೆಪಿಯವರು ಬೇಕಾದರೆ ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆದುಕೊಳ್ಳಲಿ ಆದರೆ ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ ಎಂದರು.

ಕಾನೂನು ಕ್ರಮ ಕೈಗೊಳ್ಳಲಿ
ನಾವು ಇರೋ ವಿಚಾರ ಹೇಳಿದರೆ ಬಿಜೆಪಿ ಕಾರ್ಯಕರ್ತರು ಅಡ್ಡ ಹಾಕಿ, ಹೋಗಬೇಡ ಅಂತಿದ್ದಾರೆ. ಇದು ಯಾವ ದೇಶ? ಇದಕ್ಕೆಲ್ಲ ನಾವು ಬಗ್ಗುವುದಿಲ್ಲ. ನಿನ್ನೆ ಪ್ರಚಾರಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಯಾವುದೇ ಬಿಜೆಪಿ ನಾಯಕರ ಭಾಷಣಗಳನ್ನು ಮಾಡಲು ನಮ್ಮ ಕಾರ್ಯಕರ್ತರು ಬಿಡುವುದಿಲ್ಲ ಎಂದು ನಮ್ಮ ನಾಯಕರು ತೀರ್ಮಾನಿಸಿದ್ದಾರೆ ಎಂದು ಡಿಕೆಶಿ ತಿಳಿಸಿದರು.

ಇದೆಂತಹ ರಾಜಕೀಯ?
ಇದನ್ನು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರು ಗಮನದಲ್ಲಿಟ್ಟುಕೊಳ್ಳಬೇಕು. ಎಸಿಪಿಯೊಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹಿಂದಿನ ಗೇಟ್ ನಿಂದ ಹೋಗಲು ಹೇಳುತ್ತಾನೆ ಎಂದರೆ ಎಂತಹ ರಾಜಕಾರಣ ನಡೆಯುತ್ತಿದೆ. ಅವರಿಗೆ ರಕ್ಷಣೆ ಕೊಡದ ಆ ಪೊಲೀಸ್ ಅಧಿಕಾರಿಯನ್ನು ವಜಾಗೊಳಿಸಬೇಕು.

ಬಿಜೆಪಿ ನಾಯಕರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ
ಬಿಜೆಪಿ ನಾಯಕರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆಯೂ ಮಾತನಾಡಲು ಆಗುತ್ತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬಗ್ಗೆಯೂ ಮಾತನಾಡಲಾಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿಗಳು ಒಕ್ಕಲಿಗ ಸಚಿವರುಗಳಿಗೆ ಟಾಸ್ಕ್ ಕೊಟ್ಟು ಡಿ.ಕೆ ಶಿವಕುಮಾರ್ ವಿರುದ್ಧ ಮಾತನಾಡಲು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications