ಶಿಕ್ಷಣ ಸಚಿವರ ಮನೆ ಮುಂದೆ RSS ಚಡ್ಡಿ ಸುಟ್ಟಿದ್ದ NSUI ಕಾರ್ಯಕರ್ತರಿಗೆ ಜಾಮೀನು
ತುಮಕೂರು, ಜೂನ್ 9: ತಿಪಟೂರಿನಲ್ಲಿ ಶಿಕ್ಷಣ ಸಚಿವರ ಮನೆ ಮುಂದೆ ಆರ್ ಎಸ್ ಎಸ್ ಚಡ್ಡಿ ಸುಡುವ ಮೂಲಕ ಪ್ರತಿಭಟನೆ ನಡೆಸಿ ಜೈಲು ಸೇರಿದ್ದ 25 ಮಂದಿ ಎನ್ಎಸ್ಯುಐ ಕಾರ್ಯಕರ್ತರಿಗೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಜಿಲ್ಲಾ ಸತ್ರ ನ್ಯಾಯಾಧೀಶರಾದ ಪುಷ್ಪಾವತಿ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆದೇಶ ಪತ್ರದಲ್ಲಿ ಒಬ್ಬರಿಗೆ ಇಬ್ಬರು ಶ್ಯೂರಿಟಿ ನೀಡಬೇಕೆಂದು ತಿಳಿಸಲಾಗಿದೆ. ನ್ಯಾಯಾಲಯದ ವಿಧಿ ವಿಧಾನಗಳು ಕಾರಾಗೃಹದ ಮುಖ್ಯಸ್ಥರಿಗೆ ತಲುಪಿದ ನಂತರ ಬಂಧಿಯಾಗಿರುವ ಎಲ್ಲಾ ಎನ್ಎಸ್ಯುಐ ಕಾರ್ಯಕರ್ತರು ಬಿಡುಗಡೆಯಾಗಲಿದ್ದಾರೆ ಎಂದು ಹೇಳಿದರು.
ಕಾರ್ಯಕರ್ತರು ಪಠ್ಯ ಪರಿಷ್ಕರಣೆ ವಿರೋಧಿಸಿ ಹಾಗೂ ಇದುವರೆಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸರಬರಾಜು ಮಾಡದೇ ಇರುವ ಸರಕಾರದ ನಡೆಯನ್ನು ಖಂಡಿಸಿ, ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರು. ಇದು ಯಾವುದೇ ದುರುದ್ಧೇಶ ಪೂರ್ವಕವಾಗಿರಲಿಲ್ಲ. ಪ್ರತಿಭಟನೆ ನಡೆಸಿದ ಎನ್ಎಸ್ಯುಐ ಕಾರ್ಯಕರ್ತರ ವಿರುದ್ಧ ಬಾಂಬ್ ಅಥವಾ ಸ್ಪೋಟಕ ವಸ್ತುಗಳನ್ನು ಉಪಯೋಗಿಸುವಂತಹವರಿಗೆ ಹಾಕುವ 462 ಕಾನೂನನ್ನು ಹಾಕಿ ಜಾಮೀನು ರಹಿತ ಪ್ರಕರಣ ದಾಖಲಿಸಿ, ವಿದ್ಯಾರ್ಥಿಗಳನ್ನು ಜೈಲಿಗೆ ಕಳುಹಿಸಿರುವ ಕ್ರಮ ಖಂಡನೀಯ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಬಿಡುಗಡೆಗಾಗಿ ಕೆಪಿಸಿಸಿ ವಕೀಲರ ಘಟಕದಿಂದ ಕಳೆದ ಮೂರು ದಿನಗಳಿಂದಲೂ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಶ್ರಮಪಟ್ಟಿದ್ದಾರೆ. ಬುಧವಾರ ಸಂಜೆ ಜಾಮೀನು ಮಂಜೂರಾಗಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸತ್ಯಕ್ಕೆ ಸಂದ ಜಯವಾಗಿದೆ. ದೆಹಲಿಯ ಮುಖ್ಯಮಂತ್ರಿ ಮನೆಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಾಂಧಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಅವರ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ, ಆದರೆ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದರೆಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಜೈಲಿಗೆ ಕಳುಸಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಆರ್ ಎಸ್ ಎಸ್ ಚಡ್ಡಿ ಸುಟ್ಟು ಪ್ರತಿಭಟನೆ
ಕುವೆಂಪು, ಭಗತ್ ಸಿಂಗ್ ಸೇರಿದಂತೆ ಹಲವಾರು ಮಹನೀಯರಿಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅವಮಾನ ಮಾಡಿದೆ ಎಂದು ಎನ್ಎಸ್ಯುಐ ಜೂನ್ 1 ರಂದು ಪ್ರತಿಭಟನೆ ಮಾಡಿತ್ತು. ಈ ಸಂದರ್ಭಲ್ಲಿ ಆರ್ಎಸ್ಎಸ್ ನ ಖಾಖಿ ಚಡ್ಡಿಯನ್ನು ಸುಟ್ಟು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಈ ಘಟನೆ ಇಡೀ ಕರ್ನಾಟಕದಾದ್ಯಂತ ಭಾರಿ ಚರ್ಚೆಗೆ ಒಳಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕಳೆದ ಒಂದು ವಾರದಿಂದ ಪರ ವಿರೋಧ ಹೇಳಿಕಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ರಾಜ್ಯಾಂದ್ಯಂತ ಆರ್ ಎಸ್ ಎಸ್ ಚಡ್ಡಿ ಸುಡುವ ಅಭಿಯಾನವನ್ನೇ ಘೋಷಿಸಿದ್ದರು. ಕೆಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಟ್ಟು ಪ್ರತಿನಡೆಸಿದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಸರಕಾರ ಚಡ್ಡಿಗಳನ್ನು ಕೆಪಿಸಿಸಿ ಕಚೇರಿಗೆ ಪಾರ್ಸಲ್ ಕಳುಹಿಸಿದ್ದರು.
(ಒನ್ಇಂಡಿಯಾ ಸುದ್ದಿ)
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications