ಶಾಲಾ ವಾಹನಗಳ ವಿರುದ್ಧ ಆರ್ ಟಿ ಓ ಕ್ರಮ: 212 ದೂರು ದಾಖಲು
ತುಮಕೂರು, ಫೆಬ್ರವರಿ 09 : ತುಮಕೂರು ನಗರದಲ್ಲಿ ಶಾಲಾ ಕಾಲೇಜು ವಾಹನಗಳು ನಿಯಮ ಉಲ್ಲಂಘಿಸಿರುವ ಬಗ್ಗೆ2014 ರಿಂದ ಮಾರ್ಚ್ ಅಂತ್ಯದ ವರೆಗೆ ಒಟ್ಟು 212 ಪ್ರಕರಣಗಳನ್ನು ದಾಖಲಿಸಿ1,76,800 ದಂಡವನ್ನು ಸಂಗ್ರಹಿಸಲಾಗಿದೆ ಎಂದು ತುಮಕೂರಿನ ಪ್ರಾದೇಶಿಕ ಸಾರಿಗೆ ಇಲಾಖೆ ಮಾಹಿತಿ ನೀಡಿದೆ.
ತುಮಕೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಆರ್.ವಿಶ್ವನಾಥನ್ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ 2000 ನೇ ಇಸವಿಯಿಂದ ಮಾಹಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರೂ ಇಲಾಖೆಯು ಕೇವಲ 2014 ರಿಂದ ಮಾಹಿತಿ ನೀಡಿದೆ. ಅದಕ್ಕೂ ಮೊದಲು ಇಲಾಖೆಯು ಯಾವುದೇ ಕ್ರಮ ಕೈಗೊಂಡಿಲ್ಲವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ತುಮಕೂರು ನಗರದಲ್ಲಿ ಒಟ್ಟು 315 ಅಧಿಕೃತ ಶಾಲಾ ವಾಹನಗಳಿವೆ ಎಂದು ಉತ್ತರಿಸಿದ್ದಾರೆ.
ನಿಯಮದ ವಿವರ: ಶಾಲಾ ಕಾಲೇಜು ವಾಹನಗಳಿಗೆ ವಿಧಿಸಲಾಗಿರುವ ನಿಯಮಾವಳಿಗಳ ಬಗ್ಗೆ ವಿಶ್ವನಾಥನ್ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಸಾರಿಗೆ ಅಧಿಕಾರಿಗಳು, ವಾಹನವು ನೋಂದಣಿ ದಿನಾಂಕದಿಂದ 15 ವರ್ಷ ಮೀರಿರಬಾರದು. ಅನುಮೋದಿತ ಸ್ಪೀಡ್ ಗವರ್ನರ್ ಅಳವಡಿಸಿದ್ದು, ವೇಗಮಿತಿ ಪ್ರತಿ ಗಂಟೆಗೆ 40 ಕಿ.ಮೀಗೆ ನಿಯಂತ್ರಿತವಾಗಿರಬೇಕು.

ವಾಹನಕ್ಕೆ ಹೆದ್ದಾರಿ ಹಳದಿ ಬಣ್ಣ ಬಳಿದಿದ್ದು, ಹೊರಕವಚ ಮಧ್ಯದಲ್ಲಿ ಹಸಿರು ಬಣ್ಣದ ಪಟ್ಟಿ ಹಾಕಿರಬೇಕು. ವಾಹನದ ಹೊರ ಭಾಗದ ನಾಲ್ಕು ಭಾಗಗಳಲ್ಲಿ ಶಾಲಾ ವಾಹನ ಎಂದು ಬರೆಸಿರಬೇಕು ಟಿಂಟೆಡ್ ಗ್ಲಾಸ್ ಹೊಂದರಬಾರದು ಎಂದು ನಿಯಮದಲ್ಲಿದೆ.
ಮಾರುತಿ ವ್ಯಾನ್ ಅಕ್ರಮ ಬಳಕೆ, ಮೂರು ಪ್ರಕರಣ ಪತ್ತೆ: ವೈಟ್ ಬೋರ್ಡ್ ಇರುವ ಆರುತಿ ವ್ಯಾನ್ ಇತ್ಯಾದಿ ವಾಹನಗಳಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಅಕ್ರಮವಾಗಿ ಕರೆದೊಯ್ಯುವ ೩ ಪ್ರಕರಣಗಳು ೨೦೧೬-೧೭ ನೇ ಸಾಲಿನಲ್ಲಿ ಪತ್ತೆಯಾಗಿದ್ದು, ಒಟ್ಟು 14,700 ರೂ. ದಂಡ ವಿಧಿಸಲಾಗಿದೆ. ಮತ್ತೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಅಧಿಕಾರಿಗಳು ವಿಶ್ವನಾಥನ್ ಅವರಿಗೆ ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications