ತುಮಕೂರಿಗೂ ಹಬ್ಬಿದ ಸಾವರ್ಕರ್ ಪೋಟೋ ವಿವಾದ
ತುಮಕೂರು, ಆಗಸ್ಟ್ 16: ತುಮಕೂರು ನಗರದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಜನರ ಗುಂಪೊಂದು ಹರಿದಿದ್ದು, ಶಿವಮೊಗ್ಗ, ಬೆಂಗಳೂರು ಮೆಟ್ರೋ ನಂತರ ಈಗ ತುಮಕೂರಿಗೂ ಫೊಟೋ ವಿವಾದ ಹಬ್ಬಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತುಮಕೂರಿನ ಬಿಜಿಎಸ್ ವೃತ್ತದಿಂದ ಬಸ್ ನಿಲ್ದಾಣದ ಕಡೆ ಹೋಗುವಾಗ ಎಂಪ್ರೆಸ್ ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಸಾವರ್ಕರ್ ಬ್ಯಾನರ್ ಅನ್ನು ಹರಿದು ಹಾಕಲಾಗಿದ್ದು ವಿವಾದ ಈಗ ತುಮಕೂರಿಗೂ ಹಬ್ಬಿದಂತೆ ಆಗಿದೆ.
ಸೋಮವಾರ ಸ್ವಾತಂತ್ರ್ಯ ದಿನಾಚರಣೆ ಮುಗಿದ ಬಳಿಕ ರಾತ್ರಿ ಬ್ಯಾನರ್ ಅನ್ನು ಹರಿದು ಹಾಕಿರುವ ಘಟನೆ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ಶಾಸಕ ಜ್ಯೋತಿ ಗಣೇಶ ಅವರು ನಗರದ ವಿವಿಧೆಡೆ ಬ್ಯಾನರ್ ಹಾಕಲಾಗಿತ್ತು. ಆದರೆ ಸಾವರ್ಕರ್ ಅವರು ಇರುವ ಬ್ಯಾನರ್ಗಳನ್ನು ಮಾತ್ರ ಹರಿದು ಹಾಕಲಾಗಿದೆ. ಮೂರು ದಿನಗಳ ಹಿಂದೆ ಹಾಕಿದ್ದ ಬ್ಯಾನರ್ಗಳನ್ನು ಮಂಗಳವಾರ ನಗರದ ಪಾಲಿಕೆ ಅಧಿಕಾರಿಗಳು ತೆರವು ಮಾಡಿದ್ದಾರೆ.

ಇನ್ನೂ ಸಾವರ್ಕರ್ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳನ್ನು ಕಂಡಲ್ಲಿ ಗುಂಡು ಹೊಡೆದು ಸಾಯಿಸಬೇಕು ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಜನ ಶಾಂತಿ ನೆಮ್ಮದಿಯಿಂದ ಇದ್ದಾರೆ. ನಮ್ಮ ಜಿಲ್ಲೆ ಮತ್ತೊಂದು ಶಿವಮೊಗ್ಗ, ಕೆಜಿ ಹಳ್ಳಿ, ಡಿಜೆ ಹಳ್ಳಿಯಾಗುವುದು ಬೇಡ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ ಹಾರಿದು ಹಾಕಿರುವುದು ತಪ್ಪು. ಸಾವರ್ಕರ್ ಕಂಡರೆ ಕೆಲವರಿಗೆ ಭಯ, ಅದಕ್ಕೆ ಬ್ಯಾನರ್ ಹರಿದು ಹಾಕಲಾಗಿದೆ. ಮಂಗಳವಾರ ಬ್ಯಾನರ್ ಅನ್ನು ತೆರವು ಮಾಡಿದ ಪಾಲಿಕೆ ಅಧಿಕಾರಿಯನ್ನು ಅಮಾನತು ಮಾಡಬೇಕು. ದೇಶದ ಏಕತೆ, ಶಾಂತಿ,ನೆಮ್ಮದಿಗೆ ಧಕ್ಕೆ ತರುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
Recommended Video
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications