ಚುನಾವಣೆ ದಿನ ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ: ಆಗಿದ್ದೇನು?
ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಎಲ್ಲರ ಚಿತ್ತ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದತ್ತ ನೆಟ್ಟಿದೆ. ತುಮಕೂರು ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದೆ. ಇದೇ ವೇಳೆ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಹಲವು ಗುಡಿಸಲುಗಳಿಗೆ ಬಂಕಿ ಬಿದ್ದು, ಎಲ್ಲವು ಸುಟ್ಟು ಭಸ್ಮವಾಗಿವೆ.
ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ಕೊರಟಗೆರೆ (ತಾಲೂಕು) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು 10 ಗುಡಿಸಲುಗಳಿಗೆ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಎಲ್ಲ ಗುಡಿಸಲುಗಳು ಸುಟ್ಟು ಬೂದಿಯಾಗಿವೆ. ಹತ್ತಾರು ಕುಟುಂಬಸ್ಥರು ಗುಡಿಸಲು ಕಳೆದುಕೊಂಡು ಪರದಾಡಿದ್ದಾರೆ.

ಸ್ಥಳಕ್ಕೆ ಬಂದ ಚುನಾವಣಾಧಿಕಾರಿಗಳು
ಸಾರ್ವತ್ರಿಕ ಲೋಕಸಭಾ ಚುನಾವಣೆ ದಿನದಂದು ಗುಡಿಸಲಿಗೆ ಬಿದ್ದ ಬೆಂಕಿ ಬಿದ್ದಿವೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕರ್ತವ್ಯನಿರತ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸುಮಾರು 5 ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಸುಟ್ಟು ಕರಕಲಾದ ಗುಡಿಸಲಲ್ಲಿದ್ದ ವಸ್ತುಗಳು
ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದ ವೇಳೆ ಗುಡಿಸಲಿಗೆ ಬಿದ್ದ ಬೆಂಕಿ ಅಪಾರ ದಾಸ್ತಾನು, ದವಸ, ಧಾನ್ಯಗಳು ಸೇರಿದಮತೆ ಇನ್ನಿತರ ವಸ್ತುಗಳು ಬೆಂಕಿಗೆ ಸುಟ್ಟು ಕರಕಲಾಗಿವೆ. ಖಾಲಿ ನಿವೇಶನದಲ್ಲಿದ್ದ ಗುಡಿಸಲುಗಳು ಸುಟ್ಟಿರುವುದು ಗೊತ್ತಾಗಿದೆ. ಇದು ಯಾರು ಮಾಡಿದ್ದು, ಆಕಸ್ಮಿಕವಾಗಿ ನಡೆದ ದುರ್ಘನೆಯೇ ಅಥವಾ ಇದರ ಹಿಂದೆ ದುರುದ್ದೇಶ ಇದೆಯೋ ಎಂದು ತನಿಖೆಯಿಂತ ಬಹಿರಂಗವಾಗಬೇಕಿದೆ.
ಮೇಕೆಗಳ ಸ್ಥಿತಿ ಚಿಂತಾಜನಕ
ಈ ಹಿಂದೆಯೂ ಸಿಲಿಂಡರ್ ಬ್ಲಾಸ್ಟ್ಆಗಿ ಅನೇಕ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದ ಸ್ಥಳದಲ್ಲಿ ಮತ್ತೆ ಈ ಘಟನೆ ನಡೆದಿರುವುದು ಅನುಮಾನ ಮೂಡಿಸಿದೆ. ಗುಡಿಸಲಿಗೆ ಬೆಂಕಿ ಬಿದ್ದಾಗ ಪಕ್ಕದಲ್ಲಿಯೇ ಕಟ್ಟಿದ್ದ ಮೇಕೆಗಳಿಗೆ ಸುಟ್ಟ ಗಾಯಗಳಾಗಿವೆ. ಅವುಗಳ ಸ್ಥಿತಿ ಚಿಂತಾಜನಕವಾಗಿದೆ.

ಚಿಂಪುಗಾನಹಳ್ಳಿ ಗ್ರಾಮದ ಸುತ್ತಮುತ್ತ ಈ ರೀತಿ ಬೆಂಕಿ ಅವಘಡದ ಘಟನೆಗಳು ಆಗಾಗ ಮರುಕಳಿಸುತ್ತಲೇ ಇವೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ನಿವೇಶನ ಹಂಚಿ ಮನೆ ಕಟ್ಟಿಸಿ ಕೊಡಬೇಕು. ಸಂಭವನೀಯ ಅಪಾಯಗಳನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications