ಶಿವಕುಮಾರ ಸ್ವಾಮೀಜಿಗಳಿಗೆ ಶುಭ ಕೋರಿದ ಮೋದಿ
ತುಮಕೂರು, ಏಪ್ರಿಲ್ 01 : 109 ವರ್ಷ ತುಂಬಿದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಇನ್ನೂ ನೂರೆಂಟು ಕಾಲ ಬಾಳಲಿ ಎಂಬ ಆಶಯದೊಂದಿಗೆ ಏ.1ರಂದು ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.
ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ 109ನೇ ಹುಟ್ಟು ಹಬ್ಬದ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂಜಾನೆ 3 ಗಂಟೆಗೆ ಶ್ರೀಗಳು ಶಿವಪೂಜೆ ನೆರವೇರಿಸಿದ್ದಾರೆ. ಬೆಳಗ್ಗೆ 8.30ರ ನಂತರ ಸಾರ್ವಜನಿಕರಿಗೆ ದರ್ಶನ ನೀಡಲಿದ್ದಾರೆ. [ಲೋಕ ಜಂಗಮ: ಸಿದ್ದಗಂಗಾಶ್ರೀ ಸಾಕ್ಷ್ಯಚಿತ್ರ ಲೋಕಾರ್ಪಣೆ]

ಶ್ರೀಗಳ ಹುಟ್ಟುಹಬ್ಬವನ್ನು ಸ್ಮರಣೀಯಗೊಳಿಸಲು ಅಭಿವಂದನಾ ಸಮಿತಿ ತಯಾರಿ ಮಾಡಿಕೊಂಡಿದೆ. ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಶ್ರೀ ಮಠಕ್ಕೆ ಆಗಮಿಸಿದ್ದಾರೆ. [ನೂರೆಂಟು ವಸಂತ ಕಂಡ ತ್ರಿವಿಧ ದಾಸೋಹಿಗೆ ಕೋಟಿ ವಂದನೆ]
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
Warm birthday wishes to the venerable Sree Sree Shivakumar Swamiji, whose distinguished service & noble deeds have impacted so many lives.
— Narendra Modi (@narendramodi) April 1, 2016
ಮಠಕ್ಕೆ ಮುಖ್ಯಮಂತ್ರಿಗಳ ಭೇಟಿ : ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. [ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ]
ಚಿತ್ರಗಳು ಶ್ರೀಗಳನ್ನು ಭೇಟಿ ಮಾಡಿದ ಸಿದ್ದರಾಮಯ್ಯ
ಪದ್ಮಭೂಷಣ, ಪರಮಪೂಜ್ಯ ಡಾ. ಶ್ರೀಶ್ರೀ ಶಿವಕುಮಾರ ಸ್ವಾಮಿಜಿಗಳ 109ನೇ ಜನ್ಮದಿನದ ಪ್ರಯುಕ್ತ ಅವರಿಗೆ ಶುಭ ಹಾರೈಸಿ ಗೌರವ ಸಲ್ಲಿಸಿದೆ. pic.twitter.com/gq04gSbKPZ
— CM of Karnataka (@CMofKarnataka) April 1, 2016
ಸದ್ದಿಲ್ಲದೇ ಸಾಧನೆ ಮಾಡಿದರು : 01.04.1908ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು, ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಸಿದ್ಧಗಂಗಾ ಕ್ಷೇತ್ರ ಪ್ರವೇಶಿಸಿದರು. ಅಂದಿನಿಂದ ಸಿದ್ಧಗಂಗಾ ಮಠಕ್ಕೆ ಹೊಸ ಬೆಳಕು ಮೂಡಿಬಂತು.
ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಅಣತಿಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು. ನಂತರ ಸಿದ್ಧಗಂಗಾ ಕ್ಷೇತ್ರದ ಸ್ವರೂಪ ಆಮೂಲಾಗ್ರವಾಗಿ ಬದಲಾವಣೆಯಾಯಿತು. [ಶ್ರೀಗಳ ಬಗ್ಗೆ ಓದಿ]
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications