ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ: ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ
ತುಮಕೂರು, ಜನವರಿ 18: ರಾಜ್ಯದಲ್ಲಿ ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತುಮಕೂರು ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಗೋವುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮುಖಂಡ ಕೋರಿ ಮಂಜುನಾಥ್ ಮಾತನಾಡಿ, 'ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ, ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವರಿಗೆ ಹರಕೆ ಬಿಟ್ಟಿದ್ದ ಗೂಳಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಕೃತ್ಯ ಖಂಡನೀಯ. ಗೋವುಗಳನ್ನು ಪೂಜಿಸುವ ಹಿಂದೂಗಳ ಭಾವನೆಗೆ ಈ ಪ್ರಕರಣಗಳು ನೋವು ಉಂಟು ಮಾಡಿವೆ. ದುಷ್ಕೃತ್ಯ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು' ಎಂದು ಒತ್ತಾಯಿಸಿದರು.
ಸಂಘನೆಯ ಮುಖಂಡ ಪ್ರದೀಪ್ ಮಾತನಾಡಿ, 'ನಮ್ಮ ಪೂಜ್ಯನೀಯ, ನಿರುಪದ್ರವಿ ಗೋವಿನ ಕೆಚ್ಚಲು ಕೊಯ್ದಿದ್ದಾರೆ, ಹರಕೆ ಗೂಳಿಯ ಮೇಲೆ ಅಮಾನುಷ ಹಲ್ಲೆ ಮಾಡಿದ್ದಾರೆ. ಈ ಪ್ರಕರಣಗಳು ಗೋವನ್ನು ಪೂಜಿಸುವ ಹಿಂದೂಗಳ ಭಾವನೆ ಧಕ್ಕೆ ಮಾಡಿ, ನೋವು ಉಂಟು ಮಾಡುವ ಉದ್ದೇಶದ ಪೂರ್ವಯೋಜಿತ ಕೃತ್ಯ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು, ಕೃತ್ಯದ ಹಿಂದಿರುವ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸಬೇಕು, ಇಂತಹ ಪ್ರಕರಣಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು' ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, 'ನಾವು ಹೆತ್ತ ತಾಯಿ ಹಾಗೂ ಹಸುವಿನ ಹಾಲು ಕುಡಿದು ಬೆಳೆದವರು. ಗೋವು ನಮಗೆ ತಾಯಿ ಸಮಾನ, ಗೋವುಗಳನ್ನು ತಾಯಿಯಂತೇ ಗೌರವಿಸುವ ಸಂಸ್ಕೃತಿ ನಮ್ಮದು. ಗೋವುಗಳ ಬಗ್ಗೆ ಪೂಜ್ಯ ಭಾವನೆ ಹೊಂದಿರುವ ನಮಗೆ ಗೋವುಗಳ ಮೇಲಿನ ಹಲ್ಲೆ ಸಹಿಸಲು ಸಾಧ್ಯವಿಲ್ಲ. ಗೋವುಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಕೊಲೆ ಯತ್ನದ ಸೆಕ್ಷನ್ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು' ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿವಿಧ ಸಂಘಟನೆಗಳ ಮುಖಂಡರಾದ ಜಿ.ಕೆ.ಶ್ರೀನಿವಾಸ್, ನಾಗೇಂದ್ರಪ್ರಸಾದ್, ಜಿ.ಎಸ್.ಬಸವರಾಜು, ಸಿದ್ದೇಶ್, ಉಮೇಶ್, ಭಾಸ್ಕರಾಚಾರ್, ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್, ಬ್ಯಾಟರಂಗೇಗೌಡ, ಟಿ.ಹೆಚ್.ಹನುಮಂತರಾಜು, ಸಂದೀಪ್ ಗೌಡ, ಭೈರಣ್ಣ, ವಿಷ್ಣುವರ್ಧನ್, ಸತ್ಯಮಂಗಲ ಜಗದೀಶ್, ಚೇತನ್, ಧನುಷ್, ಬನಶಂಕರಿ ಬಾಬು, ಜ್ಯೋತಿ ತಿಪ್ಪೇಸ್ವಾಮಿ, ರಾಮಚಂದ್ರರಾವ್, ವೆಂಕಟೇಶಾಚಾರ್, ಶಬ್ಬೀರ್ ಅಹ್ಮದ್, ಹನುಮಂತರಾಜು, ಪ್ರಮೋದ್ ಗೌಡ ಮೊದಲಾದವರು ಭಾಗವಹಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications