ತುಮಕೂರಿನತ್ತಲೂ ಹೆಜ್ಜೆ ಹಾಕಿದ ನಕ್ಸಲರು
ತುಮಕೂರು, ಜೂನ್ 4: ನಕ್ಸಲರ ಜಾಡು ತುಮಕೂರು ಜಿಲ್ಲೆಯಲ್ಲೂ ಮೂಡಲಾರಂಭಿಸಿವೆ. ತುಮಕೂರು ತಾಲ್ಲೂಕಿನ ತಿರುಮಣಿಗೆ ಕೇವಲ 4 ಕಿಮೀ ದೂರದಲ್ಲಿರುವ ಆಂಧ್ರಪ್ರದೇಶದ ಮೋಟಾರ್ಲ ಚಿಂತಲಪಲ್ಲಿ (ಎಂಸಿ ಪಲ್ಲಿ) ಮತ್ತು ಸಿಕೆ ಪಲ್ಲಿ (ಚಿನ್ನಕೊತ್ತ ಪಲ್ಲಿ) ಗ್ರಾಮಗಳಲ್ಲಿ ಈಚೆಗೆ ನಕ್ಸಲ್ ಹೆಸರಿನಲ್ಲಿ ಭಿತ್ತಿಪತ್ರ ಅಂಟಿಸಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಹಲವು ವರ್ಷಗಳಿಂದ ಕಾಣಿಯಾಗಿದ್ದ ನಕ್ಸಲ್ ಚಟುವಟಿಕೆಗಳು ತಾಲ್ಲೂಕಿನಲ್ಲಿ ಮತ್ತೆ ತಲೆ ಎತ್ತಿವೆ. ಆಂಧ್ರದಲ್ಲಿ ಯಾವುದೇ ಬೆಳವಣಿಗೆ ನಡೆದರೂ ತಾಲ್ಲೂಕಿನ ಮೇಲೆ ಅದರ ಪ್ರಭಾವ ನಿಚ್ಚಳವಾಗಿ ಕಾಣುತ್ತದೆ.
ಈ ಹಿಂದೆ ಆಂಧ್ರ ಪೋಲಿಸರು ನಕ್ಸಲರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ನಕ್ಸಲರು ತಾಲ್ಲೂಕಿನ ಗ್ರಾಮಗಳನ್ನು ಆಶ್ರಯತಾಣಗಳನ್ನಾಗಿಸಿಕೊಂಡು, ಇಲ್ಲಿ ಬಂದು ಅಡಗಿಕೊಳ್ಳುತ್ತಿದ್ದರು. ಆದರೆ ಒಂದಷ್ಟು ವರ್ಷಗಳಿಂದ ತಾಲ್ಲೂಕಿನಲ್ಲಿ ನಕ್ಸಲ್ ಚಟುವಟಿಕೆಗಳು ತೆರೆಮರೆಗೆ ಸರಿದಿದ್ದವು.

ಇದೀಗ ಮೇ 30ರಂದು ತಾಲ್ಲೂಕಿಗೆ ಅಂಟಿಕೊಂಡಿರುವ ಆಂಧ್ರದ ಎಂಸಿ ಪಲ್ಲಿ ಗ್ರಾಮದಲ್ಲಿ ನಕ್ಸಲ್ ನಾಯಕರ ಹೆಸರಿನಲ್ಲಿ ಭಿತ್ತಿಪತ್ರಗಳು ಪತ್ತೆಯಾಗಿವೆ. ಗ್ರಾಮದ ದೇಗುಲ, ಬಸ್ ನಿಲ್ದಾಣ ಕಾಲೋನಿಯಲ್ಲಿ ಮೂರು ಭಿತ್ತಿ ಪತ್ರ ಅಂಟಿಸಲಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಜಮೀನುದಾರರ ದೌರ್ಜನ್ಯ ಹೆಚ್ಚುತ್ತಿದೆ. ಅವರ ದೌರ್ಜನ್ಯ ನಿಯಂತ್ರಿಸುವ ಸಲುವಾಗಿ ಪ್ರತಿ ಹಳ್ಳಿಯಲ್ಲೂ ಸಂಘಟನೆ ಬಲಪಡಿಸಲಾಗುವುದು. ಬಡವರ ಮೇಲೆ ದೌರ್ಜನ್ಯ ಎಸಗುವವರನ್ನು ಶಸ್ತ್ರಾಸ್ತ್ರಗಳ ಮೂಲಕ ಅಂತ್ಯಗೊಳಿಸಲಾಗುವುದು. ಜಮೀನುದಾರರು, ಶ್ರಿಮಂತರೂ ಬಡವರೊಟ್ಟಿಗೆ ಕಷ್ಟಪಟ್ಟು ದುಡಿಯುವಂತಾಗಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಭಿತ್ತಿಪತ್ರದಲ್ಲಿ ತೆಲುಗು ಭಾಷೆಯಲ್ಲಿ ಬರೆಯಲಾಗಿದೆ. ಪತ್ರದ ಕೊನೆಯಲ್ಲಿ ಲಾಲ್ ಸಲಾಂ ಕಾಮ್ರೆಡ್ಸ್, ಕಮಾಂಡರ್ ರಮಣ ಎಂದೂ ನಮೂದಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆಂಧ್ರ ಭಾಗದ ಗ್ರಾಮಗಳಲ್ಲಿ ಆಂಧ್ರ ಪೊಲೀಸರು ಪಹರೆ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕ ಭಾಗದಲ್ಲಿ ಮಾತ್ರ ಪೋಲಿಸರಿಗೆ ಭಿತ್ತಿಪತ್ರದ ವಿಷಯವೇ ತಿಳಿದಿಲ್ಲವಂತೆ!
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications