ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ: ಭಕ್ತಾದಿಗಳ ನೂಕು-ನುಗ್ಗಲು
Recommended Video

ತುಮಕೂರು, ಜನವರಿ 22: ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ನಿಗದಿ ಮಾಡಿದ್ದ ಅವಧಿ ಮುಕ್ತಾಯವಾಗಲು ಬರುತ್ತಿದ್ದಂತೆ ಭಕ್ತಾದಿಗಳಲ್ಲಿ ನೂಕು-ನುಗ್ಗಲು ಪ್ರಾರಂಭವಾಗಿ ಮಠದ ಬಳಿ ಕೆಲ ಕಾಲ ಗೊಂದಲ ಏರ್ಪಟ್ಟಿತ್ತು.
3:30 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆನಂತರ ಅಂತಿಮ ವಿಧಿ ವಿಧಾನ ಕಾರ್ಯ ಪ್ರಾರಂಭ ಆಗುತ್ತವೆ ಎನ್ನಲಾಗಿತ್ತು. ಹಾಗಾಗಿ ಲಕ್ಷಾಂತರ ಮಂದಿ ಅಂತಿಮ ದರ್ಶನಕ್ಕಾಗಿ ಸಾಲುಗಳಲ್ಲಿ ನಿಂತು ಕಾಯುತ್ತಿದ್ದರು.
ಸಾರ್ವಜನಿಕ ದರ್ಶನದ ಅವಧಿ ಮುಗಿಯುತ್ತಾ ಬಂದಷ್ಟು ಭಕ್ತಾದಿಗಳಲ್ಲಿ ಆತಂಕ ಹೆಚ್ಚಾಗಿ ಕೆಲ-ಕಾಲ ನೂಕುನುಗ್ಗಲು ಉಂಟಾಯಿತು. ಆದರೆ ಪರಿಸ್ಥಿತಿಯನ್ನು ಪೊಲೀಸರು ಹತೋಟಿಗೆ ತೆಗೆದುಕೊಂಡರು.

ಕ್ಯಾತಸಂದ್ರ ಗೇಟ್, ಗುಬ್ಬಿ ಗೇಟ್ ಸೇರಿ ಶ್ರೀ ಮಠಕ್ಕೆ ಬರುವ ಬಹುತೇಕ ದಾರಿಗಳಲ್ಲಿ ಭಕ್ತಾದಿಗಳು ಸಾಲಿನಲ್ಲಿ ಬಂದು ಶ್ರೀಗಳ ಅಂತಿಮ ದರ್ಶನ ಮಾಡಿದರು. ಸಾಲಿನಲ್ಲಿ ನಿಂತವರಿಗೆ ಸ್ಥಳೀಯರೆ ಆಹಾರ, ನೀರಿನ ವ್ಯವಸ್ಥೆ ಮಾಡಿದ್ದರು. ಸಮಯ ಮುಗಿದರೂ ಸಹ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಲೇ ಇದ್ದಾರೆ.
ಶ್ರೀಗಳ ಅಂತಿಮ ದರ್ಶನಕ್ಕೆ ಬಂದವರಿಗೆ ಸಿದ್ದಗಂಗೆ ಮತ್ತು ಇನ್ನೂ ಕೆಲವು ಕಡೆ ಉಚಿತ ವಸತಿ ಸೌಲಭ್ಯಗಳನ್ನು ಸಹ ನೀಡಲಾಗಿದೆ. ಉಚಿತ ಅನ್ನದಾಸೋಹಗಳು ಸಹ ನಡೆದವು.
ಸಾರ್ವಜನಿಕ ದರ್ಶನದ ಬಳಿಕ ಇದೀಗ ಸರ್ಕಾರದ ವತಿಯಿಂದ ಗೌರವ ಶ್ರೀಗಳಿಗೆ ಗೌರವ ಸಲ್ಲಿಸಲಾಗುತ್ತದೆ. ಆ ನಂತರ ಅಂತಿಮ ವಿಧಿ ವಿಧಾನಗಳು ಆರಂಭವಾಗುತ್ತವೆ. ಈಗಾಗಲೇ ಕ್ರಿಯಾಸಮಾಧಿ ಸಿದ್ದಗೊಂಡಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications