ತುಮಕೂರು: ಕೊರಟಗೆರೆಯ ಗೋಶಾಲೆಯಲ್ಲಿ ಮೇವು, ನೀರು ಇಲ್ಲದೆ 20ಕ್ಕೂ ಹೆಚ್ಚು ಜಾನುವಾರುಗಳ ಸಾವು
ತುಮಕೂರು, ಜುಲೈ. 11: ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿ ಬಳಿಯ ಗೋಮುಖ ಗೋಶಾಲೆಯಲ್ಲಿ ಕಳೆದ ಎರಡ್ಮೂರು ತಿಂಗಳಿಂದ ಸಮರ್ಪಕ ಮೇವು, ನೀರು ಸಿಗದೆ 20ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಎಮ್ಮೆ ಸೇರಿದಂತೆ ಜಾನುವಾರುಗಳನ್ನು ಕಳೆದ ಎರಡು ತಿಂಗಳಿನಿಂದ ಕೂಡಿ ಬೀಗ ಹಾಕಲಾಗಿದೆ. ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಮತ್ತು ನೀರು ಒದಗಿಸಿಲ್ಲ ಎಂದು ನಿವಾಸಿಗಳು ದೂರಿದರು. ಸರಕಾರಿ ಗೋಮಾಳದ ಜಮೀನಿನ ದಾರಿಗಾಗಿ ಮಾಲೀಕರ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಗೋಶಾಲೆಗೆ ತೆರಳುವ ಮಾರ್ಗವೇ ಬಂದ್ ಮಾಡಲಾಗಿದೆ.

ಜಮೀನು ಮತ್ತು ದಾರಿಗಾಗಿ ಸರಕಾರಿ ಗೋಮಾಳದ ಜಮೀನು ಮಾಲೀಕರು ಕೊರಟಗೆರೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಆದರೆ, ಮೇವು, ನೀರಿಲ್ಲದೆ ಪ್ರತಿನಿತ್ಯ ನರಳಾಡಿ ಮೃತ ಪಡುತ್ತಿರುವ ರಾಸುಗಳ ಕಷ್ಟ ಕೇಳುವವರಿಲ್ಲದಂತಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಡ್ಡಿಹಳ್ಳಿಯ ಸಮೀಪದ ಗೋಮುಖ ಗೋಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆಯುತ್ತಿದೆ.
ಮಧುಗಿರಿ ಪುರುವಾರ ಹೋಬಳಿ ಸುಣ್ಣವಾಡಿ ಗ್ರಾಮದ ಸರ್ವೇ.15ರ ಸರಕಾರಿ ಗೋಮಾಳದ ಜಮೀನಿನಲ್ಲಿ ದಾರಿಯಿದೆ. ಕೊರಟಗೆರೆ ತಾಲೂಕಿನ ರೆಡ್ಡಿಯಲ್ಲಿ ಗ್ರಾಮದ ಸರ್ವೇ ನಂ.43/8ರ 1ಎಕರೇ 31ಗುಂಟೆ ಜಮೀನಿನಲ್ಲಿ ಗೋಮುಖ ಗೋಶಾಲೆ ಇದೆ. ಗೋಮುಖ ಗೋಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ್ ಮತ್ತು ರೆಡ್ಡಿಯ ರೈತ ವೆಂಕಟೇಶಯ್ಯ ನಡುವಿನ ಸರಕಾರಿ ಗೋಮಾಳದ ದಾರಿಯ ಕುರಿತು ಜಗಳ ನಡೆಯುತ್ತಿದೆ. ಜಾನುವಾರುಗಳು ಮೃತಪಡುತ್ತಿದ್ದರು ಸಮಸ್ಯೆಯನ್ನು ಅರಿತು ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳ ತಂಡವು ಮೌನಕ್ಕೆ ಶರಣಾದ ಪರಿಣಾಮವೇ ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ.

20ಕ್ಕೂ ಹೆಚ್ಚು ಜಾನುವಾರುಗಳ ಸಾವು
ಸಮರ್ಪಕ ಪೋಷಣೆ ಮತ್ತು ನಿರ್ವಹಣೆ ಇಲ್ಲದೇ ಅನಾರೋಗ್ಯ ಹೆಚ್ಚಾಗಿ ಕಳೆದ 30 ದಿನದಿಂದ 12 ಜಾನುವಾರುಗಳು ಮೃತಪಟ್ಟಿವೆ. ಕಳೆದ ವಾರದಿಂದ ಗೋಶಾಲೆಗೆ ತೆರಳಲು ದಾರಿಯಿಲ್ಲದೇ ಮೇವು, ನೀರು ಸಿಗದೆ ಮತ್ತೆ 8 ರಾಸುಗಳು ದಾರುಣವಾಗಿ ಮೃತಪಟ್ಟಿವೆ. ಇದೆ ಜೊತೆಗೆ ಗೋಮುಖ ಗೋಶಾಲೆಯ ಸುತ್ತಲು ಸ್ಥಳೀಯರು ಚರಂಡಿ ತೆಗೆದು ಜಾನುವಾರುಗಳು ಹೊರಹೋಗದಂತೆ ತಡೆದಿದ್ದಾರೆ.
ಗೋಮುಖ ಗೋಶಾಲೆ
ಗೋಮುಖ ಗೋಶಾಲೆಯು ಇದೇ ವರ್ಷದ 2023 ರ ಮಾ. 9ರಂದು ಪ್ರಾರಂಭ ಆಗಿದೆ. ಗೋಶಾಲೆಯಲ್ಲಿ ಪ್ರಸ್ತುತ ಒಟ್ಟು 35 ಎಮ್ಮೆ ಮತ್ತು 14 ಹಸು ಸೇರಿ ಒಟ್ಟು 49 ರಾಸುಗಳಿವೆ. ಜಿಲ್ಲೆಯ ಪಾವಗಡ, ಮಧುಗಿರಿ, ಮಡಕಶಿರಾದ ಪೊಲೀಸ್ ಇಲಾಖೆಯಿಂದ ಚಿನ್ನಮಲ್ಲಣ್ಣಹಳ್ಳಿಯ ಸುರಭಿ ಗೋಶಾಲೆ ಮೂಲಕ ರೆಡ್ಡಿಯಲ್ಲಿಯ ಗೋಮುಖ ಗೋಶಾಲೆಗೆ ಹಸ್ತಾಂತರ ಆಗಿವೆ.

ಗೋಮಾಳಕ್ಕೆ ತೆರಳುವ ದಾರಿ ಮುಚ್ಚಿದ್ದು, ಅಲ್ಲಿಗೆ ಹೋಗಿ ಮೇವು ಮತ್ತು ನೀರು ನೀಡುಲು ಆಗುತ್ತಿಲ್ಲ. ಗೋಮಾಳದ ಜಮೀನಿನ ರಸ್ತೆಗೆ ಹಣ ನೀಡಿದರೆ ದಾರಿ ಬಿಡುವುದಾಗಿ ಮಾಲೀಕರು ಹೇಳುತ್ತಾರೆ. ಜಿಲ್ಲಾಧಿಕಾರಿ ಮತ್ತು ಮಧುಗಿರಿ ತಹಶೀಲ್ದಾರ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನಾ ಆಗಿಲ್ಲ. ಮೇವು ಮತ್ತು ನೀರು ಸರಬರಾಜು ಇಲ್ಲದೇ ಪ್ರತಿನಿತ್ಯ ಜಾಣುವಾರುಗಳು ಮೃತಪಡುತ್ತಿವೆ ಎಂದು ಗೋಮುಖ ಗೋಶಾಲೆ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಇನ್ನು, "ಗೋಶಾಲೆಗೆ ಮೇವು ಮತ್ತು ನೀರು ಪೂರೈಕೆಗೆ ಸೂಚಿಸಲಾಗಿದೆ. ಸರಕಾರಿ ಗೋಮಾಳದ ರಸ್ತೆ ಕಡಿತ ಮಾಡದಂತೆ ರೈತನಿಗೆ ಎಚ್ಚರಿಕೆ ನೀಡಲಾಗಿದೆ. ಗೋಶಾಲೆಯ ಜಾನುವಾರುಗಳಿಗೆ ಚಿಕಿತ್ಸೆ ನೀಡುವಂತೆ ಪಶು ವೈದ್ಯರಿಗೆ ತಿಳಿಸಲಾಗಿದೆ. ಜಾಣುವಾರುಗಳ ರಕ್ಷಣೆ ಮತ್ತು ಪೋಷಣೆಯ ಬಗ್ಗೆ ಮಾಹಿತಿ ನೀಡುವಂತೆ ಟ್ರಸ್ಟ್ ಅಧ್ಯಕ್ಷರಿಗೆ ಸೂಚಿಸಿದ್ದೇನೆ" ಎಂದು ಕೊರಟಗೆರೆ ತಹಶೀಲ್ದಾರ್ ಮುನಿಶಾಮಿರೆಡ್ಡಿ ತಿಳಿಸಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications