Tumkur Bus Accident : ಪಾವಗಡ ಬಸ್ ದುರಂತ: ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಎಚ್ಡಿಕೆ
ತುಮಕೂರು, ಮಾರ್ಚ್ 20: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಲು ಧಾವಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೊಂದ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದರು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ಗಾಯಾಳುಗಳಿಗೆ ತಲಾ 10,000 ರೂ. ಹಾಗೂ ದುರಂತದಲ್ಲಿ ಜೀವ ಕಳೆದುಕೊಂಡು ಆರು ಕುಟುಂಬಗಳಿಗೆ ತಲಾ 50,000 ರೂ.ಗಳ ನಗದು ಮೊತ್ತವನ್ನು ಹಸ್ತಾಂತರ ಮಾಡಿದರು. ಅಲ್ಲದೆ, ಸರಕಾರದಿಂದ ಇನ್ನೂ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿ ಹೇಳಿದರು.
ವೈದ್ಯರ ಜತೆ ಪ್ರತಿ ಗಾಯಾಳುವಿನ ಬಳಿಗೂ ತೆರಳಿದ ಕುಮಾರಸ್ವಾಮಿ ಅವರು, ಅವರ ಕ್ಷೇಮ ವಿಚಾರಿಸಿದರಲ್ಲದೆ, ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದಲ್ಲದೆ, ಅವರ ಕುಟುಂಬದ ಪರಿಸ್ಥಿತಿಗಳನ್ನು ಕೇಳಿ ತಿಳಿದುಕೊಂಡರು. ನಂತರ ವೈದ್ಯರಿಂದಲೂ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಸಂಪೂರ್ಣವಾಗಿ ಭರಿಸಬೇಕು. ಸುರಕ್ಷತಾ ಕ್ರಮಗಳಿಗೆ ಹೆಚ್ಚು ಒತ್ತು ನೀಡಿ ಅಪಘಾತಗಳನ್ನು ತಡೆಯಬೇಕು. ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತಿಯಲ್ಲಿರುವ ಬಸ್ಗಳನ್ನೇ ನೀಡಬೇಕು. ಕ್ರಮ ಜರುಗಿಸಿ ಎಂದರೆ ಖಾಸಗಿ ಬಸ್ಗಳ ಪರ್ಮಿಟ್ ರದ್ದು ಮಾಡುವುದು ಪರಿಹಾರವಲ್ಲ. ಇರುವ ನಿಯಮಗಳನ್ನು ಬಿಗಿಯಾಗಿ ಜಾರಿ ಮಾಡಬೇಕು. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡದೇ ಅವುಗಳ ಪರ್ಮಿಟ್ ರದ್ದುಗೊಳಿಸುವುದರಿಂದ ಏನು ಪ್ರಯೋಜನ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಎಲ್ಲೆಡೆ ಕೆಎಸ್ಆರ್ಟಿಸಿ ಬಸ್ಗಳ ಸಂಖ್ಯೆಯನ್ನೇ ಕಡಿಮೆ ಮಾಡಲಾಗಿದೆ. ಸಾರಿಗೆ ನೌಕರರು ಮುಷ್ಕರ ನಡೆಸಿದಾಗ ಅನೇಕ ಸಿಬ್ಬಂದಿಯನ್ನು ಮನೆಗೆ ಕಳಿಸಲಾಗಿದೆ. ಕೋವಿಡ್ ಅನಾಹುತದಿಂದಲೂ ಇಲಾಖೆ ವೆಚ್ಚ ಕಡಿತ ಮಾಡಿದೆ. ಹೀಗಾಗಿ ಕಡಿಮೆ ಬಸ್ಸುಗಳು ಓಡಾಡುತ್ತಿವೆ. ಲಾಭ-ನಷ್ಟದ ಯೋಚನೆ ಮಾಡದೆ ಪ್ರತಿ ಹಳ್ಳಿಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪಾವಗಡ ತಾಲೂಕಿನಲ್ಲಿ ಅತ್ಯಂತ ಕಡಿಮೆ ಬಸ್ಸುಗಳು ಸಂಚರಿಸುತ್ತಿವೆ ಎಂಬ ಮಾಹಿತಿ ಇದೆ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸಂಪರ್ಕವಿಲ್ಲದಂತಾಗಿದ್ದು, ತಕ್ಷಣವೇ ಕೆಎಸ್ಆರ್ಟಿಸಿ ಈ ನ್ಯೂನ್ಯತೆಗಳನ್ನು ಸರಿಪಡಿಸಬೇಕು.
ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ: ಎಚ್ಡಿಕೆ
ಬಸ್ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಸರಕಾರ ತಕ್ಷಣವೇ ಇತ್ತ ಗಮನ ಹರಿಸಬೇಕು. ಸಾರಿಗೆ ಇಲಾಖೆ ಮತ್ತು ಸರಕಾರದ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಇದರಿಂದ ಪರೀಕ್ಷೆ ಬರೆಯಬೇಕಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೆ ವಿಶೇಷ ವ್ಯವಸ್ಥೆ ಕಲ್ಪಿಸಿ ಪರೀಕ್ಷೆ ಬರೆಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಖಾಸಗಿ ಬಸ್ಸುಗಳ ಮೇಲೆ ನಿಗಾ ಇಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಜನರ ಹಿತದೃಷ್ಟಿಯಿಂದ ಚೆನ್ನಾಗಿ ಕೆಲಸ ಮಾಡಬೇಕು. ಬಸ್ʼಗಳು ಓವರ್ ಲೋಡ್ ಮಾಡುವುದಕ್ಕೆ ಅವಕಾಶ ನೀಡಬಾರದು. ಸಾರ್ವಜನಿಕರ ಅನುಕೂಲಕ್ಕೆ ಇರುವ ಕೆಎಸ್ಆರ್ಟಿಸಿಯಿಂದ ಲಾಭ ನಿರೀಕ್ಷೆ ಸರಿಯಲ್ಲ. ಆದರೆ, ಅಸಮರ್ಪಕ ನಿರ್ವಹಣೆಯಿಂದ ಹಣ ದುರುಪಯೋಗವಾಗುತ್ತಿದೆ ಎಂದು ಅವರು ಹೇಳಿದರು.
ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂಗೆ ಚಾಟಿ
ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ. ಮುಖ್ಯಮಂತ್ರಿಗಳು ನೋಡಿದರೆ ನಾಲ್ಕು ಗಂಟೆಗಳ ಕಾಲ ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಪಘಾತವಾಗಿ ಜನ ಸತ್ತರೂ, ಆಸ್ಪತ್ರೆಗಳಲ್ಲಿ ಅವರ ಆರ್ತನಾದ ಮುಗಿಲುಮುಟ್ಟಿದ್ದರೂ ಮುಖ್ಯಮಂತ್ರಿಗಳಿಗೆ ಸಿನಿಮಾ ಕಾರ್ಯಕ್ರಮವೇ ಮುಖ್ಯವಾಗಿದೆ. ನೊಂದ ಜನರಿಗೆ ಸಾಂತ್ವನ ಹೇಳುವುದಕ್ಕಿಂತ ಅವರಿಗೆ ಸಿನಿಮಾ ಕಾರ್ಯಕ್ರಮವೇ ಹೆಚ್ಚಾಗಿದೆ ಎಂದು ಕುಮಾರಸ್ವಾಮಿ ಅವರು ಬೊಮ್ಮಾಯಿ ಅವರ ಟೀಕಾಪ್ರಹಾರ ನಡೆಸಿದರು.
ನೈಜವಾಗಿ ಹೋರಾಟ ಮಾಡಿದ ವ್ಯಕ್ತಿಗಳೇ ಬೇರೆ, ಸಿನಿಮಾದಲ್ಲಿ ತೋರಿಸಿರುವುದೇ ಬೇರೆ. ಭಾವನಾತ್ಮಕ ವಿಚಾರಗಳು, ಹೆಸರುಗಳ ಮೇಲೆ ಮತ ಪಡೆಯುವುದು ಈಗೀಗ ಹೆಚ್ಚಾಗಿದೆ. ಜನರು ಬುದ್ಧಿವಂತರಾಗಬೇಕು. ಸರಕಾರದ ವೈಫಲ್ಯದಿಂದಲೇ ಈ ಅಪಘಾತವಾಗಿದೆ. ಇದರ ಹೊಣೆಯನ್ನು ಸರಕಾರವೇ ಹೊರಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. (ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications