ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ 5 ಜನೌಷಧಿ ಕೇಂದ್ರ : ಆನಂತ್ ಕುಮಾರ್
ಬೆಂಗಳೂರು ಆಗಸ್ಟ್ 26: ರಾಜ್ಯದ ಅತಿ ಹಿಂದುಳಿದ ತಾಲ್ಲೂಕಿನಲ್ಲಿ ಒಂದಾಗಿರುವ ಪಾವಗಡದಲ್ಲಿ ಕುಷ್ಟರೋಗಿಗಳು ಹಾಗೂ ಅಲ್ಲಿನ ಜನರಿಗೆ ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ 5 ಜನೌಷಧಿ ಕೇಂದ್ರಗಳನ್ನು ಮಂಜೂರು ಮಾಡುವುದಾಗಿ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಘೋಷಿಸಿದ್ದಾರೆ.
ನಗರದ ಬಸವನಗುಡಿಯಲ್ಲಿಂದು ಶ್ರೀರಾಮಕೃಷ್ಣ ಸೇವಾಶ್ರಮ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿ ಜಪಾನಂದಜಿಯವರ ಅವಿರತ ಸೇವೆಯನ್ನು ಶ್ಲಾಘಿಸಿದರು. ರೋಗಿಗಳ ಸೇವೆಯ ಜಪವನ್ನು ಮಾಡುತ್ತಿರುವ ಅವರು ಅದರಲ್ಲೇ ಆನಂದವನ್ನು ಕಾಣುತ್ತಿದ್ದಾರೆ. ಆದ್ದರಿಂದ ಜಪಾನಂದ ಎಂಬ ಹೆಸರು ಅನ್ವರ್ಥವಾಗಿದೆ ಎಂದರು.
ಬರಗಾಲದ ನಾಡು, ಹಿಂದುಳಿದ ತಾಲ್ಲೂಕಿನಲ್ಲೊಂದಾಗಿರುವ ಪಾವಗಡದಲ್ಲಿ ಕಿತ್ತುತಿನ್ನುವ ಬಡತನವಿದೆ. ಅದಕ್ಕೆ ಖ್ಯಾತಿಯಾಗಿದ್ದ ಈ ತಾಲ್ಲೂಕು ಇದೀಗ ಶ್ರೀರಾಮಕೃಷ್ಣ ಸೇವಾಶ್ರಮದ ಸೇವೆಗೆ ಹೆಸರುವಾಸಿಯಾಗಿರುವುದು ಮಹತ್ಕಾರ್ಯ ಎಂದರು.

ಪಾವಗಡ ತಾಲ್ಲೂಕಿನ ಶ್ರೀರಾಮಕೃಷ್ಣ ಸೇವಾಶ್ರಮ
ಇಂತಹ ಹಿಂದುಳಿದ ತಾಲ್ಲೂಕಿನಲ್ಲಿ ಕಳೆದ 25 ವರ್ಷಗಳಿಂದ ಅವಿರತ ಸೇವೆಯನ್ನು ಸಲ್ಲಿಸುತ್ತಿರುವ ಶ್ರೀರಾಮಕೃಷ್ಣ ಸೇವಾಶ್ರಮಕ್ಕೆ ಭಾರತ ಸರಕಾರದ ವತಿಯಿಂದ 5 ಜನೌಷಧಿ ಕೇಂದ್ರಗಳನ್ನು ಮಂಜೂರು ಮಾಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.
600 ಕ್ಕೂ ಹೆಚ್ಚು ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್ ಸೇರಿದಂತೆ ಹತ್ತು ಹಲವು ರೋಗಗಳಿಗೆ ಪರಿಣಾಮಕಾರಿ ಔಷಧಗಳನ್ನು ಈ ಜನೌಷಧಿ ಕೇಂದ್ರಗಳಲ್ಲಿ ಜನರು ಅತ್ಯಂತ ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ
ಪಾವಗಡ ತಾಲ್ಲೂಕಿನ ಹೋಬಳಿಗಳಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮದ ವತಿಯಿಂದ ಜನೌಷಧಿ ಕೇಂದ್ರಗಳನ್ನು ತೆರೆಯಲು ಅಗತ್ಯವಿರುವ ಮುಂಗಡ ಔಷಧ ಹಾಗೂ ಒಳಾಂಗಣ ವಿನ್ಯಾಸಕ್ಕೆ ಬೇಕಾಗಿರುವ ಹಣವನ್ನೂ ಭಾರತ ಸರಕಾರದ ವಹಿಸಿಕೊಳ್ಳಲಿದೆ ಎಂದು ಘೋಷಿಸಿದರು.
ಪಾವಗಡ ತಾಲ್ಲೂಕಿನ ಕುಡಿಯುವ ನೀರಿನ ಬಹಳ ಸಮಸ್ಯೆಯಿರುವುದನ್ನ ಸ್ವಾಮೀಜಿವರು ಗಮನಕ್ಕೆ ತಂದರು. ಈ ಸಮಸ್ಯೆಯ ನಿವಾರಣೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯದಿಂದ ಒಂದು ಯೋಜನೆಯನ್ನು ಪ್ರಾರಂಭಿಸುವ ಭರವಸೆಯನ್ನು ಸಚಿವ ಅನಂತಕುಮಾರ್ ನೀಡಿದರು.
ಒಂದು ತಿಂಗಳ ಒಳಗಾಗಿ ಒಪ್ಪಂದ
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲದೆ, ಕೇಂದ್ರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಅವರನ್ನು ಸ್ಥಳ ಪರಿವೀಕ್ಷಣೆಗೆ ಕಳುಹಿಸಿಕೊಡುವುದಾಗಿ ಹೇಳಿದರು.
5 ಜನೌಷಧಿ ಕೇಂದ್ರಗಳ ಪ್ರಾರಂಭಕ್ಕೆ ಬೇಕಾಗಿರುವ ಒಪ್ಪಂದವನ್ನು ಒಂದು ತಿಂಗಳ ಒಳಗಾಗಿ ಶ್ರೀ ರಾಮಕೃಷ್ಣ ಸೇವಾಶ್ರಮದ ಜೊತೆಯಲ್ಲಿ ಮಾಡಿಕೊಳ್ಳುವುದಾಗಿ ಘೋಷಿಸಿದರು.

ಪಾವಗಡದಲ್ಲಿರುವ ಆಶ್ರಮ
ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು, ಬೈಲೂರು ಮಠದ ಶ್ರೀಮತ್ ವಿನಾಯಕಾನಂದಜೀ ಮಹರಾಜ್ ಸ್ವಾಮೀಜಿ, ನ್ಯಾಯಮೂರ್ತಿ ಎಂ ಎನ್ ವೆಂಕಟಾಚಲಯ್ಯ, ಶಾಸಕ ಎಲ್ ಎ ರವಿಸುಬ್ರಮಣ್ಯ, ಶ್ರೀರಾಮಕೃಷ್ಣ ಸೇವಾಶ್ರಮದ ಜಪಾನಂದಜೀಯವರು ಪಾಲ್ಗೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications