Madhuswamy: ತಣ್ಣಗಾದ್ರಾ ಮಾಧುಸ್ವಾಮಿ? ತೋಟದ ಮನೆಯಲ್ಲಿ ಏನೇನಾಯ್ತು?
ತುಮಕೂರು ಮಾರ್ಚ್ 23: ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯವೆದ್ದ ಮಾಜಿ ಸಚಿವ ಮಾಧುಸ್ವಾಮಿ ತಣ್ಣಗಾಗಿರುವಂತೆ ಕಾಣಿಸುತ್ತಿದೆ. ಮಾಧುಸ್ವಾಮಿಯ ಕೋಪ ಶಮನ ಮಾಡಲು ಕಮಲ ನಾಯಕರು ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಬಿಜೆಪಿಯಲ್ಲಿ ಉಳಿಯಲು ಮಾಧುಸ್ವಾಮಿ ಒಪ್ಪಿದ್ದಾರೆ ಎನ್ನಲಾಗುತ್ತಿದೆ.
ಹೌದು.... ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದೆ ಬಹಿರಂಗ ಆಸಮಾಧಾನಗೊಂಡಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆಗೂ ಯಶಸ್ವಿಯಾಗಿದ್ದಾರೆ. ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಂ ಅವರ ತೋಟದ ಮನೆಯಲ್ಲಿ ಶುಕ್ರವಾರ ದಿಢೀರ್ ಗೌಪ್ಯ ಮಾತುಕತೆ ನಡೆಸಿ ಮಾಧುಸ್ವಾಮಿ ಕೋಪವನ್ನು ಶಮನ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪನವರೇ ತುಮಕೂರಿಗೆ ಆಗಮಿಸಿ ಮಾಧುಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು. ಸುಮಾರು ಅರ್ಧ ಗಂಟೆ ಉಭಯ ನಾಯಕರು ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದು ಈ ವೇಳೆ ಮಾಜಿ ಸಚಿವರಾದ ಬೈರತಿ ಬಸವರಾಜು, ಗೋಪಾಲಯ್ಯ, ಮಸಾಲ ಜಯರಾಂ ಮತ್ತಿತರ ಜಿಲ್ಲಾ ಬಿಜೆಪಿ ನಾಯಕರೂ ಇದ್ದರು ಎನ್ನಲಾಗುತ್ತಿದೆ.
ಬಳಿಕ ಮಾಯನಾಡಿದ ಯಡಿಯೂರಪ್ಪ, ಅಸಮಾಧಾನಗೊಂಡಿದ್ದ ಮಾಧುಸ್ವಾಮಿ ಮನವೊಲಿಸಿದ್ದೇನೆ. ಕೇವಲ ಪಕ್ಷದ ವಿಚಾರದ ಬಗ್ಗೆ ಮಾತ್ರ ಅವರ ಜೊತೆಗೆ ಮಾತುಕತೆಯಾಗಿದ್ದು ಚುನಾವಣೆಯಲ್ಲಿ ಸೋಮಣ್ಣ ಬೆಂಬಲಿಸುವ ಕುರಿತು ಚರ್ಚೆಯಾಗಿಲ್ಲ. ಅವರಿಗೆ ಬೆಂಬಲ ನೀಡುವದು, ಬಿಡುವುದು ಮಾಧುಸ್ವಾಮಿಗೆ ಬಿಟ್ಟ ವಿಚಾರ., ಯಾವುದೇ ಕಾರಣಕ್ಕೂ ಪಕ್ಷ ಬಿಡದಂತೆ ಅವರ ಮನವೊಲಿಸಿದ್ದು, ಅವರು ಪಕ್ಷದಲ್ಲೇ ಉಳಿಯುತ್ತಾರೆ ಎಂದರು.

ಸೋಮಣ್ಣಗೆ ಬೆಂಬಲ ನೀಡುತ್ತಾರಾ ಮಾಧುಸ್ವಾಮಿ?
ಇನ್ನೂ ಮಾಧುಸ್ವಾಮಿ ಅವರು ಸೋಮಣ್ಣ ಅವರಿಗೆ ಬೆಂಬಲ ನೀಡುತ್ತಾರಾ ಎನ್ನುವ ವಿಚಾರ ಮಾತ್ರ ಪಕ್ಕಾ ಆಗಿಲ್ಲ. ಈ ಬಗ್ಗೆ ಇನ್ನೂ ಕೂಡ ನಿರ್ಧಾರವಾಗಬೇಕಿದೆ. ಈ ಬಗ್ಗೆ ಖುದ್ದು ಮಾಧುಸ್ವಾಮಿ ಮಾತನಾಡಿದ್ದು,'ನಾನು ಪಕ್ಷ ತೊರೆಯುವ ನಿರ್ಧಾರದಿಂದ ಮಾತ್ರ ಹಿಂದೆ ಸರಿದಿದ್ದೇನೆ. ಆದರೆ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಬೆಂಬಲ ನೀಡುವ ಕುರಿತು ಇನ್ನೂ ತೀರ್ಮಾನ ಆಗಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರೊಂದಿಗೆ ಮಾತನಾಡಿದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, 'ಯಡಿಯೂರಪ್ಪ ಅವರನ್ನು ಬೆಂಬಲಿಸಿ ಜೆಡಿಯು ಬಿಟ್ಟು ಬಿಜೆಪಿಗೆ ಹೋದವನು ನಾನು. ಅವರು ಹೇಳಿದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ ಮಾಡಿಕೊಂಡಿದ್ದೆ. ಯಡಿಯೂರಪ್ಪ ಅವರು ಪಕ್ಷ ಬಿಡುವುದು ಬೇಡ ಎಂದು ಹೇಳಿದ್ದಾರೆ. ಹೀಗಾಗಿ ನಾನು ಸುಮ್ಮನಾಗುತ್ತೇನೆ' ಎಂದರು.
ಈ ಚುನಾವಣೆ ವಿಚಾರದಲ್ಲಿ ಯಾವುದೇ ಒತ್ತಡ ಹಾಕಬೇಡಿ ಎಂದು ಯಡಿಯೂರಪ್ಪ ಅವರಿಗೆ ಹೇಳಿದ್ದೇನೆ ಎಂದರು. ಜೊತೆಗೆ ನಾನು ಚುನಾವಣೆ ವಿಚಾರವಾಗಿ ಚರ್ಚೆ ಅವರೊಂದಿಗೆ ಮಾಡಿಲ್ಲ. ಚರ್ಚೆಯಾಗಿರುವುದು ಪಕ್ಷ ಬಿಡುವ ವಿಚಾರ ಮಾತ್ರ ಎಂದು ಈ ವೇಳೆ ಹೇಳಿದರು. ಜೊತೆಗೆ ನಾನು ಅಭ್ಯರ್ಥಿ ಸೋಮಣ್ಣ ಅವರಿಗೆ ನಾಲ್ಕೈದು ದಿನ ಬಿಟ್ಟು ಬರುವಂತೆ ಹೇಳಿದ್ದೇನೆ ಎಂದು ಹೇಳಿದರು. ಇದೇ ವೇಳೆ ನನ್ನ ಒಂದು ವೋಟ್ನಿಂದ ಏನಾಗುತ್ತೆ ಬಿಡಿ ಅಂತ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications