ತುಮಕೂರು : ಎಚ್ಎಎಲ್ ಹೆಲಿಕಾಪ್ಟರ್ ಘಟಕದ ವಿಶೇಷತೆಗಳು
ತುಮಕೂರು, ಡಿಸೆಂಬರ್ 17 : ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಎಚ್ಎಎಲ್) ಲಘು ಹೆಲಿಕಾಪ್ಟರ್ ಘಟಕವನ್ನು ತುಮಕೂರಿನಲ್ಲಿ ಸ್ಥಾಪನೆ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 3ರ ಭಾನುವಾರ ಘಟಕ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಘಟಕ ವಾರ್ಷಿಕ 2 ಸಾವಿರ ಕೋಟಿ ವಹಿವಾಟು ನಡೆಸಲಿದ್ದು, 3 ರಿಂದ 4 ಸಾವಿರ ನೇರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಯುಪಿಎ ಸರ್ಕಾರದ 2ನೇ ಅವಧಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ನಲ್ಲಿ ಎಚ್ಎಎಲ್ ಲಘು ಹೆಲಿಕಾಪ್ಟರ್ ಘಟಕವನ್ನು ನಿರ್ಮಾಣ ಮಾಡಲು ಒಪ್ಪಿಗೆ ದೊರಕಿತ್ತು. ಘಟಕ ಸ್ಥಾಪನೆಗೆ ಬೀದರ್ ಮತ್ತು ತುಮಕೂರಿನ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ತುಮಕೂರು ಆಯ್ಕೆಯಾಗಿತ್ತು. [ಗುಬ್ಬಿಯಲ್ಲಿ ಹೆಲಿಕಾಪ್ಟರ್ ಘಟಕ ಸ್ಥಾಪನೆ]

ಬಿದರೆಹಳ್ಳ ಕಾವಲ್ನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಘಟಕ ನಿರ್ಮಾಣ ಮಾಡುವ ಕಾರ್ಯಕ್ಕೆ ಈಗ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಸುಮಾರು 610 ಎಕರೆ ಜಾಗದಲ್ಲಿ ಘಟಕ ನಿರ್ಮಾಣಗೊಳ್ಳಲಿದೆ. ಘಟಕ ನಿರ್ಮಾಣಕ್ಕೆ ಸುಮಾರು 4000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಾಗುತ್ತಿದೆ. [ತುಮಕೂರಿನ ಮೆಗಾ ಫುಡ್ ಪಾರ್ಕ್ ಬಗ್ಗೆ ಓದಿ]
ಸ್ಥಳಾಂತರದ ಸುದ್ದಿ : ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಕೇಂದ್ರ ರಕ್ಷಣಾ ಸಚಿವರಾದ ಬಳಿಕ ಈ ಘಟಕ ಗೋವಾಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಸುದ್ದಿ ಹಬ್ಬಿತ್ತು. ಡಿಸೆಂಬರ್ 14ರಂದು ಬೆಂಗಳೂರಿಗೆ ಬಂದಿದ್ದ ಪರಿಕ್ಕರ್ ಅವರು ಘಟಕ ಸ್ಥಳಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. [ಪಾವಗಡದಲ್ಲಿ ಬೃಹತ್ ಸೌರ ಶಕ್ತಿ ಪಾರ್ಕ್ ಸ್ಥಾಪನೆಗೆ ಅಸ್ತು]

ಯಾವ ಹೆಲಿಕಾಪ್ಟರ್ ಉತ್ಪಾದನೆ? : ಗುಬ್ಬಿಯ ಉತ್ಪಾದನೆ ಘಟಕದಲ್ಲಿ 3000 ಕೆ.ಜಿ.ತೂಕದ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ನಿರ್ಮಾಣ ಮಾಡಲು ಎಚ್ಎಎಲ್ ಉದ್ದೇಶಿಸಿದೆ. 5 ರಿಂದ 6 ಜನರು ಪ್ರಯಾಣಿಸಬಹುದಾದದ ಈ ಹೆಲಿಕಾಪ್ಟರ್ ಅನ್ನು ಭೂ ಸೇನೆ ಮತ್ತು ವಾಯುಸೇನೆ ಬಳಸಲಿವೆ. ಭವಿಷ್ಯದಲ್ಲಿ ಈ ಘಟಕದಲ್ಲಿ 10 ರಿಂದ 12 ಸಾವಿರ ಟನ್ ತೂಕದ ಹೆಲಿಕಾಪ್ಟರ್ ನಿರ್ಮಾಣ ಮಾಡುವ ಗುರಿಯನ್ನು ಎಚ್ಎಎಲ್ ಹೊಂದಿದೆ.
ವಿದ್ಯುತ್ ಮಾರ್ಗ ಸ್ಥಳಾಂತರ : ಹೆಲಿಕಾಪ್ಟರ್ ಉತ್ಪಾದನಾ ಘಟಕಕ್ಕೆ ಗುರುತಿಸಿರುವ ಜಾಗದಲ್ಲಿ 220 ಕೆ.ವಿ.ಸಾಮರ್ಥ್ಯದ ಎರಡು ವಿದ್ಯುತ್ ಲೈನ್ ಹಾದು ಹೋಗಿದ್ದು, ಅದನ್ನು ಇಂಧನ ಇಲಾಖೆ ತೆರವುಗೊಳಿಸುತ್ತಿದೆ. ಘಟಕಕ್ಕೆ ಅಗತ್ಯವಾಗಿ ವಿದ್ಯುತ್ ಪೂರೈಕೆಗೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ನೀರಿನ ವ್ಯವಸ್ಥೆ : ಹೇಮಾವತಿ ನಾಲೆಯಿಂದ ಕೆರೆಗಳಿಗೆ ನೀರು ತುಂಬಿ, ಎಚ್ಎಎಲ್ ಘಟಕಕ್ಕೆ 0.43 ಟಿಎಂಸಿ ನೀರನ್ನು ಕೆರೆಗಳ ಮೂಲಕ ಪೂರೈಸಲಾಗುತ್ತದೆ. 2018-19ರ ವೇಳೆಗೆ ಘಟಕದಲ್ಲಿ ನಿರ್ಮಾಣಗೊಳ್ಳುವ ಹೆಲಿಕಾಪ್ಟರ್ ಸೇನೆಗೆ ಸೇರುವ ಸಾಧ್ಯತೆ ಇದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications