ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರ ಸಹಾಯಧನ ದುರುಪಯೋಗ: ತನಿಖೆಗೆ ಆಗ್ರಹಿಸಿದ ಶಾಸಕ ಡಾ.ರಂಗನಾಥ್
ತುಮಕೂರು, ಜೂನ್. 07: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಮಂಜೂರಾಗಿರುವ ಕೃಷಿ ಯಂತ್ರೋಪಕರಣ ಖರೀದಿಯ ಸಹಾಯಧನದಲ್ಲಿ ದುರುಪಯೋಗ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕೃಷಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳವಾರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಶಾಸಕ ಡಾ.ಹೆಚ್.ಡಿ.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಸಹಕಾರ ಸಂಘ ಹಾಗೂ ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು. ಈ ವೇಳೆ ಎಸ್ಸಿ, ಎಸ್ಟಿ ರೈತರ ಸಹಾಯಧನ ದುರುಪಯೋಗ ನಡೆದಿರುವ ಬಗ್ಗೆ ತನಿಖೆ ನಡೆಸುವ ಸಂಬಂಧ ಉಡಾಫೆ ಉತ್ತರ ನೀಡಿದ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರನ್ನು ಶಾಸಕ ಡಾ.ಹೆಚ್.ಡಿ.ರಂಗನಾಥ್ ಪ್ರಶ್ನಿಸಿದ್ದಾರೆ.

ಸಭೆಯಲ್ಲಿ "ಕೃಷಿ ಯಂತ್ರಧಾರೆ ಯೋಜನಡಿಯಲ್ಲಿ ಪ.ಜಾತಿ, ಪ.ಪಂಗಡ ಫಲಾನುಭವಿಗಳು ಕೃಷಿ ಯಂತ್ರೋಪಕರಣ ಖರೀದಿ ಮಾಡಲು ಸರ್ಕಾರ ಶೇ 70 ರಷ್ಟು ಸಹಾಯಧನ ನೀಡುತ್ತಿದೆ. ಆದರೆ ಖಾಸಗಿ ಕಂಪನಿ ಹಾಗೂ ಅದರ ಡೀಲರ್ಗಳು ಫಲಾನುಭವಿಗಳಿಂದ ದಾಖಲೆಗಳನ್ನು ಪಡೆದು ಕೃಷಿ ಇಲಾಖೆಗೆ ಸಲ್ಲಿಸಿ, ಸಬ್ಸಿಡಿ ಹಣವನ್ನು ನೇರವಾಗಿ ಖಾಸಗಿ ಕಂಪನಿ ತೆಗೆದುಕೊಳ್ಳುತ್ತದೆ. ಆದರೆ ಕಂಪನಿಯವರು ಹಾಗೂ ಅದರ ಡೀಲರ್ ಫಲಾನುಭವಿಗಳಿಗೆ ಯಂತ್ರೋಪಕರಣಗಳನ್ನು ಮಾರಾಟ ಮಾಡಿದ್ದೇವೆ, ಸಬ್ಸಿಡಿ ಹಣವನ್ನು ನೀಡದೇ ಅಮಾಯಕ ಎಸ್ಸಿಎಸ್ಟಿ ಪಲಾನುಭವಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ" ಎಂದು ಹುತ್ರಿದುರ್ಗ ವಿಎಸ್ಎಸ್ಎಸ್ ಅಧ್ಯಕ್ಷ ಬೋರೇಗೌಡ, ಉಪಾಧ್ಯಕ್ಷ ಹಾಲುವಾಗಿಲು ಸ್ವಾಮಿ ಆರೋಪಿಸಿದ್ದಾರೆ.
ವಿಎಸ್ಎಸ್ಎನ್ ಅಧ್ಯಕ್ಷರ ಅರೋಪ ಸಂಬಂಧ ಶಾಸಕ ಡಾ.ಹೆಚ್.ಡಿ.ರಂಗನಾಥ್, ಜಂಟಿ ನಿರ್ದೇಶಕ ಎಚ್.ರವಿ ಅವರಿಗೆ ಕರೆ ಮಾಡಿ ತಾಲೂಕಿನ ಹುತ್ರಿದುರ್ಗ ಹೋಬಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಕೃಷಿ ಉಪಕರಣ ಖರೀದಿಯ ಸಬ್ಸಿಡಿ ಹಣ ದುರುಪಯೋಗ ಸಂಬಂಧ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಆದರೆ, ಶಾಸಕ ಸೂಚನೆಯನ್ನು ಲಘುವಾಗಿ ತಗೆದುಕೊಂಡ ಜಂಟಿ ನಿರ್ದೇಶಕ ಹೆಚ್.ರವಿ ಯಾವುದೇ ಅವ್ಯವಹಾರ ನಡೆದಿಲ್ಲ, ಇದು ನಿಮ್ಮ ಕಲ್ಪನೆಯಾಗಿದೆ, ತನಿಖೆ ನಡೆಸಲು ಸಿಬ್ಬಂದಿಗಳ ಕೊರತೆ ಇದೆ ಎಂದು ಉದ್ಧಟತನ ತೋರಿಸಿದ್ದಾರೆ.

ಅಧಿಕಾರಿಯ ಮಾತಿನಿಂದ ಕೋಪಗೊಂಡ ಶಾಸಕರು ತನಿಖೆ ನಡೆಸಿ ಅಮಾಯಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ನ್ಯಾಯ ದೊರಕಿಸಿ ಕೊಡಿ ಎಂದರೇ ಸಿಬ್ಬಂದಿ ಕೊರತೆ ಇದೆ ಎಂದು ನೆಪ ಹೇಳುತ್ತೀರ, ನಿಮ್ಮ ಉತ್ತರ ನೋಡಿದರೇ ಇದರಲ್ಲಿ ನೀವು ಪಾಲ್ಗೊಂಡಿರಬಹುದು ಅನಿಸುತ್ತಿದೆ ಎಂದು ತರಾಟೆ ತೆಗೆದುಕೊಂಡಿದ್ದು, ನಿಮ್ಮ ವಿರುದ್ದ ಕೃಷಿ ಸಚಿವರಿಗೆ ಪತ್ರ ಬರೆಯುವುದ್ದಾಗಿ ಎಚ್ಚರಿಕೆ ನೀಡಿದ್ದಾರೆ.
ಜಂಟಿ ನಿರ್ದೇಶಕ ಎಚ್.ರವಿ ಅವರ ಉಡಾಪೆ ಉತ್ತರ ಸಂಬಂಧ ರಾಜ್ಯ ಕೃಷಿ ನಿರ್ದೇಶಕ ಪುಟ್ಟರಾಜು ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕರು, ಜಂಟಿ ನಿರ್ದೇಶಕರ ಉದ್ಧಟತನದಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಅವರು ಸರ್ಕಾರದ ಹಣ ಉಳಿಸಲು ಬಂದಿದ್ದಾರೋ ಅಥವಾ ಸರ್ಕಾರದ ಹಣ ವ್ಯಯ ಮಾಡಲು ಬಂದಿದ್ದಾರೋ ಗೊತ್ತಿಲ್ಲ ಅಂತಹ ಅಧಿಕಾರಿ ಜಿಲ್ಲೆಯಲ್ಲಿ ಇರುವುದು ಸೂಕ್ತವಲ್ಲ ಹೀಗಾಗಿ ಅವರ ವಿರುದ್ದ ಕ್ರಮಕೈಗೊಂಡು, ಅವ್ಯವಹಾರ ಸಂಬಂಧ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications