ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿ ತಾಳ್ಮೆ ಅಗತ್ಯ: ವೈದ್ಯರು

|
Google Oneindia Kannada News

ತುಮಕೂರು, ಜನವರಿ 03: ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಕಾಣಿಸಿಕೊಂಡಿದ್ದ ಸೋಂಕು ನಿಧಾನವಾಗಿ ನಿವಾರಣೆ ಆಗುತ್ತಿದೆ ಎಂದು ಅವರ ಚೆನ್ನೈನಿಂದ ಬಂದಿರುವ ವಿಶೇಷ ವೈದ್ಯ ಸುಭ್ರ ಅವರು ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ: ಡಿಸಿಎಂ ಪರಮೇಶ್ವರ್ ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ: ಡಿಸಿಎಂ ಪರಮೇಶ್ವರ್

ಶ್ರೀಗಳನ್ನು ಮಠದ ಆಸ್ಪತ್ರೆಯಲ್ಲಿ ಇಂದು ತಪಾಸಣೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಗಳು ಚಿಕಿತ್ಸೆಗಳಿಗೆ ಸ್ಪಂದಿಸುತ್ತಿದ್ದಾರೆ, ಅವರ ಆರೋಗ್ಯದಲ್ಲಿ ಚೇತರಿಕೆ ಇದೆ ಎಂದು ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಭೇಟಿಗೆ ತೆರಳಿದ್ದ ಯಡಿಯೂರಪ್ಪನವರಿಗೆ ಕಾದಿತ್ತು ಅಚ್ಚರಿ!ಸಿದ್ದಗಂಗಾ ಶ್ರೀಗಳ ಭೇಟಿಗೆ ತೆರಳಿದ್ದ ಯಡಿಯೂರಪ್ಪನವರಿಗೆ ಕಾದಿತ್ತು ಅಚ್ಚರಿ!

ಶ್ರೀಗಳ ಆರೋಗ್ಯದ ವಿಚಾರದಲ್ಲಿ ಎಲ್ಲರಿಗೂ ತಾಳ್ಮೆಯ ಅಗತ್ಯವಿದೆ. ಶ್ರೀಗಳಿಗೆ ವಯಸ್ಸು ಹೆಚ್ಚಾಗಿರುವ ಕಾರಣ ಚೇತರಿಕೆ ಶೀಘ್ರವಾಗಿ ಕಾಣಿಸದು ಎಂದು ಅವರು ಹೇಳಿದ್ದಾರೆ.

Siddaganaga Seer health condition getting better: Doctor

ಶ್ರೀಗಳ ಆಪ್ತ ವೈದ್ಯರು ಸಮಯೋಚಿತ ಚಿಕಿತ್ಸೆ ನೀಡುತ್ತಲೇ ಬರುತ್ತಿದ್ದಾರೆ. ಅವರಿಗೆ ಹೆಚ್ಚಿನ ಚಿಕಿತ್ಸೆಗೆ ಚೆನ್ನೈಗೆ ರವಾನಿಸುವ ಅಗತ್ಯ ಇಲ್ಲ ಎಂದು ಹೇಳಿದ ಅವರು, ಅವರಿಗೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುವುದು ಅಗತ್ಯ ಬಿದ್ದರಷ್ಟೆ ಚೆನ್ನೈಗೆ ಕಳುಹಿಸಲಾಗುವುದು ಎಂದರು.

ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಈಗ ಹೇಗಿದೆ? ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಈಗ ಹೇಗಿದೆ?

ಶ್ರೀಗಳ ಆತ್ಮಸ್ಥರ್ಯ ಅದ್ಭುತವಾಗಿದೆ, ಹಾಗಾಗಿ ನಮಗೆ ಚಿಕಿತ್ಸೆ ನೀಡುವುದು ಸುಲಭವಾಗುತ್ತಿದೆ. ಶ್ರೀಗಳು ಚಿಕಿತ್ಸೆಗೆ ತುಂಬ ಧನಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರು ಹೇಳಿದರು.

English summary
Doctor Sudhra came from Chennai to treat Siddaganga Seer today. He told that Seer condition was getting better. he his recovering from lungs infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X