ಪ್ರತ್ಯೇಕ ಲಿಂಗಾಯತ ಧರ್ಮ ಶಿಫಾರಸು ಸ್ವಾಗತಿಸಿದ ಸಿದ್ದಗಂಗಾ ಮಠ
ತುಮಕೂರು, ಮಾರ್ಚ್ 20: ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯ ನಂತರ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದೆ. ಸರಕಾರದ ಈ ತೀರ್ಮಾನವನ್ನು ತುಮಕೂರಿನ ಸಿದ್ದಗಂಗಾ ಮಠ ಸ್ವಾಗತಿಸಿದೆ. ವೀರಶೈವ ಮತ್ತು ಲಿಂಗಾಯತ ಇಬ್ಬರನ್ನು ಸೇರಿಸಿ ಶಿಫಾರಸು ಮಾಡಿರುವುದು ಸ್ವಾಗತಾರ್ಹ ಎಂದು ಮಠ ಹೇಳಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಸರಕಾರದ ತೀರ್ಮಾನದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಜೈನ ಧರ್ಮದವರೂ ಕೆಲವು ಹಿಂದೂ ಧರ್ಮದ ಆಚರಣೆಗಳನ್ನು ಅನುಸರಿಸುತ್ತಿದ್ದಾರೆ. ಆದರೆ ಅವರು ಹಿಂದೂಗಳಲ್ಲ. ಇದೇ ರೀತಿ ಲಿಂಗಾಯತ ಕೂಡ," ಎಂದು ಹೇಳಿದ್ದಾರೆ.
"ಲಿಂಗಾಯತ ಧರ್ಮ ಶಿಫಾರಸು ಆರಂಭದ ಮುನ್ನಡೆ ಅಷ್ಟೆ; ಸಂಪೂರ್ಣ ಗೆಲುವಲ್ಲ"
"ಹಿಂದೂ ಧರ್ಮ ಆಳವಾಗಿ ಬೇರುಬಿಟ್ಟಿದೆ. ಲಿಂಗಾಯತ ಧರ್ಮ ಪ್ರತ್ಯೇಕವಾದ ತಕ್ಷಣ ಹಿಂದೂ ಧರ್ಮಕ್ಕೆ ಧಕ್ಕೆ ಆಗುವುದಿಲ್ಲ," ಎಂದು ಹೇಳಿದ ಅವರು, ಎಲ್ಲರನ್ನೂ ಒಳಗೊಂಡು ಪ್ರತ್ಯೇಕ ಧರ್ಮವಮಾಗಬೇಕು ಎಂಬುದು ನಮ್ಮ ಆಶಯವಾಗಿತ್ತು. ಸಚಿವ ಸಂಪುಟದ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.
ಕೆಲವು ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿರಬಹುದು, ಅದು ಅವರ ವೈಯಕ್ತಿಕ ನಿರ್ಧಾರ ಎಂದ ಸ್ವಾಮೀಜಿಗಳು, ಪ್ರತ್ಯೇಕ ಲಿಂಗಾಯತ ಧರ್ಮದಿಂದ ಅಲ್ಪಸಂಖ್ಯಾತರ ಸೌಲಭ್ಯಗಳು ಸಿಕ್ಕಿದರೆ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.