'ಪ್ರಧಾನಿ ಸಂಸತ್ ಗೂ ಬರಲ್ಲ, ಭೇಟಿಗೆ ಅವಕಾಶವೂ ನೀಡಲ್ಲ'
ಪ್ರಧಾನಿ ಮೋದಿ ಸಂಸತ್ ಗೂ ಬರಲ್ಲ, ಭೇಟಿಗೂ ಅವಕಾಶ ನೀಡಲ್ಲ. ಇನ್ನು ರಾಜ್ಯದ ಸಮಸ್ಯೆ ಯಾರ ಹತ್ತಿರ ಹೇಳೋದು? ಎಂದು ತುಮಕೂರಿನಲ್ಲಿ ಬರ ಅಧ್ಯಯನಕ್ಕೆ ತೆರಳಿದ್ದ ವೇಳೆ ಸಚಿವ ಜಯಚಂದ್ರ ಆರೋಪಿಸಿದ್ದಾರೆ
ಪಾವಗಡ, ಡಿಸೆಂಬರ್ 21: ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಬುಧವಾರ ಹಾಜರಿದ್ದದ್ದು ಸಚಿವ ಟಿ.ಬಿ.ಜಯಚಂದ್ರ ಮಾತ್ರ. ಕೃಷ್ಣ ಬೈರೇಗೌಡ, ಡಿ.ಕೆ.ಶಿವಕುಮಾರ್ ಇಬ್ಬರೂ ಗೈರಾಗಿದ್ದರು. ಈ ವೇಳೆ ಮಾತನಾಡಿದ ಜಯಚಂದ್ರ, ರಾಜ್ಯದಿಂದ ಅತಿ ಹೆಚ್ಚು ಬಿಜೆಪಿ ಸಂಸದರನ್ನು ಆರಿಸಿ ಕಳಿಸಲಾಗಿದೆ. ಆದರೂ ರಾಜ್ಯದ ಸಮಸ್ಯೆ ಬಗ್ಗೆ ತಿಳಿಸೋಣ ಅಂದರೆ ಪ್ರಧಾನಿ ಭೇಟಿಗೆ ಅವಕಾಶ ನೀಡಲ್ಲ ಎಂದು ಆರೋಪಿಸಿದರು.
ನಾವೇನೂ ಬರ ವಿಚಾರವಾಗಿ ರಾಜಕೀಯ ಮಾಡುವ ಅಗತ್ಯ ಇಲ್ಲ. ನಮಗೆ ಭೇಟಿಗೆ ಅವಕಾಶ ನೀಡೋದಿಲ್ಲ ಅನ್ನೋದು ಒಂದು ಕಡೆಯಾಯಿತು. ಸರಿ, ಸಂಸತ್ ಗೂ ಬರಲ್ವಲ್ಲ. ಇನ್ನು ನಮ್ಮ ಸಮಸ್ಯೆಯನ್ನು ಹೇಗೆ ಹೇಳಿಕೊಳ್ಳಬೇಕು ಎಂದು ಪ್ರಶ್ನಿಸಿದರು. ಮೂವರು ಸಚಿವರ ತಲೆದಂಡ ಆಗಲಿದೆ ಎಂದು ಯಡಿಯೂರಪ್ಪ ಹೇಳ್ತಿದ್ದಾರಲ್ಲ ಎಂದು ಮಾಧ್ಯಮದವರು ಪ್ರಶ್ನಿಸಿದರು.[ಪ್ರಧಾನಿ ಬಳಿ ನಿಯೋಗ: ಸಿದ್ದು, ಬಿಎಸ್ವೈ ಅದೇ ರಾಗ ಅದೇ ಹಾಡು]

ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದೇ ಜ್ಯೋತಿಷ್ಯವನ್ನು ನಂಬಿ. ಹಾಗಾಗಿ ಅವರು ಭವಿಷ್ಯ ನುಡಿಯುತ್ತಾರೆ. ನಾವು ಅದನ್ನೆಲ್ಲ ನಂಬಲ್ಲ ಎಂದು ಜಯಚಂದ್ರ ವ್ಯಂಗ್ಯವಾಡಿದರು. ಇನ್ನು ಮೇಟಿ ವಿಡಿಯೋ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ವಿಚಾರದಲ್ಲಿ ಷಡ್ಯಂತ್ರ ನಡೆದಿದೆ ಎಂದು ಈಗ ಗೊತ್ತಾಗುತ್ತಿದೆ. ಮಾದ್ಗ್ಯಮದವರು ಮುಂಚೆಯೇ ತೀರ್ಪು ಕೊಟ್ಟುಬಿಟ್ಟರು ಎಂದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications