ಇಂದು ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ; ಮಠಕ್ಕೆ ಹರಿದುಬಂದ ಭಕ್ತಸಾಗರ
ತುಮಕೂರು, ಜನವರಿ 19: "ನಡೆದಾಡುವ ದೇವರು" ಎಂದೇ ಕರೆಸಿಕೊಂಡಿರುವ ಸಿದ್ಧಗಂಗಾ ಮಠಾಧೀಶರಾದ ಡಾ.ಶಿವಕುಮಾರ ಸ್ವಾಮೀಜಿಗಳ ಮೊದಲ ವರ್ಷದ ಪುಣ್ಯ ಸ್ಮರಣೆಯು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಇಂದು ನೆರವೇರಿತು.
ಇಂದು ಶ್ರೀಗಳ ಮೊದಲ ವರ್ಷದ ಪುಣ್ಯಾರಾಧನೆಯು ಬೃಹತ್ ಮಟ್ಟದಲ್ಲಿ ನಡೆದಿದ್ದು, ನೂರ ಹನ್ನೊಂದು ವರ್ಷಗಳ ಸಾರ್ಥಕ ಬದುಕು ಪೂರೈಸಿ, ವರ್ಷದ ಹಿಂದೆ ಶಿವೈಕ್ಯರಾದ ಶ್ರೀಗಳಿಗೆ ಅಸಂಖ್ಯ ಭಕ್ತರು ನಮನ ಸಲ್ಲಿಸಿದರು.
ಅನ್ನದಾಸೋಹದ ಮಹತ್ವ ಸಾರಿದ ಶ್ರೀಗಳ ಗೌರವಾರ್ಥವಾಗಿ ಹಲವೆಡೆ ಅನ್ನ ದಾಸೋಹ ಏರ್ಪಡಿಸಲಾಗಿತ್ತು. ಸ್ಮರಣಾ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಮಠದ ಆವರಣದಲ್ಲಿ ಏಳು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ದೂರದ ಊರುಗಳಿಂದ ಶನಿವಾರವೇ ಭಕ್ತರು ಬಂದಿದ್ದು, ಮಠದ ಪ್ರಾಂಗಣದಲ್ಲಿ ಬೆಳಿಗ್ಗೆ ಸ್ವಾಮೀಜಿ ಭಾವಚಿತ್ರದ ಮೆರವಣಿಗೆ ನಡೆಯಿತು.

ಗದ್ದುಗೆ ಪೂಜಾ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀಗಳು ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಮತ್ತು ರಾಜಕೀಯ ಮುಖಂಡರು, ಸಾವಿರಾರು ಭಕ್ತರು ಭಾಗಿಯಾಗಿದ್ದರು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications