ರೋಹಿತ್ ಚಕ್ರತೀರ್ಥರಿಂದ ಗಡೀಪಾರು ಮಾಡುವಂಥ ಅಪರಾಧ ಆಗಿಲ್ಲ: ಗೃಹ ಸಚಿವ ಅರಗ ಜ್ಞಾನೇಂದ್ರ
ತುಮಕೂರು, ಜೂ. 1: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥರವರನ್ನು ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಅಷ್ಟಕ್ಕೂ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಬುಧವಾರ ಪ್ರಶ್ನಿಸಿದರು.
ನಗರದಲ್ಲಿ ಜಿಪಂ ಕೆಡಿಪಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗಡಿಪಾರು ಮಾಡಬೇಕೆಂದರೆ ಅದಕ್ಕೆ ಆದಂತಹ ನಿಯಮಾವಳಿಗಳಿವೆ. ಈ ರೀತಿ ಮಾತನಾಡುವವರಿಗೆ ಆ ನಿಯಮಾವಳಿಗಳ ಬಗ್ಗೆ ಗೊತ್ತಿಲ್ಲ. ರೋಹಿತ್ ಚಕ್ರತೀರ್ಥ ಗಡಿಪಾರು ಆಗುವಂತಹ ಅಪರಾಧ ಏನು ಮಾಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರೋ ಏನೋ ಹೇಳುತ್ತಾರೆ ಎಂದು ಅದನ್ನೆಲ್ಲ ನಾವು ಕೇಳಲು ಸಾಧ್ಯವಿಲ್ಲ" ಎಂದು ಹೇಳಿದರು.
ಬಸವಣ್ಣನ ಪಠ್ಯ ತಿರುಚಲಾಗಿದೆ ಎಂದು ಸ್ವಾಮೀಜಿಯವರು ಸಿಟ್ಟಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಶಿಕ್ಷಣ ಸಚಿವರು ಆ ಬಗ್ಗೆ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ಸ್ವಾಮೀಜಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
ಈ ಘಟನೆ 2017 ರಲ್ಲಿ ಆಗಿರುವಂತಹದ್ದು. ಈಗಾಗಲೇ ಆ ಬಗ್ಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೆ ಬಿ ರಿಪೋರ್ಟ್ ಕೂಡ ಹಾಕಲಾಗಿದೆ. ಹೀಗಿದ್ದರೂ ವಿನಾ ಕಾರಣ ಈಗ ಆ ಘಟನೆಗಳ ಬಗ್ಗೆ ಇಲ್ಲಸಲ್ಲದನ್ನು ಎಬ್ಬಿಸುತ್ತಿದ್ದಾರೆ, ಚರ್ಚೆಯಾಗುವಂತೆ ಮಾಡುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾತ್ರಿ ರಾಜ್ಯದ ಜಿಎಸ್ಟಿ ಪಾಲನ್ನು ರಾಜ್ಯ ಸರ್ಕಾರಕ್ಕೆ ಜಮಾ ಮಾಡಿದೆ. ನಮ್ಮ ರಾಜ್ಯದ ಜಿ.ಎಸ್.ಟಿ ಪಾಲನ್ನು ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸಾಹಿತ್ಯ ಹಿಂಪಡೆಯಲು ಪತ್ರ ಬರೆಯುವುದು ಸರಿಯಲ್ಲ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, "ಕುವೆಂಪು ಗೀತೆಗಳನ್ನು ನಾಡಗೀತೆಗಳನ್ನಾಗಿ ಮಾಡಿದ್ದೇ ಬಿಜೆಪಿ ಸರ್ಕಾರ. ಪ್ರತಿಪಕ್ಷ ನಾಯಕರು ಹಳೆಯ ವಿಚಾರಗಳನ್ನು ಹಿಡಿದು ನೇತಾಡುತ್ತಿದ್ದಾರೆ. ಪಠ್ಯ ಪುಸ್ತಕದಲ್ಲಿ ಏನಾದರೂ ತಪ್ಪುಗಳಿದ್ದರೇ ಹೇಳಿ ಅದನ್ನು ಸರಿಪಡಿಸುತ್ತೇವೆ. ಮುಖ್ಯಮಂತ್ರಿ ಕೂಡಾ ಇದೇ ಭರವಸೆಯನ್ನು ನೀಡಿದ್ದಾರೆ. ರಾಷ್ಟ್ರಕವಿ ಕುವೆಂಪುರವರಿಗೆ ನಾವು ಯಾವುದೇ ರೀತಿಯ ಅವಮಾನ ಮಾಡಿಲ್ಲ. ಸಾಹಿತಿಗಳು ತಮ್ಮ ಸಾಹಿತ್ಯವನ್ನು ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆಯುವುದು ಸರಿಯಲ್ಲ. ಅದರ ಬದಲು ಏನು ಸರಿಮಾಡಬೇಕು ಎಂದು ಸಲಹೆ ಕೊಡಲಿ" ಎಂದು ತಿಳಿಸಿದ್ದಾರೆ.

ಕೆಲ ಲೇಖಕರು ಪತ್ರಕ್ಕೆ ಪ್ರತಿಕ್ರಿಯೆ
ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪಸಿಂಹ, ರೋಹಿತ್ ಚಕ್ರತೀರ್ಥ ಅವರಿಂದ ಕುವೆಂಪು ಮತ್ತು ನಾಡಗೀತೆಗೆ ಅವಮಾನವಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.
ಪಠ್ಯದಿಂದ ತಮ್ಮ ಅಧ್ಯಾಯ ಕೈ ಬಿಡಬೇಕು ಎಂದು ಕೆಲ ಲೇಖಕರು ಪತ್ರಗಳನ್ನು ಬರೆದಿರುವ ವಿಚಾರದ ಬಗ್ಗೆ ಸಂಸದ ಪ್ರತಾಪಸಿಂಹ ಮಾತನಾಡಿ, "ಮೊದಲು ಭಗತ್ ಸಿಂಗ್ ನಾರಾಯಣ್ ಗುರು ವಿಚಾರವಾಗಿ ಚರ್ಚೆ ನಡೆಯಲಿ. ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದರೂ ಬರಲಿಲ್ಲ. ಇವರು ವಿಚಾರ ಹೀನರಾಗಿಲ್ಲದಿದ್ದರೆ ಚರ್ಚೆಗೆ ಬರುತ್ತಿದ್ದರು. ರಾಷ್ಟ್ರಕವಿ ಕುವೆಂಪು ಅವರಿಗೆ ಅತಿ ಹೆಚ್ಚು ಗೌರವ ಕೊಟ್ಟಿರುವುದು ಬಿಜೆಪಿ. ಸದಾನಂದಗೌಡರು ಸಿಎಂ ಆಗಿದ್ದಾಗ ನಾಡಗೀತೆ ಆಯ್ತು. ಮೋದಿ ಅಧಿಕಾರಕ್ಕೆ ಬಂದಾಗ ಪ್ರಶಸ್ತಿ ವಾಪಸ್ಸು ನೀಡಿದರು. ಇದೀಗ ಪಠ್ಯದ ಲೇಖನ ವಾಪಸ್ಸಿಗೆ ಪತ್ರ ಬರೆಯುತ್ತಿದ್ದಾರೆ. ಇದು ಕಾಂಗ್ರೆಸ್ ಅವರಿಂದ ಉಪಕೃತರಾದವರ ಕೆಲವರ ನಾಟಕ. ಕೆಲವರು ಕೈ ಬಿಟ್ಟ ಮೇಲೆ ನಮ್ಮ ಪಠ್ಯ ಕೈ ಬಿಡಿ ಅಂತಿದ್ದಾರೆ. ದೇವನೂರು ಅವರ ಪಠ್ಯವನ್ನು ಹಿಂದೆ ಯುವಕರು ತುಂಬಾ ಓದಿದ್ದಾರೆ. ಕಳೆದ 15 ವರ್ಷದಿಂದ ಇವರ ಸಾಹಿತ್ಯ ಕೃಷಿ ನಿಂತು ಹೋಗಿದೆ. ಕಾಂಗ್ರೆಸ್ ಪರ ನಿಲ್ಲಲು ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡ್ತಿದ್ದಾರೆ. ಅವರೆಲ್ಲಾ ಅದ್ಬುತ ಸಾಹಿತಿಗಳು ಅಂದುಕೊಳ್ಳುವುದು ಬೇಡ ಎಂದರು.

1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಭವನ
ತುಮಕೂರು ನಗರದ ಹೊರವಲಯದ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ. ದೇವರಾಜ ಅರಸು ಭವನ ನೂತನ ಕಟ್ಟಡವನ್ನು ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇವರಾಜ ಅರಸು ಭವನ ಹಿಂದುಳಿದ ವರ್ಗದ ಇಲಾಖೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಭವನವನ್ನು ಇಂದು ಉದ್ಘಾಟನೆ ಮಾಡಿದ್ದೇನೆ ಎಂದರು.

ಹಿಂದುಳಿದ ವರ್ಗದವರನ್ನು ಮೇಲೆತ್ತುವ ಆಶಯವನ್ನು ಸಾಕಾರಗೊಳಿಸಲಿ
ನಗರದಲ್ಲಿ ಜಿಪಂ ಕೆಡಿಪಿ ಸಭೆಗೂ ಮುನ್ನ ಕ್ಯಾತ್ಸಂದ್ರದ ಮೈದಾಳ ರಸ್ತೆಯ (ಬಸವಾಪಟ್ಟಣ)ಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿ. ದೇವರಾಜ ಅರಸು ಭವನ ಉದ್ಘಾಟಿಸಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ ಅವರು, ಬಿಸಿಎಂ ಇಲಾಖೆಯಿಂದ ಹಿಂದುಳಿದ ವರ್ಗದ ಜನರನ್ನು ಮೇಲೆತ್ತುವ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದೆ. ಇಂತಹ ಭವನಗಳನ್ನು ನಿರ್ಮಾಣ ಮಾಡುವ ಮೂಲಕ ಹಿಂದುಳಿದ ವರ್ಗದ ಜನರಿಗೆ ಬೇಕಾಗಿರುವ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುವ ಕೆಲಸ ನಡೆಯುತ್ತಿದೆ ಎಂದರು.
ಈ ಭವನದ ಪಕ್ಕದಲ್ಲೇ ಬಿಸಿಎಂ ಹಾಸ್ಟೆಲ್ ಸಹ ಇದೆ. ಇದರಲ್ಲಿ ಹಿಂದುಳಿದ ವರ್ಗದ ಮಕ್ಕಳು, ದಲಿತ ಸಮುದಾಯಕ್ಕೆ ಸೇರಿದ ಮಕ್ಕಳು ಎಲ್ಲರೂ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ ಎಂದರು. ಮನುಷ್ಯನ ಜೀವನದಲ್ಲಿ ಶಿಕ್ಷಣ ಬಹಳ ಪ್ರಮುಖವಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ಕೊಡುವ ಕೆಲಸವನ್ನು ಇಲಾಖೆ ಮಾಡುತ್ತಿದೆ ಎಂದ ಅವರು, ದೇವರಾಜ ಅರಸು ಭವನ ಹಿಂದುಳಿದ ವರ್ಗದವರನ್ನು ಮೇಲೆತ್ತುವ ಆಶಯವನ್ನು ಸಾಕಾರಗೊಳಿಸಲಿ ಎಂದು ಆಶಿಸುತ್ತೇನೆ ಎಂದರು.
(ಒನ್ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications