ಬಹುಅಂಗಾಂಗ ವೈಫಲ್ಯ; ಶಿರಾ ಶಾಸಕ ಬಿ.ಸತ್ಯನಾರಾಯಣ ನಿಧನ

ತುಮಕೂರು, ಆಗಸ್ಟ್‌ 04: ಶಿರಾ ಶಾಸಕ ಹಾಗೂ ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಬಿ. ಸತ್ಯನಾರಾಯಣ ಅವರು ಬಹುಅಂಗಾಂಗ ವೈಫಲ್ಯದಿಂದ ಮಂಗಳವಾರ, ಜುಲೈ 04ರ ರಾತ್ರಿ 10.45ಕ್ಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಈಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸತ್ಯನಾರಾಯಣ ಅವರಿಗೆ ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರ ಇದ್ದಾರೆ.

Tumakuru Shira Mla B Sathyanarayana Passed Away

ಸತ್ಯನಾರಾಯಣ ಅವರ ನಿಧನಕ್ಕೆ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. "ಶಾಸಕ ಹಾಗೂ ನನ್ನ ಮಿತ್ರರಾದ ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು. ಅವರಿಲ್ಲದ ದಿನಗಳನ್ನು ನೆನೆಯಲು ಕಷ್ಟವಾಗುತ್ತದೆ" ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+