ಬೆಂಗಳೂರು ಉತ್ತರ ಕ್ಷೇತ್ರದ ಆಫರ್ ತಿರಸ್ಕರಿಸಿದ ಮುದ್ದಹನುಮೇಗೌಡ
ತುಮಕೂರು, ಮಾರ್ಚ್ 25: ತುಮಕೂರಿನ ಬದಲು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನೀಡಿದ್ದ ಆಫರ್ ಅನ್ನು ಸಂಸದ ಮುದ್ದಹನುಮೇಗೌಡ ತಿರಸ್ಕರಿಸಿದ್ದಾರೆ. ಅಲ್ಲದೆ, ತಾವು ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದು ನಿಶ್ಚಿತ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಆಹ್ವಾನ ತಿರಸ್ಕರಿಸುತ್ತಲೇ ಅವರು ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿ ಎಚ್ ಡಿ ದೇವೇಗೌಡ ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ನಿಂದ ಸಂಸದರಾಗಿ ಆಯ್ಕೆಯಾಗಿದ್ದ ಮುದ್ದಹನುಮೇಗೌಡ ತಮಗೆ ಟಿಕೆಟ್ ನೀಡದೆ ಇರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಇದರಿಂದ ಮೈತ್ರಿ ಮುಖಂಡರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಈ ಕಾರಣದಿಂದ ಅಸಮಾಧಾನದ ಹೊಗೆಯನ್ನು ತಣಿಸಲು ಕಾಂಗ್ರೆಸ್ ಮುಖಂಡರು ಮುದ್ದಹನುಮೇಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಆಫರ್ ನೀಡಿದ್ದರು. ಆದರೆ, ಅವರನ್ನು ಅದನ್ನು ತಿರಸ್ಕರಿಸಿದ್ದಾರೆ.

ನಾನು ತುಮಕೂರಿನ ಸಂಸದ
'ನಾನು ತುಮಕೂರಿನ ಲೋಕಸಭೆ ಸದಸ್ಯ. ಎಲ್ಲಿ ಬೇಕಾದರೂ ನಿಲ್ಲುವ ಅಧಿಕಾರ ನನಗಿಲ್ಲ. ನಾನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹೋಗಬಾರದು. ಬೇರೆ ಕ್ಷೇತ್ರದಲ್ಲಿ ನಿಲ್ಲಲು ನಾನೇನು ದೊಡ್ಡ ಲೀಡರ್ ಅಲ್ಲ. ತುಮಕೂರು ಕ್ಷೇತ್ರದಲ್ಲಿ 5 ವರ್ಷದಿಂದ ಕೆಲಸ ಮಾಡಿದ್ದೇನೆ. ಪುನಃ ಸ್ಪರ್ಧಿಸಿ ಮತದಾರರ ಮುಂದೆ ಹೋಗಲು ಹಕ್ಕಿದೆ. ಬೆಂಗಳೂರು ಉತ್ತರಕ್ಕೆ ಹೋಗಿ ನಾನೇನು ಮಾಡಲಿ?' ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.

ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿಯದ ಮುದ್ದಹನುಮೇಗೌಡ ಅವರು ಈ ಹಿಂದೆ ಹೇಳಿದಂತೆಯೇ ತುಮಕೂರು ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ಮುದ್ದಹನುಮೇಗೌಡ ಅವರ ಸ್ಪರ್ಧೆಯಿಂದ ತುಮಕೂರಿನಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಲಿದೆ. ಮೈತ್ರಿ ಪಕ್ಷದ ಅಭ್ಯರ್ಥಿ ಎಚ್ ಡಿ ದೇವೇಗೌಡ ಮತ್ತು ಬಿಜೆಪಿಯ ಜಿ.ಎಸ್. ಬಸವರಾಜು ಕಣಕ್ಕಿಳಿದಿದ್ದಾರೆ.

ನಾನು ಕಾಂಗ್ರೆಸ್ ಅಭ್ಯರ್ಥಿ
ತುಮಕೂರಿನಲ್ಲಿ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ. ಮೈತ್ರಿ ಅಭ್ಯರ್ಥಿ ಯಾರು ಎಂಬುದು ಸಹ ತಿಳಿದಿಲ್ಲ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಮಾಡಿಲ್ಲ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾನು ಕಾಂಗ್ರಸ್ ಪಕ್ಷದ ಸಂಸದ ಮತ್ತು ಪಕ್ಷದ ಸದಸ್ಯ. ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ತಿಳಿಸಿದರು.

ಬಿ ಫಾರಂ ಸಿಕ್ಕಿಲ್ಲ
ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿ ಫಾರಂ ನೀಡದೆ ಇದ್ದರೂ ಪಕ್ಷದ ಅಭ್ಯರ್ಥಿಯಾಗಿಯೇ ನಾಮಪತ್ರ ಸಲ್ಲಿಸಿದ್ದಾರೆ. ಬಿ ಫಾರಂ ನೀಡಲು ಸಮಯಾವಕಾಶವಿದೆ. ಒಂದು ವೇಳೆ ಬಿ ಫಾರಂ ಕೊಡದೆ ಇದ್ದರೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಸಾಧ್ಯತೆ ಇದೆ.
ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ತುಮಕೂರಿನ ಹೊರವಲಯದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಾತನಾಡಿದ ಅವರ, ಕಾಂಗ್ರೆಸ್ ಹೈಕಮಾಂಡ್ ಬಿಫಾರಂ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ಮುನ್ನ ಹಾಲಿ ಸಂಸದನಾದ ನನ್ನಜೊತೆ ಚರ್ಚಿಸಿಲ್ಲ ಎಂಬ ನೋವು ಇದೆ ಎಂದು ಬೇಸರ ವ್ಯಕ್ತಪಡಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications