ತುಮಕೂರಲ್ಲಿ 5 ಸಾವಿರಕ್ಕಾಗಿ ಸ್ನೇಹಿತನನ್ನೇ ಮಚ್ಚಿನಿಂದ ಕೊಂದ ಕೀಚಕ
ತುಮಕೂರು, ಜನವರಿ 30: ಕೇವಲ ಐದು ಸಾವಿರ ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ತನ್ನ ಸ್ನೇಹಿತನೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ನಗರ ಹೊರವಲಯದ ಮಾರನಾಯಕನಹಳ್ಳಿಯಲ್ಲಿ ನಡೆದಿದೆ.
ಹಣಕಾಸಿನ ವಿಚಾರವಾಗಿ ಪ್ರಾರಂಭವಾದ ಇವರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸಿದ್ಧಗಂಗಾ ಮಠದಲ್ಲಿ ಕ್ಲರ್ಕ್ ಕೆಲಸ ಮಾಡುತ್ತಿದ್ದ ಪಾಲನೇತ್ರಯ್ಯ(32) ಎಂಬುವವರೇ ಕೊಲೆಯಾದ ವ್ಯಕ್ತಿ.
ಪಾಲನೇತ್ರಯ್ಯ ಬುಧವಾರ ರಾತ್ರಿ ಮಾರನಾಯಕನಹಳ್ಳಿಯಲ್ಲಿ ಸ್ನೇಹಿತರೊಂದಿಗೆ ಕುಳಿತು ಮಾತನಾಡುವ ವೇಳೆ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಆಟೋದಲ್ಲಿ ಬಂದ ಮೂವರು, ಮಚ್ಚು ಲಾಂಗುಗಳಿಂದ ಪಾಲನೇತ್ರಯ್ಯ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಇತ್ತ ಪಾಲನೇತ್ರಯ್ಯನ ಹಣಕಾಸಿನ ವ್ಯವಹಾರ ಸೇರಿದ್ದಂತೆ ಸಂಬಂಧಿಕರ ನಡುವೆ ಇದ್ದ ಹಳೇ ದ್ವೇಷವೇ ಕೊಲೆಗೆ ಕಾರಣ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾರನಾಯಕನಹಳ್ಳಿ ಪಾಳ್ಯದ ನಿವಾಸಿ ಭರತ್ ಕೊಲೆ ಮಾಡಿದ ಆರೋಪಿಯಾಗಿದ್ದು, ನಾನೇ ಕೊಲೆ ಮಾಡಿದ್ದೇನೆ ಎಂದು ಭರತ್ ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಈತನಿಂದ ಪಾಲನೇತ್ರಯ್ಯ 6 ತಿಂಗಳ ಹಿಂದೆ 5 ಸಾವಿರ ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಂಡಿದ್ದನು.
ಕೊಟ್ಟ ಸಾಲದ ಹಣವನ್ನು ವಾಪಸ್ ಕೊಡುವಂತೆ ಭರತ್ ಪಾಲನೇತ್ರಯ್ಯನ ಬಳಿ ಕೇಳಿದಾಗ, ನಿನಗೆ ಸಾಲ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದನು. ಇದರಿಂದ ಕಂಗಲಾದ ಭರತ್ ಪಾಲನೇತ್ರಯ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಭರತ್ ನೇರವಾಗಿ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಹೋಗಿ ನಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಇತ್ತ ರಾತ್ರಿ ಕೊಲೆ ವಿಚಾರ ತಿಳಿದ ತಕ್ಷಣ ಪಾಲನೇತ್ರಯ್ಯನ ಸಂಬಂಧಿಕರಾದ ರುದ್ರೇಶ, ಜಗದೀಶ, ಗಂಗಣ್ಣ, ಮಂಗಳಮ್ಮ, ಜಯಲಕ್ಷ್ಮಿ ಮನೆ ಖಾಲಿ ಮಾಡಿ ಊರಿನಿಂದ ಕಾಲ್ಕಿತ್ತಿದ್ದಾರೆ. ಸಂಬಂಧಿಕರು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಕ್ಯಾತಸಂದ್ರ ಪೊಲೀಸರು ಭರತನನ್ನು ಇಟ್ಟುಕೊಂಡು ನಾಪತ್ತೆಯಾಗಿರುವ ಸಂಬಂಧಿಕರನ್ನು ಪತ್ತೆ ಹಚ್ಚಲು ಹುಡುಕಾಟ ಪ್ರಾರಂಭಿಸಿದ್ದಾರೆ.
ಮಾರನಾಯಕನಹಳ್ಳಿ ಗ್ರಾಮದ ನಿವಾಸಿಗಳು ಹಾಗೂ ಸಂಬಂಧಿಕಾರಾದ ರುದ್ರೇಶ್, ಜಗದೀಶ್, ಎಂ.ಎಸ್ ಕುಮಾರ್, ಮಂಗಳಮ್ಮ, ಜಯಲಕ್ಷ್ಮಿ ಅವರೊಂದಿಗೂ ಪಾಲನೇತ್ರಯ್ಯ ಈ ಹಿಂದೆ ಜಗಳವಾಡಿಕೊಂಡಿದ್ದನು. ಇದೇ ದ್ವೇಷಕ್ಕೆ ಭರತನ ಸಹಾಯ ಪಡೆದ ಸಂಬಂಧಿಕರು ಪಾಲನೇತ್ರಯ್ಯನ ಕೊಲೆಗೆ ಸಂಚು ರೂಪಿಸಿ, ಬುಧವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications