ವೀರಶೈವ- ಲಿಂಗಾಯತ ಒಂದೇ: ಸಿದ್ದಗಂಗಾ ಮಠದ ನಿಲುವು ಪ್ರಕಟ
ತುಮಕೂರು, ಸೆಪ್ಟೆಂಬರ್ 12: "ಲಿಂಗಾಯತ ಹಾಗೂ ವೀರಶೈವ ಬೇರೆ ಅಲ್ಲ" ಎಂದು ತುಮಕೂರಿನ ಸಿದ್ದಗಂಗಾ ಮಠದಿಂದ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಈಚೆಗೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದರು.
ಆದರೆ, ಒಂದೆರಡು ದಿನದಲ್ಲೇ ಮಠದಿಂದ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಲಿಂಗಾಯತ ಎನ್ನುತ್ತಾರೆ. ನಗರ ಭಾಗಗಳಲ್ಲಿ ವೀರಶೈವ ಎನ್ನುತ್ತಾರೆ. ಆದರೆ ಎರಡೂ ಬೇರೆ ಬೇರೆ ಅಲ್ಲ ಎಂದು ತಿಳಿಸಿದ್ದಾರೆ. ಈಚಿನ ಪಾಟೀಲರ ಹೇಳಿಕೆಗೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಹೇಳಿಕೆ ಬಂದಿದೆ ಎಂದು ಹೇಳಲಾಗುತ್ತಿದೆ.

ರಾಜಕೀಯ ಲಾಭಕ್ಕಾಗಿ ಮಠದ ಹೆಸರನ್ನು ಬಳಸಬೇಡಿ. ಲಿಂಗಾಯತ- ವೀರಶೈವ ಬೇರೆ ಎಂಬ ವಾದ ಮಾಡಿ, ಸಮಾಜ ಒಡೆಯುವ ಕೆಲಸ ಮಾಡಬೇಡಿ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಆದರೆ ಇದೇ ವಿಚಾರವಾಗಿ ಮಾಧ್ಯಮಗಳ ಜತೆ ಮಾತನಾಡಿದ ಎಂ.ಬಿ.ಪಾಟೀಲ, ನಾನು ಆಣೆ ಮಾಡುತ್ತೇನೆ. ಶ್ರೀಗಳು ಲಿಂಗಾಯತ ಧರ್ಮಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದರು ಎಂದಿದ್ದಾರೆ.
ಒಟ್ಟಾರೆ ಸಿದ್ದಗಂಗಾ ಮಠದ ಪ್ರಕಟಣೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications