ಮಠದ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣವಿಲ್ಲ; ಸಿದ್ದಗಂಗಾ ಶ್ರೀಗಳು
ತುಮಕೂರು, ಜೂನ್ 21 : ಸಿದ್ದಗಂಗಾ ಮಠದ ಯಾವುದೇ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲ ಎಂದು ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ ಎಂಬ ವದಂತಿಗಳು ಶನಿವಾರ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ಕೊಟ್ಟಿದ್ದಾರೆ.
ತುಮಕೂರು ಸಿದ್ದಗಂಗಾ ಮಠಕ್ಕೆ ಕೆ. ಅಣ್ಣಾಮಲೈ ಭೇಟಿ
ಆಂಧ್ರಪ್ರದೇಶದಿಂದ ಬಂದ ವಿದ್ಯಾರ್ಥಿಗೆ ಕೊರೊನಾ ಪಾಸೀಟಿವ್ ಬಂದಿದೆ ಎಂದು ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನು ಜಿಲ್ಲಾಡಳಿತ ಪರೀಕ್ಷೆ ನಡೆಸಿದ್ದು, ಆತನ ಪರೀಕ್ಷೆಯ ವರದಿ ನೆಗೆಟೀವ್ ಬಂದಿದೆ ಎಂದು ಶ್ರೀಗಳು ಹೇಳಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ ಸಿದ್ದಲಿಂಗ ಸ್ವಾಮೀಜಿ
ವಿದ್ಯಾರ್ಥಿ ಇದ್ದ ಕಟ್ಟಡದಲ್ಲಿದ್ದ ಎಲ್ಲಾ 120 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಯಾವ ವಿದ್ಯಾರ್ಥಿಗೂ ಕೂಡಾ ಸೋಂಕಿನ ಲಕ್ಷಣಗಳಿಲ್ಲ ಎಂದು ಮಠ ಸ್ಪಷ್ಟಪಡಿಸಿದೆ.
ಸಿದ್ದಗಂಗಾ ಮಠದ ಆಹಾರಕ್ಕೆ ಕತ್ತರಿ; ದಾಖಲೆಗಳು ಬಿಚ್ಚಿಟ್ಟ ಲೆಕ್ಕ
"ಶ್ರೀ ಮಠದ ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಇಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ" ಎಂದು ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಹ ಹೇಳಿಕೆ ಕೊಟ್ಟಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್ನಿಂದ ಬಂದಿರುವ ವಿದ್ಯಾರ್ಥಿಗೆ ಕೊರೊನಾ ವೈರಸ್ ಸೋಂಕು ಬಂದಿದೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಆತನನ್ನ ಕರೆದುಕೊಂಡು ಹೋಗಿ ಕೋವಿಡ್ -19 ಪರಿಕ್ಷೆ ನಡೆಸಿತ್ತು.
ಮಠದ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಜೂನ್ 25ರಿಂದ ಎಸ್. ಎಸ್. ಎಲ್. ಸಿ ಪರಿಕ್ಷೇಯನ್ನು ಬರೆಯಲಿದ್ದಾರೆ. ಮಠದಲ್ಲಿ ಸಾಮಾಜಿಕ ಅಂತರ ಕಾಪಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.