ಕುಣಿಗಲ್: ಶಾಲೆಯಲ್ಲಿ ಶಿಕ್ಷಕರ ಕೊರತೆ, ಟಿಸಿ ನೀಡುವಂತೆ ಆಗ್ರಹಿಸಿ ಪೋಷಕರ ಪ್ರತಿಭಟನೆ
ತುಮಕೂರು, ಜುಲೈ. 10: ಗ್ರಾಮೀಣ ಭಾಗ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಮಕ್ಕಳು ಶಿಕ್ಷಣ ವಂಚಿತರಾಗುವ ಹಲವು ವರದಿಗಳಿವೆ. ಶಿಕ್ಷಕರ ಕೊರತೆ, ಮೂಲಸೌಲಭ್ಯಗಳು ದೊರೆಯದಿರುವ ಘಟನೆಗಳಿವೆ. ಇಂತಹ ಘಟನೆಗಳಿಗೆ ಕೆಲವರು ಮಾತ್ರ ಪ್ರತಿರೋಧ ತೋರಿಸುತ್ತಾರೆ. ಇಂತಹದ್ದೆ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ್ದು, ವರ್ಗಾವಣೆ ಪ್ರಮಾಣ ಪತ್ರ(ಟಿಸಿ) ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಗುನ್ನಾಗರೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗುನ್ನಾಗರೆ ಗ್ರಾಮದಲ್ಲಿನ ಮಹಾತ್ಮ ಗಾಂಧಿ ಅನುದಾನಿತ ಮಾದರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಆಡಳಿತ ವೈಖರಿ ಹಾಗೂ ಬೇಜವಾಬ್ದಾರಿಯನ್ನು ಖಂಡಿಸಿ ಶಾಲೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಶಾಲಾ ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಕ್ಕಳ ಪೋಷಕರಾದ ನವೀನ್, ರಂಗಪ್ಪ, ಚೇತನ ಅವರ ನೇತೃತ್ವದಲ್ಲಿ ನೂರಾರು ಜನರು ಪ್ರತಿಭಟನೆಗಾಗಿ ಸೇರಿದ್ದರು.
ಮಹಾತ್ಮ ಗಾಂಧಿ ಅನುದಾನಿತ ಮಾದರಿ ಪ್ರೌಢ ಶಾಲೆಯಲ್ಲಿ ಎಂಟು ಶಿಕ್ಷಕರ ಪೈಕಿ, ಕೇವಲ ಇಬ್ಬರು ಶಿಕ್ಷಕರಿದ್ದು ಆರು ಮಂದಿ ಶಿಕ್ಷಕರು ನಿವೃತ್ತಿಯಾಗಿ ಎರಡು ವರ್ಷ ಕಳೆದಿದೆ. ಆದರೂ ಈವರೆಗೂ ಯಾವೊಬ್ಬ ಶಿಕ್ಷಕರನ್ನು ಆಡಳಿತ ಮಂಡಳಿ ನೇಮಕ ಮಾಡಿಕೊಂಡಿಲ್ಲ ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿತ್ತು. ಈ ಸಂಬಂಧ ವಿದ್ಯಾರ್ಥಿಗಳ ಪೋಷಕರು ಶಾಲೆಯ ಕಾರ್ಯದರ್ಶಿ ದೊಡ್ಡನಂಜಪ್ಪ ಅವರ ಗಮನಕ್ಕೆ ತಂದಿದ್ದರು. ಆದರೆ ಅವರು ಯಾವುದೇ ಕ್ರಮಕೈಗೊಂಡಿರಲಿಲ್ಲ.
ಹೀಗಾಗಿ ಬೇಸತ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಶಾಲೆಯ ಸಹವಾಸವೇ ಬೇಡ ಎಂದು ತಮ್ಮ ಮಕ್ಕಳ ಟಿಸಿ ಕೊಡುವಂತೆ ಹಲವು ದಿನಗಳಿಂದ ಬೇಡಿಕೆಯಿಟ್ಟಿದ್ದರು. ಆದರೆ ಶಾಲಾ ಆಡಳಿತ ಮಂಡಲಿ ಟಿಸಿ ಕೊಡಲಿಲ್ಲ. ಎಂಟನೇ ತರಗತಿಯಲ್ಲಿ ಏಳು ಜನ ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿಯಲ್ಲಿ 28 ಜನ ಇದ್ದಾರೆ. ಒಂಬತ್ತನೇ ತರಗತಿಗೆ ಯಾವೋಬ್ಬ ವಿದ್ಯಾರ್ಥಿ ದಾಖಲಾಗಿಲ್ಲ. ಹೀಗಾಗಿ ಉಳಿದ ವಿದ್ಯಾರ್ಥಿಗಳು ಬೇರೆ ಶಾಲೆಗೆ ಸೇರಿಕೊಳ್ಳಲು ತಮ್ಮ ಟಿಸಿ ಕೊಡುವಂತೆ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕ್ಷೇತ್ರಶಿಕ್ಷಣಾಧಿಕಾರಿ ಬೋರೇಗೌಡ, "ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶ ನೀಡಲಾಗಿತ್ತು. ಆದರೆ ಈವರೆಗೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಲ್ಲಿ ಶಾಲಾ ಆಡಳಿತ ಮಂಡಲಿ ವಿಫಲವಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕಾಗಿ ಟಿಸಿ ಕೇಳಿದ್ದಾರೆ. ಟಿಸಿ ಕೊಡುವುದು ಆಡಳಿತ ಮಂಡಳಿ ಕರ್ತವ್ಯ" ಎಂದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications