Dog attack: ಕೂಲಿ ಕಾರ್ಮಿಕನ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಯ ಮೂರು ನಾಯಿಗಳ ದಾಳಿ, ಮುಂದಾಗಿದ್ದೇನು ಗೊತ್ತಾ?-ಇಲ್ಲಿದೆ ವಿವರ
ಹಿರಿಯೂರು, ಡಿಸೆಂಬರ್, 25: ಊಟ ತರಲು ಹೋಗುತ್ತಿದ್ದಾಗ ಮೂರು ನಾಯಿಗಳು ದಾಳಿ ನಡೆಸಿ, ಅಮಾಯಕ ಕೂಲಿ ಕಾರ್ಮಿಕನನ್ನು ಕಚ್ಚಿ ಗಾಯಗೊಳಿಸಿದ ಘಟನೆ ನಂದಿಹಳ್ಳಿ ಸಮೀಪ ಭಾನುವಾರ (ಡಿಸೆಂಬರ್ 24) ರಾತ್ರಿ ನಡೆದಿದೆ.
ಶಿರಾ ತಾಲೂಕಿನ ಯರದಕಟ್ಟೆ ಗ್ರಾಮ ಮಧು (23) ವರ್ಷ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಾಲೂಕಿನ ನಂದಿಹಳ್ಳಿ ಬಳಿ ಇರುವ ಖಾಸಗಿ ಅಸೆಂಟ್ ಪಿಯು ಕಾಲೇಜು ಶಿಕ್ಷಣ ಸಂಸ್ಥೆಗೆ ಸೇರಿದ ನಾಯಿಗಳು ವ್ಯಕ್ತಿ ಮೇಲೆ ಹಾಗೂ ಬಲಗೈಯನ್ನು ರಕ್ತ ಸುರಿಯುವಂತೆ ಕಚ್ಚಿ ಮನಸೋ ಇಚ್ಛೆ ಬಂದಂತೆ ದಾಳಿ ನಡೆಸಿ, ಗಂಭೀರವಾಗಿ ಗಾಯಗೊಳಿಸಿವೆ ಎಂದು ತಿಳಿದುಬಂದಿದೆ.

ಇನ್ನು ನಾಯಿಯ ದಾಳಿಗೆ ಒಳಗಾಗಿರುವ ವ್ಯಕ್ತಿ ಘಡ ಘಡ ನಡುಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಗಾಯಗೊಂಡ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನಂದಿಹಳ್ಳಿ ಬಳಿ ಕೆಲಸಕ್ಕೆ ಬಂದಿದ್ದ ಬಡ ಕಾರ್ಮಿಕ ಮಧು ಊಟ ತರಲು ನಂದಿಹಳ್ಳಿ ಕಡೆಯಿಂದ ಆದಿವಾಲ ಕಡೆಗೆ ನಡೆದುಕೊಂಡು ಬರುವಾಗ ಶಿಕ್ಷಣ ಸಂಸ್ಥೆಯ ನಾಯಿಗಳು ದಾಳಿ ನಡೆಸಿವೆ. ಕಾರ್ಮಿಕನ ಕಿರುಚಾಟ ಕೇಳಿ ವಾಹನ ಸವಾರರು ರಕ್ಷಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇರಬೇಕಿದ್ದ ನಾಯಿಗಳು ರಸ್ತೆಗೆ ಬಂದು ಅಮಾಯಕನ ಮೇಲೆ ದಾಳಿಯನ್ನು ಖಂಡಿಸಿ ಸಂಸ್ಥೆಯ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಆಸ್ಪತ್ರೆ ಬಳಿ ಬಂದು ಗಾಯಳನ್ನು ನೋಡುತ್ತಾ ನಿಂತಿದ್ದ ಸಂಸ್ಥೆಯ ಟ್ರಸ್ಟಿ ಮೂರ್ತಿ ಅವರನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕನ ಜೀವಕ್ಕೆ ಹೆಚ್ಚು ಕಡಿಮೆ ಆದರೆ ನೀವೇ ಹೊಣೆಗಾರರು, ಜೊತೆಗೆ ನಿಮ್ಮ ಶಿಕ್ಷಣ ಸಂಸ್ಥೆಯನ್ನು ಮುಚ್ಚಿ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications