ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ: ಭಕ್ತಾದಿಗಳ ನೂಕು-ನುಗ್ಗಲು
Recommended Video

ತುಮಕೂರು, ಜನವರಿ 22: ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ನಿಗದಿ ಮಾಡಿದ್ದ ಅವಧಿ ಮುಕ್ತಾಯವಾಗಲು ಬರುತ್ತಿದ್ದಂತೆ ಭಕ್ತಾದಿಗಳಲ್ಲಿ ನೂಕು-ನುಗ್ಗಲು ಪ್ರಾರಂಭವಾಗಿ ಮಠದ ಬಳಿ ಕೆಲ ಕಾಲ ಗೊಂದಲ ಏರ್ಪಟ್ಟಿತ್ತು.
3:30 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆನಂತರ ಅಂತಿಮ ವಿಧಿ ವಿಧಾನ ಕಾರ್ಯ ಪ್ರಾರಂಭ ಆಗುತ್ತವೆ ಎನ್ನಲಾಗಿತ್ತು. ಹಾಗಾಗಿ ಲಕ್ಷಾಂತರ ಮಂದಿ ಅಂತಿಮ ದರ್ಶನಕ್ಕಾಗಿ ಸಾಲುಗಳಲ್ಲಿ ನಿಂತು ಕಾಯುತ್ತಿದ್ದರು.
ಸಾರ್ವಜನಿಕ ದರ್ಶನದ ಅವಧಿ ಮುಗಿಯುತ್ತಾ ಬಂದಷ್ಟು ಭಕ್ತಾದಿಗಳಲ್ಲಿ ಆತಂಕ ಹೆಚ್ಚಾಗಿ ಕೆಲ-ಕಾಲ ನೂಕುನುಗ್ಗಲು ಉಂಟಾಯಿತು. ಆದರೆ ಪರಿಸ್ಥಿತಿಯನ್ನು ಪೊಲೀಸರು ಹತೋಟಿಗೆ ತೆಗೆದುಕೊಂಡರು.

ಕ್ಯಾತಸಂದ್ರ ಗೇಟ್, ಗುಬ್ಬಿ ಗೇಟ್ ಸೇರಿ ಶ್ರೀ ಮಠಕ್ಕೆ ಬರುವ ಬಹುತೇಕ ದಾರಿಗಳಲ್ಲಿ ಭಕ್ತಾದಿಗಳು ಸಾಲಿನಲ್ಲಿ ಬಂದು ಶ್ರೀಗಳ ಅಂತಿಮ ದರ್ಶನ ಮಾಡಿದರು. ಸಾಲಿನಲ್ಲಿ ನಿಂತವರಿಗೆ ಸ್ಥಳೀಯರೆ ಆಹಾರ, ನೀರಿನ ವ್ಯವಸ್ಥೆ ಮಾಡಿದ್ದರು. ಸಮಯ ಮುಗಿದರೂ ಸಹ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಲೇ ಇದ್ದಾರೆ.
ಶ್ರೀಗಳ ಅಂತಿಮ ದರ್ಶನಕ್ಕೆ ಬಂದವರಿಗೆ ಸಿದ್ದಗಂಗೆ ಮತ್ತು ಇನ್ನೂ ಕೆಲವು ಕಡೆ ಉಚಿತ ವಸತಿ ಸೌಲಭ್ಯಗಳನ್ನು ಸಹ ನೀಡಲಾಗಿದೆ. ಉಚಿತ ಅನ್ನದಾಸೋಹಗಳು ಸಹ ನಡೆದವು.
ಸಾರ್ವಜನಿಕ ದರ್ಶನದ ಬಳಿಕ ಇದೀಗ ಸರ್ಕಾರದ ವತಿಯಿಂದ ಗೌರವ ಶ್ರೀಗಳಿಗೆ ಗೌರವ ಸಲ್ಲಿಸಲಾಗುತ್ತದೆ. ಆ ನಂತರ ಅಂತಿಮ ವಿಧಿ ವಿಧಾನಗಳು ಆರಂಭವಾಗುತ್ತವೆ. ಈಗಾಗಲೇ ಕ್ರಿಯಾಸಮಾಧಿ ಸಿದ್ದಗೊಂಡಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications