ತುಮಕೂರು ಬಳಿ ಬಸ್ ನಲ್ಲಿ ಸಾಗಿಸುತ್ತಿದ್ದ 3 ಕೋಟಿ ರೂ. ಜಪ್ತಿ
Recommended Video
ತುಮಕೂರು, ಮೇ 7: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಣದ ಹರಿವು ನಿಂತಿಲ್ಲ. ಭಾನುವಾರ ತಡ ರಾತ್ರಿ 1.30 ಸುಮಾರಿಗೆ ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 3 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್ ನಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಈ ಸಂಬಂಧ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಸ್ ನಿಲ್ಲಿಸಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚುನಾವಣಾ ಆಯೋಗ ವಶಪಡಿಸಿಕೊಂಡ ಹಣ, ಮದ್ಯದ ಮಾಹಿತಿ ಇಲ್ಲಿದೆ
ಈ ಸಂಬಂಧ ಬಸ್ ನಲ್ಲಿ ಇದ್ದವರನ್ನು ವಿಚಾರಣೆ ಮಾಡಲಾಗಿದೆ. ಆಗ ಅವರೆಲ್ಲರೂ ಈ ಹಣ ನಮ್ಮದಲ್ಲ ಎಂದಿದ್ದಾರೆ. ಹೀಗಾಗಿ ಹಣ ಯಾರಿಗೆ ಸೇರಿದ್ದು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಜನರಿಗೆ ಹಂಚಲು ಹಣವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವುದು ಮಾಮೂಲಿ. ಇದು ಕೂಡ ಅಭ್ಯರ್ಥಿಯೊಬ್ಬರಿಗೆ ಸೇರಿದ ಹಣವಾಗಿರಬಹುದು ಮತ್ತು ಜನರಿಗೆ ಹಂಚಲು ಕೊಂಡೊಯ್ಯುತ್ತಿರಬಹುದು ಎಂದುಕೊಳ್ಳಲಾಗಿದೆ.