just in: ರಾಷ್ಟ್ರಧ್ಜಜಕ್ಕೆ ಅವಮಾನ: ಬಿ.ಸಿ ನಾಗೇಶ್ ವಿರುದ್ಧ ದೂರು
ತುಮಕೂರು, ಆಗಸ್ಟ್ 12: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿರಂಗ ಯಾತ್ರೆಯಲ್ಲಿ ತ್ರಿವರ್ಣ ಧ್ವಜಕ್ಕಿಂತ ಎಬಿವಿಪಿ ಧ್ವಜವನ್ನು ಎತ್ತರದಲ್ಲಿ ಹಿಡಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಯುವ ಕಾಂಗ್ರೆಸ್ ತಿಪಟೂರಿನಲ್ಲಿ ದೂರು ದಾಖಲಿಸಿದೆ.
75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗುರುವಾರ ತಿಪಟೂರಿನಲ್ಲಿ 'ತಿರಂಗ ಯಾತ್ರೆ' ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ಬಿ.ಸಿ. ನಾಗೇಶ್ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ನಡೆಸಿದ್ದಾರೆ. ಇದೇ ಯಾತ್ರೆಯಲ್ಲಿ ತ್ರಿವರ್ಣ ಧ್ವಜಕ್ಕಿಂತಲೂ ಎತ್ತರವಾಗಿ ಎಬಿವಿಪಿ ಧ್ವಜ ಹಾರಿಸಿರುವ ಫೋಟೋ ವೈರಲ್ ಆಗಿದೆ.
ತುಮಕೂರು ಜಿಲ್ಲೆಯ ತಿಪಟೂರು ಡಿವೈಎಸ್ಪಿ ಕಚೇರಿಗೆ ಯುವ ಕಾಂಗ್ರೆಸ್ ಮುಖಂಡ ಬಿ.ವಿ. ಹರಿಪ್ರಸಾದ್ ದೂರು ನೀಡಿದ್ದಾರೆ.

ದೂರಿನಲ್ಲಿ "ಶಿಕ್ಷಣ ಸಚಿವರು ಹಾಗೂ ಶಾಸಕರು ಬಿ.ಸಿ. ನಾಗೇಶ್, ಶಾಲಾ ಸಿಬ್ಬಂದಿ ವರ್ಗ ಮತ್ತು ಮಕ್ಕಳನ್ನು ಬಳಸಿಕೊಂಡು ತ್ರಿವರ್ಣ ಧ್ವಜ ಅಂದರೆ ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುತ್ತಾರೆ. ಇದು ರಾಷ್ಟ್ರದ್ರೋಹಕ್ಕೆ ಸಮಾನವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗೆ ಬಳಸಿಕೊಳ್ಳಲಾಗಿದೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ" ಎಂದು ತಿಳಿಸಲಾಗಿದೆ.
ಘಟನೆಯನ್ನು ವಿಧಾನಪರಿಷತ್ ಪ್ರತಿಪ್ರಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕೂಡ ಖಂಡಿಸಿ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

"ತ್ರಿವರ್ಣ ಧ್ವಜದ ಮೇಲೆ ಭಾಗವಧ್ವಜ ಹಾರಿಸುವ ಮೂಲಕ ಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಖಾತೆ ಸಚಿವ ಬಿ. ಸಿ. ನಾಗೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು" ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಆಗ್ರಹಿಸಿದ್ದರು.
ಇದು ಆರ್ಎಸ್ಎಸ್ ಮನಸ್ಥಿತಿ ಎಂತದ್ದು ಎಂಬುದನ್ನು ತೋರಿಸುತ್ತದೆ ಎಂದಿದ್ದ ಅವರು, ತಪ್ಪು ಯಾರೇ ಮಾಡಿದರು ತಪ್ಪೆ. ಆದ್ದರಿಂದ ಧ್ಜಜ ಸಂಹಿತೆ ಉಲ್ಲಂಘನೆಯಡಿ ಸಚಿವ ಬಿ. ಸಿ. ನಾಗೇಶ್ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅವರು ಒತ್ತಾಯಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications